ಕ್ರೀಡೆ

ಕೆಲವೊಮ್ಮೆ ಹೆಚ್ಚು ಹಣ ಬಂದರೆ ದುರಹಂಕಾರವೂ ಬರುತ್ತದೆ: ಭಾರತದ ಕ್ರಿಕೆಟಿಗರ ವಿರುದ್ಧ ಕಪಿಲ್ ದೇವ್ ಕಿಡಿ

ನವದೆಹಲಿ : ಕೆಲವೊಮ್ಮೆ ಹೆಚ್ಚು ಹಣ ಬಂದರೆ ದುರಹಂಕಾರವೂ ಬರುತ್ತದೆ. ಈ ಕ್ರಿಕೆಟಿಗರು ತಮಗೆ ಎಲ್ಲವೂ ತಿಳಿದಿದೆ ಎಂದು ಭಾವಿಸುತ್ತಾರೆ. ಸಹಾಯದ ಅಗತ್ಯವಿರುವ ಅನೇಕ ಕ್ರಿಕೆಟಿಗರು ಇದ್ದಾರೆ. ಸುನೀಲ್ ಗವಾಸ್ಕರ್ ಇರುವಾಗ ನೀವು ಏಕೆ ಮಾತನಾಡಬಾರದು? ಎಂದು ಹೇಳಿರುವ ಭಾರತದ ಮಾಜಿ ನಾಯಕ ಕಪಿಲ್ ದೇವ್ ಹಾಲಿ ಕ್ರಿಕೆಟಿಗರ ಕುರಿತು ಬೇಸರ ವ್ಯಕ್ತಪಡಿಸಿದರು. ಈ ಮೂಲಕ ಈ ಹಿಂದೆ ಆಟಗಾರರ ಅಹಂಕಾರದ ಕುರಿತಂತೆ ಹೇಳಿಕೆ ನೀಡಿದ್ದ ಇನ್ನೋರ್ವ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಮಾತಿಗೆ ಧ್ವನಿಗೂಡಿಸಿದ್ದಾರೆ.

The Weekಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಕಪಿಲ್ ದೇವ್, ಈಗಿನ ಹೆಚ್ಚಿನ ಆಟಗಾರರು ತುಂಬಾ ಆತ್ಮವಿಶ್ವಾಸ ಹೊಂದಿದ್ದಾರೆ ಎಂಬುದು ನನ್ನ ಅನಿಸಿಕೆ. ಆದರೆ ಅವರಲ್ಲಿ ನಕಾರಾತ್ಮಕ ಅಂಶವೂ ಇದೆ. ನಮಗೆ ಎಲ್ಲವೂ ತಿಳಿದಿದೆ. ನಾವು ಯಾರಿಂದಲೂ ಸಲಹೆ ಪಡೆಯಬೇಕಾಗಿಲ್ಲ ಎಂದು ಅವರು ಭಾವಿಸುತ್ತಾರೆ. ಅದಕ್ಕಿಂತ ಉತ್ತಮವಾಗಿ ಅದನ್ನು ಹೇಗೆ ಹೇಳಬೇಕೆಂದು ನನಗೆ ತಿಳಿದಿಲ್ಲ. ಅನುಭವಿ ವ್ಯಕ್ತಿ ನಿಮಗೆ ಸಹಾಯ ಮಾಡಬಹುದು ಎಂದು ನಾವು ನಂಬುತ್ತೇವೆ ಎಂದು ಹೇಳಿದರು.

ಕಳೆದ ತಿಂಗಳು ಟೀಮ್ ಇಂಡಿಯಾ ಆಸ್ಟ್ರೇಲಿಯ ವಿರುದ್ಧ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್ಶಿಪ್-2023ರ ಫೈನಲ್ ಪಂದ್ಯವನ್ನು ಸೋತ ನಂತರ ಸುನೀಲ್ ಗವಾಸ್ಕರ್ ಭಾರತ ತಂಡವನ್ನು ಟೀಕಿಸಿದ್ದರು. ರಾಹುಲ್ ದ್ರಾವಿಡ್, ಸಚಿನ್ ತೆಂಡುಲ್ಕರ್, ವಿವಿಎಸ್ ಲಕ್ಷ್ಮಣ್ ಹೊರತುಪಡಿಸಿ ಬೇರ್ಯಾವ ಆಟಗಾರನು ನನ್ನ ಬಳಿ ಸಲಹೆ ಕೇಳಲು ಬಂದಿಲ್ಲ ಎಂದು ಹೇಳಿದ್ದರು.

ಈಗಿನ ಆಟಗಾರರ ಕುರಿತು ಗವಾಸ್ಕರ್ ಹೇಳಿಕೆಯ ಬಗ್ಗೆ ಕಪಿಲ್ ದೇವ್ ಮಾತನಾಡಿದ್ದು, ನನ್ನನ್ನು ಈ ತನಕ ಯಾವುದೇ ವೇಗದ ಬೌಲರ್ ಸಲಹೆ ಕೇಳಿ ಸಂಪರ್ಕಿಸಿಲ್ಲ. ನಾನು ಗವಾಸ್ಕರ್ ರಿಂದ ಒಂದು ವಿಚಾರ ತಿಳಿದುಕೊಂಡಿದ್ದೇನೆ. ಅದೇನೆಂದರೆ, ಆಟಗಾರರಿಗೆ ಅಗತ್ಯವಿರುವ ತನಕ ಸಲಹೆ ನೀಡುವುದು ಬೇಡ. ನಿನ್ನ ಬಳಿ ಸಲಹೆ ಕೇಳುವ ತನಕ ಸಲಹೆ ನೀಡಬೇಡ ಎಂದು ಅವರು ನನಗೆ ಹೇಳಿದ್ದರು ಎಂದರು.

ಬಾರ್ಬಡೋಸ್ ನಲ್ಲಿ ಶನಿವಾರ ನಡೆದ 2ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತವು 40.1 ಓವರ್ಗಳಲ್ಲಿ 181 ರನ್ ಗೆ ಆಲೌಟಾಯಿತು. ಇಶಾನ್ ಕಿಶನ್ ಹಾಗೂ ಶುಭಮನ್ ಗಿಲ್ ಹೊರತುಪಡಿಸಿ ಹೆಚ್ಚಿನ ಎಲ್ಲ ಆಟಗಾರರು ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ಸುಮಾರು 4 ವರ್ಷಗಳ ನಂತರ ಮೊದಲ ಗೆಲುವು ದಾಖಲಿಸಿದ್ದ ವೆಸ್ಟ್ಇಂಡೀಸ್ 3 ಪಂದ್ಯಗಳ ಸರಣಿಯನ್ನು 1-1ರಿಂದ ಸಮಬಲಗೊಳಿಸಿತ್ತು.

andolanait

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

50 mins ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

58 mins ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

6 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

6 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago