ಕ್ರೀಡೆ

WTL Final | ಚಾಂಪಿಯನ್‌ ಪಟ್ಟಕ್ಕೇರಿದ ದ.ಆಫ್ರಿಕಾ

ಲಂಡನ್‌ : ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ (ಡಬ್ಲ್ಯುಟಿಸಿ) ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಈ ಮೂಲಕ 27 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಬರ ನೀಗಿಸಿಕೊಂಡಿದೆ.

ಇಲ್ಲಿನ ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಆಸ್ಟ್ರೇಲಿಯಾ 212ರನ್‌ಗಳಿಗೆ ಆಲ್‌ ಔಟ್‌ ಆಯಿತು. ಬಳಿಕ ಇನ್ನಿಂಗ್ಸ್‌ ಆರಂಭಿಸಿದ ದಕ್ಷಿಣ ಆಫ್ರಿಕಾ 138 ರನ್‌ಗಳಿಗೆ ಔಟ್‌ ಆಯಿತು. ನಂತರ ಎರಡನೇ ಇನ್ನಿಂಗ್ಸ್‌ ಮಾಡಿದ ಆಸ್ಟ್ರೇಲಿಯಾ 207 ರನ್‌ಗಳಿಗೆ ಆಲ್‌ ಔಟ್‌ ಆಗಿ ದಕ್ಷಿಣ ಆಫ್ರಿಕಾಗೆ ಗೆಲ್ಲಲು 282 ರನ್‌ಗಳ ಗುರಿ ನೀಡಿತ್ತು.

ಈ ಗುರಿ ಬೆನ್ನೆತ್ತುವಲ್ಲಿ ಸಫಲವಾದ ತೆಂಬಾ ಬವುಮಾ ಪಡೆಗೆ ಆರಂಭಿಕ ಏಡನ್‌ ಮರ್ಕರಂ ಆಸರೆಯಾದರೆ. ಅವರ ಶತಕದಾಟದ ಬಲದಿಂದ ಹರಿಣಗಳ ನಾಡಿನ ತಂಡ ಐದು ವಿಕೆಟ್‌ಗಳ ನಷ್ಟಕ್ಕೆ 285 ರನ್‌ಗಳಿಸಿ ಗೆಲವಿನ ನಗೆ ಬೀರಿತು.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

9 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

9 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

10 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

12 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

12 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

12 hours ago