ಕ್ರೀಡೆ

ಭಾರತ ವಿರುದ್ಧದ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ!

ಬೆಂಗಳೂರು : ಡಿಸೆಂಬರ್‌ 10ರಿಂದ ಆರಂಭವಾಗುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ, ಟಿ20 ಮತ್ತು ಟೆಸ್ಟ್‌ ಸರಣಿಗಳಿಗೆ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಮಂಡಳಿ ಸೋಮವಾರ ತಂಡಗಳನ್ನು ಪ್ರಕಟ ಮಾಡಿದೆ.

ವಿಶ್ವಕಪ್‌ ನಂತರ ಭಾರತ ತಂಡದ ಮೊದಲ ಅಂತರಾಷ್ಟ್ರೀಯ ಪ್ರವಾಸ ಇದಾಗಿದ್ದು, ಸೌಥ್‌ ಆಫ್ರಿಕಾ ವಿರುದ್ಧ ಭಾರತ ತಂಡ 3 ಎಕದಿನ, 3 ಟಿ20 ಮತ್ತು 2 ಟೆಸ್ಟ್‌ ಪಂದ್ಯಗಳನ್ನು ಆಡಲಿದೆ. ಡಿಸೆಂಬರ್‌ 10ರಿಂದ ಆರಂಭವಾಗುವ ಸರಣಿ ಜನವರಿ 7ಕ್ಕೆ ಮುಕ್ತಾಯವಾಗಲಿದೆ.

ಮೊದಲು ನಡೆಯಲಿರುವ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ ಸರಣಿ ಮತ್ತು ಏಕದಿನ ಸರಣಿಗೆ ಮಾಡಲಾಗಿರುವ ತಂಡಗಳಿಂದ ನಾಯಕ ತೆಂಬಾ ಬವೂಮ ಮತ್ತು ಫಾಸ್ಟ್‌ ಬೌಲರ್‌ ಕಗಿಸೊ ರಬಾಡಗೆ ವಿಶ್ರಾಂತಿ ನೀಡಲಾಗಿದೆ. ಟೆಸ್ಟ್‌ ಆಡುವ ಉದ್ದೇಶದಿಂದ ಈ ಇಬ್ಬರು ಪ್ರಮುಖರಿಗೆ ವಿಶ್ರಾಂತಿ ನೀಡಲಿದ್ದು, ಮೊದಲ ಟೆಸ್ಟ್‌ಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಅಂದಹಾಗೆ ಟೆಸ್ಟ್‌ ತಂಡಕ್ಕೆ ಕೇಶವ್ ಮಹಾರಾಜ್ ಅವರನ್ನು ಏಕಮಾತ್ರ ಸ್ಪಿನ್ನರ್‌ ಆಗಿ ಆಯ್ಕೆ ಮಾಡಲಾಗಿದೆ. ಸೀಮಿತ ಓವರ್‌ಗಳ ಟಿ20 ಮತ್ತು ಏಕದಿನ ಪಂದ್ಯಗಳಲ್ಲಿ ನಾಯಕನಾಗಿ ಏಡೆನ್ ಮಾರ್ಕ್ರಮ್ ತಂಡವನ್ನು ಮುನ್ನಡೆಸಲಿದ್ದಾರೆ.

