ಕ್ರೀಡೆ

ಭಾರತ ವಿರುದ್ಧದ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ!

ಬೆಂಗಳೂರು : ಡಿಸೆಂಬರ್‌ 10ರಿಂದ ಆರಂಭವಾಗುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ, ಟಿ20 ಮತ್ತು ಟೆಸ್ಟ್‌ ಸರಣಿಗಳಿಗೆ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಮಂಡಳಿ ಸೋಮವಾರ ತಂಡಗಳನ್ನು ಪ್ರಕಟ ಮಾಡಿದೆ.

ವಿಶ್ವಕಪ್‌ ನಂತರ ಭಾರತ ತಂಡದ ಮೊದಲ ಅಂತರಾಷ್ಟ್ರೀಯ ಪ್ರವಾಸ ಇದಾಗಿದ್ದು, ಸೌಥ್‌ ಆಫ್ರಿಕಾ ವಿರುದ್ಧ ಭಾರತ ತಂಡ 3 ಎಕದಿನ, 3 ಟಿ20 ಮತ್ತು 2 ಟೆಸ್ಟ್‌ ಪಂದ್ಯಗಳನ್ನು ಆಡಲಿದೆ. ಡಿಸೆಂಬರ್‌ 10ರಿಂದ ಆರಂಭವಾಗುವ ಸರಣಿ ಜನವರಿ 7ಕ್ಕೆ ಮುಕ್ತಾಯವಾಗಲಿದೆ.

ಮೊದಲು ನಡೆಯಲಿರುವ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ ಸರಣಿ ಮತ್ತು ಏಕದಿನ ಸರಣಿಗೆ ಮಾಡಲಾಗಿರುವ ತಂಡಗಳಿಂದ ನಾಯಕ ತೆಂಬಾ ಬವೂಮ ಮತ್ತು ಫಾಸ್ಟ್‌ ಬೌಲರ್‌ ಕಗಿಸೊ ರಬಾಡಗೆ ವಿಶ್ರಾಂತಿ ನೀಡಲಾಗಿದೆ. ಟೆಸ್ಟ್‌ ಆಡುವ ಉದ್ದೇಶದಿಂದ ಈ ಇಬ್ಬರು ಪ್ರಮುಖರಿಗೆ ವಿಶ್ರಾಂತಿ ನೀಡಲಿದ್ದು, ಮೊದಲ ಟೆಸ್ಟ್‌ಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಅಂದಹಾಗೆ ಟೆಸ್ಟ್‌ ತಂಡಕ್ಕೆ ಕೇಶವ್ ಮಹಾರಾಜ್ ಅವರನ್ನು ಏಕಮಾತ್ರ ಸ್ಪಿನ್ನರ್‌ ಆಗಿ ಆಯ್ಕೆ ಮಾಡಲಾಗಿದೆ. ಸೀಮಿತ ಓವರ್‌ಗಳ ಟಿ20 ಮತ್ತು ಏಕದಿನ ಪಂದ್ಯಗಳಲ್ಲಿ ನಾಯಕನಾಗಿ ಏಡೆನ್ ಮಾರ್ಕ್ರಮ್ ತಂಡವನ್ನು ಮುನ್ನಡೆಸಲಿದ್ದಾರೆ.

