ಕ್ರೀಡೆ

ಭಾರತ ವಿರುದ್ಧದ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ!

ಬೆಂಗಳೂರು : ಡಿಸೆಂಬರ್‌ 10ರಿಂದ ಆರಂಭವಾಗುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ, ಟಿ20 ಮತ್ತು ಟೆಸ್ಟ್‌ ಸರಣಿಗಳಿಗೆ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಮಂಡಳಿ ಸೋಮವಾರ ತಂಡಗಳನ್ನು ಪ್ರಕಟ ಮಾಡಿದೆ.

ವಿಶ್ವಕಪ್‌ ನಂತರ ಭಾರತ ತಂಡದ ಮೊದಲ ಅಂತರಾಷ್ಟ್ರೀಯ ಪ್ರವಾಸ ಇದಾಗಿದ್ದು, ಸೌಥ್‌ ಆಫ್ರಿಕಾ ವಿರುದ್ಧ ಭಾರತ ತಂಡ 3 ಎಕದಿನ, 3 ಟಿ20 ಮತ್ತು 2 ಟೆಸ್ಟ್‌ ಪಂದ್ಯಗಳನ್ನು ಆಡಲಿದೆ. ಡಿಸೆಂಬರ್‌ 10ರಿಂದ ಆರಂಭವಾಗುವ ಸರಣಿ ಜನವರಿ 7ಕ್ಕೆ ಮುಕ್ತಾಯವಾಗಲಿದೆ.

ಮೊದಲು ನಡೆಯಲಿರುವ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ ಸರಣಿ ಮತ್ತು ಏಕದಿನ ಸರಣಿಗೆ ಮಾಡಲಾಗಿರುವ ತಂಡಗಳಿಂದ ನಾಯಕ ತೆಂಬಾ ಬವೂಮ ಮತ್ತು ಫಾಸ್ಟ್‌ ಬೌಲರ್‌ ಕಗಿಸೊ ರಬಾಡಗೆ ವಿಶ್ರಾಂತಿ ನೀಡಲಾಗಿದೆ. ಟೆಸ್ಟ್‌ ಆಡುವ ಉದ್ದೇಶದಿಂದ ಈ ಇಬ್ಬರು ಪ್ರಮುಖರಿಗೆ ವಿಶ್ರಾಂತಿ ನೀಡಲಿದ್ದು, ಮೊದಲ ಟೆಸ್ಟ್‌ಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಅಂದಹಾಗೆ ಟೆಸ್ಟ್‌ ತಂಡಕ್ಕೆ ಕೇಶವ್ ಮಹಾರಾಜ್ ಅವರನ್ನು ಏಕಮಾತ್ರ ಸ್ಪಿನ್ನರ್‌ ಆಗಿ ಆಯ್ಕೆ ಮಾಡಲಾಗಿದೆ. ಸೀಮಿತ ಓವರ್‌ಗಳ ಟಿ20 ಮತ್ತು ಏಕದಿನ ಪಂದ್ಯಗಳಲ್ಲಿ ನಾಯಕನಾಗಿ ಏಡೆನ್ ಮಾರ್ಕ್ರಮ್ ತಂಡವನ್ನು ಮುನ್ನಡೆಸಲಿದ್ದಾರೆ.