ಭಾರತ ತಂಡ ದ.ಆಫ್ರಿಕಾ ಪ್ರವಾಸ ಕೈಗೊಂಡಿದ್ದು, ವಿಶೇಷವೆಂದರೆ ಭಾರತ ತಂಡದ ಇದುವರೆಗೂ ಸೌಥ್‌ ಆಫ್ರಿಕಾ ನೆಲದಲ್ಲಿ ಒಮ್ಮೆಯೂ ಕೂಡಾ ಟೆಸ್ಟ್‌ ಸೀರಿಸ್‌ ನಲ್ಲಿ ಗೆಲುವು ಸಾಧಿಸಿಲ್ಲ. ಹೀಗಾಗಿ ಬಿಸಿಸಿಐ ಈ ಬಾರಿ ಟೆಸ್ಟ್‌ ಕಡೆ ಹೆಚ್ಚಿನ ಒಲವು ತೋರಿದ್ದು, ಅನುಭವಿ ಆಟಗಾರರಾದ ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಅವರು ಟಿ20 ಮತ್ತು ಏಕದಿನ ಮಾದರಿಗೆ ಈ ಇಬ್ಬರು ಅನುಭವಿಗಳು ವಿಶ್ರಾಂತಿ ತೆಗೆದುಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ಟಿ20 ತಂಡ
ಏಡೆನ್ ಮಾರ್ಕ್ರಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮ್ಯಾಥ್ಯೂ ಬ್ರೀಟ್ಜ್‌ಕಿ, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಯೆಟ್ಜಿ (1ನೇ ಮತ್ತು 2ನೇ ಪಂದ್ಯಕ್ಕೆ), ಡೊನೊವನ್ ಫೆರೇರಾ, ರೀಝಾ ಹೆಂಡ್ರಿಕ್ಸ್, ಮಾರ್ಕೊ ಯನ್ಸೆನ್ (1ನೇ ಮತ್ತು 2ನೇ ಪಂದ್ಯಕ್ಕೆ), ಹೆನ್ರಿಚ್‌ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್‌ ಮಿಲ್ಲರ್‌, ಲುಂಗಿ ಎನ್ಗಿಡಿ (1ನೇ ಮತ್ತು 2ನೇ ಪಂದ್ಯಗಳು), ಆಂಡಿಲ್ ಫೆಹ್ಲುಕ್ವಾಯೊ, ತಬ್ರೇಜ್ ಶಾಮ್ಸಿ, ಟ್ರಿಸ್ಟನ್ ಸ್ಟಬ್ಸ್, ಲಿಝಾದ್ ವಿಲಿಯಮ್ಸ್.

ದಕ್ಷಿಣ ಆಫ್ರಿಕಾ  ಏಕದಿನ ತಂಡ
ಏಡೆನ್ ಮಾರ್ಕ್ರಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ನಾಂಡ್ರೆ ಬರ್ಗರ್, ಟೋನಿ ಡಿ ಝೋರ್ಜಿ, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಮಿಹ್ಲಾಲಿ ಎಂಪೊಂಗ್ವಾನಾ, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೇಜ್ ಶಾಮ್ಸಿ, ರಾಸಿ ವ್ಯಾನ್ ಡೆರ್ ಡುಸೆನ್, ಕೈಲ್ ಮೇಯರ್ಸ್‌, ಲಿಝಾಡ್‌ ವಿಲಿಯಮ್ಸನ್.

ದಕ್ಷಿಣ ಆಫ್ರಿಕಾದ ಟೆಸ್ಟ್‌ ತಂಡ
ತೆಂಬಾ ಬವೂಮ (ನಾಯಕ), ಡೇವಿಡ್ ಬೆಡಿಂಗ್ಹ್ಯಾಮ್, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಯೆಟ್ಜಿ, ಟೋನಿ ಡಿ ಝೊರ್ಜಿ, ಡೀನ್ ಎಲ್ಗರ್, ಮಾರ್ಕೊ ಯನ್ಸೆನ್, ಕೇಶವ್ ಮಹಾರಾಜ್, ಏಡೆನ್ ಮಾರ್ಕ್ರಮ್, ವಿಯಾನ್ ಮಲ್ಡರ್, ಲುಂಗಿ ಎನ್ಗಿಡಿ, ಕೀಗನ್ ಪೀಟರ್ಸನ್, ಕಗಿಸೊ ರಬಾಡ, ಟ್ರಿಸ್ಟನ್ ಸ್ಟಬ್ಸ್‌, ಕೈಲ್ ವೆರೇನ್.

andolanait

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

7 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

7 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

9 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

9 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

9 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

9 hours ago