ಭಾರತ ತಂಡ ದ.ಆಫ್ರಿಕಾ ಪ್ರವಾಸ ಕೈಗೊಂಡಿದ್ದು, ವಿಶೇಷವೆಂದರೆ ಭಾರತ ತಂಡದ ಇದುವರೆಗೂ ಸೌಥ್‌ ಆಫ್ರಿಕಾ ನೆಲದಲ್ಲಿ ಒಮ್ಮೆಯೂ ಕೂಡಾ ಟೆಸ್ಟ್‌ ಸೀರಿಸ್‌ ನಲ್ಲಿ ಗೆಲುವು ಸಾಧಿಸಿಲ್ಲ. ಹೀಗಾಗಿ ಬಿಸಿಸಿಐ ಈ ಬಾರಿ ಟೆಸ್ಟ್‌ ಕಡೆ ಹೆಚ್ಚಿನ ಒಲವು ತೋರಿದ್ದು, ಅನುಭವಿ ಆಟಗಾರರಾದ ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಅವರು ಟಿ20 ಮತ್ತು ಏಕದಿನ ಮಾದರಿಗೆ ಈ ಇಬ್ಬರು ಅನುಭವಿಗಳು ವಿಶ್ರಾಂತಿ ತೆಗೆದುಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ಟಿ20 ತಂಡ
ಏಡೆನ್ ಮಾರ್ಕ್ರಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮ್ಯಾಥ್ಯೂ ಬ್ರೀಟ್ಜ್‌ಕಿ, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಯೆಟ್ಜಿ (1ನೇ ಮತ್ತು 2ನೇ ಪಂದ್ಯಕ್ಕೆ), ಡೊನೊವನ್ ಫೆರೇರಾ, ರೀಝಾ ಹೆಂಡ್ರಿಕ್ಸ್, ಮಾರ್ಕೊ ಯನ್ಸೆನ್ (1ನೇ ಮತ್ತು 2ನೇ ಪಂದ್ಯಕ್ಕೆ), ಹೆನ್ರಿಚ್‌ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್‌ ಮಿಲ್ಲರ್‌, ಲುಂಗಿ ಎನ್ಗಿಡಿ (1ನೇ ಮತ್ತು 2ನೇ ಪಂದ್ಯಗಳು), ಆಂಡಿಲ್ ಫೆಹ್ಲುಕ್ವಾಯೊ, ತಬ್ರೇಜ್ ಶಾಮ್ಸಿ, ಟ್ರಿಸ್ಟನ್ ಸ್ಟಬ್ಸ್, ಲಿಝಾದ್ ವಿಲಿಯಮ್ಸ್.

ದಕ್ಷಿಣ ಆಫ್ರಿಕಾ  ಏಕದಿನ ತಂಡ
ಏಡೆನ್ ಮಾರ್ಕ್ರಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ನಾಂಡ್ರೆ ಬರ್ಗರ್, ಟೋನಿ ಡಿ ಝೋರ್ಜಿ, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಮಿಹ್ಲಾಲಿ ಎಂಪೊಂಗ್ವಾನಾ, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೇಜ್ ಶಾಮ್ಸಿ, ರಾಸಿ ವ್ಯಾನ್ ಡೆರ್ ಡುಸೆನ್, ಕೈಲ್ ಮೇಯರ್ಸ್‌, ಲಿಝಾಡ್‌ ವಿಲಿಯಮ್ಸನ್.

ದಕ್ಷಿಣ ಆಫ್ರಿಕಾದ ಟೆಸ್ಟ್‌ ತಂಡ
ತೆಂಬಾ ಬವೂಮ (ನಾಯಕ), ಡೇವಿಡ್ ಬೆಡಿಂಗ್ಹ್ಯಾಮ್, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಯೆಟ್ಜಿ, ಟೋನಿ ಡಿ ಝೊರ್ಜಿ, ಡೀನ್ ಎಲ್ಗರ್, ಮಾರ್ಕೊ ಯನ್ಸೆನ್, ಕೇಶವ್ ಮಹಾರಾಜ್, ಏಡೆನ್ ಮಾರ್ಕ್ರಮ್, ವಿಯಾನ್ ಮಲ್ಡರ್, ಲುಂಗಿ ಎನ್ಗಿಡಿ, ಕೀಗನ್ ಪೀಟರ್ಸನ್, ಕಗಿಸೊ ರಬಾಡ, ಟ್ರಿಸ್ಟನ್ ಸ್ಟಬ್ಸ್‌, ಕೈಲ್ ವೆರೇನ್.

andolanait

Recent Posts

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

10 hours ago

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…

11 hours ago

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

12 hours ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

12 hours ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

13 hours ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

14 hours ago