ಭಾರತ ತಂಡ ದ.ಆಫ್ರಿಕಾ ಪ್ರವಾಸ ಕೈಗೊಂಡಿದ್ದು, ವಿಶೇಷವೆಂದರೆ ಭಾರತ ತಂಡದ ಇದುವರೆಗೂ ಸೌಥ್‌ ಆಫ್ರಿಕಾ ನೆಲದಲ್ಲಿ ಒಮ್ಮೆಯೂ ಕೂಡಾ ಟೆಸ್ಟ್‌ ಸೀರಿಸ್‌ ನಲ್ಲಿ ಗೆಲುವು ಸಾಧಿಸಿಲ್ಲ. ಹೀಗಾಗಿ ಬಿಸಿಸಿಐ ಈ ಬಾರಿ ಟೆಸ್ಟ್‌ ಕಡೆ ಹೆಚ್ಚಿನ ಒಲವು ತೋರಿದ್ದು, ಅನುಭವಿ ಆಟಗಾರರಾದ ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಅವರು ಟಿ20 ಮತ್ತು ಏಕದಿನ ಮಾದರಿಗೆ ಈ ಇಬ್ಬರು ಅನುಭವಿಗಳು ವಿಶ್ರಾಂತಿ ತೆಗೆದುಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ಟಿ20 ತಂಡ
ಏಡೆನ್ ಮಾರ್ಕ್ರಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮ್ಯಾಥ್ಯೂ ಬ್ರೀಟ್ಜ್‌ಕಿ, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಯೆಟ್ಜಿ (1ನೇ ಮತ್ತು 2ನೇ ಪಂದ್ಯಕ್ಕೆ), ಡೊನೊವನ್ ಫೆರೇರಾ, ರೀಝಾ ಹೆಂಡ್ರಿಕ್ಸ್, ಮಾರ್ಕೊ ಯನ್ಸೆನ್ (1ನೇ ಮತ್ತು 2ನೇ ಪಂದ್ಯಕ್ಕೆ), ಹೆನ್ರಿಚ್‌ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್‌ ಮಿಲ್ಲರ್‌, ಲುಂಗಿ ಎನ್ಗಿಡಿ (1ನೇ ಮತ್ತು 2ನೇ ಪಂದ್ಯಗಳು), ಆಂಡಿಲ್ ಫೆಹ್ಲುಕ್ವಾಯೊ, ತಬ್ರೇಜ್ ಶಾಮ್ಸಿ, ಟ್ರಿಸ್ಟನ್ ಸ್ಟಬ್ಸ್, ಲಿಝಾದ್ ವಿಲಿಯಮ್ಸ್.

ದಕ್ಷಿಣ ಆಫ್ರಿಕಾ  ಏಕದಿನ ತಂಡ
ಏಡೆನ್ ಮಾರ್ಕ್ರಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ನಾಂಡ್ರೆ ಬರ್ಗರ್, ಟೋನಿ ಡಿ ಝೋರ್ಜಿ, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಮಿಹ್ಲಾಲಿ ಎಂಪೊಂಗ್ವಾನಾ, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೇಜ್ ಶಾಮ್ಸಿ, ರಾಸಿ ವ್ಯಾನ್ ಡೆರ್ ಡುಸೆನ್, ಕೈಲ್ ಮೇಯರ್ಸ್‌, ಲಿಝಾಡ್‌ ವಿಲಿಯಮ್ಸನ್.

ದಕ್ಷಿಣ ಆಫ್ರಿಕಾದ ಟೆಸ್ಟ್‌ ತಂಡ
ತೆಂಬಾ ಬವೂಮ (ನಾಯಕ), ಡೇವಿಡ್ ಬೆಡಿಂಗ್ಹ್ಯಾಮ್, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಯೆಟ್ಜಿ, ಟೋನಿ ಡಿ ಝೊರ್ಜಿ, ಡೀನ್ ಎಲ್ಗರ್, ಮಾರ್ಕೊ ಯನ್ಸೆನ್, ಕೇಶವ್ ಮಹಾರಾಜ್, ಏಡೆನ್ ಮಾರ್ಕ್ರಮ್, ವಿಯಾನ್ ಮಲ್ಡರ್, ಲುಂಗಿ ಎನ್ಗಿಡಿ, ಕೀಗನ್ ಪೀಟರ್ಸನ್, ಕಗಿಸೊ ರಬಾಡ, ಟ್ರಿಸ್ಟನ್ ಸ್ಟಬ್ಸ್‌, ಕೈಲ್ ವೆರೇನ್.

andolanait

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

8 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

8 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

8 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

9 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

9 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

9 hours ago