ಕ್ರೀಡೆ

t20 worldcup: ಶ್ರೀಲಂಕಾ ವಿರುದ್ಧ ಗೆದ್ದು ಶುಭಾರಂಭ ಮಾಡಿದ ದಕ್ಷಿಣ ಆಫ್ರಿಕಾ

ನ್ಯೂಯಾರ್ಕ್‌: ದಕ್ಷಿಣ ಆಫ್ರಿಕಾ ತಂಡದ ಸಂಘಟಿತ ಬೌಲಿಂಗ್‌ ದಾಳಿಗೆ ನಲುಗಿದ ಶ್ರೀಲಂಕಾ ತಂಡ ಮೂರಂಕಿ ದಾಟಲು ವಿಫಲರಾಗಿ ಟೂರ್ನಿಯ ಮೊದಲ ಪಂದ್ಯದಲ್ಲೇ ಹೀನಾಯ ಸೋಲು ಕಂಡಿದೆ. ಇನ್ನು ಶ್ರೀಲಂಕಾ ತಂಡವನ್ನು 6 ವಿಕೆಟ್‌ಗಳ ಅಂತರದಿಂದ ಸೋಲಿಸಿದ ದಕ್ಷಿಣ ಆಫ್ರಿಕಾ ತಂಡ ಟೂರ್ನಿಯಲ್ಲಿ ಶುಭಾರಂಭ ಮಾಡಿತು.

ಇಲ್ಲಿನ ನಾಸೌ ಕೌಂಟಿ ಕ್ಲಬ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಶ್ರೀಲಂಕಾ 19.1 ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ 77 ರನ್‌ ಗಳಿಸಿ 78 ರನ್‌ಗಳ ಟಾರ್ಗೆಟ್‌ ನೀಡಿತು. ಈ ಸಾಧಾರಣ ಮೊತ್ತ ಬೆನ್ನತ್ತಿದ್‌ ದಕ್ಷಿಣ ಆಫ್ರಿಕಾ ತಂಡ ಕೇವಲ 16.2 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 80 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು.

ಶ್ರೀಲಂಕಾ ಇನ್ನಿಂಗ್ಸ್‌: ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಶ್ರೀಲಂಕಾ ತಂಡದ ಪರವಾಗಿ ನಿಸ್ಸಾಂಕ ಹಾಗೂ ಕುಶಾಲ್‌ ಮೆಂಡೀಸ್‌ ಆರಂಭಿಕರಾಗಿ ಕಣಕ್ಕಿಳಿದರು. ನಿಸ್ಸಾಂಕ 3(8) ರನ್‌ ಗಳಿಸಿದರೇ ಕುಶಾಲ್‌ ಮೆಂಡೀಸ್‌ ಬರೋಬ್ಬರಿ 30 ಎಸೆತಗಳಲ್ಲಿ ಕೇವಲ 19ರನ್‌ ಗಳಿಸಿದರು. ಮೆಂಡೀಸ್‌ ಗಳಿಸಿದ್ದೇ ತಂಡದ ಪರ ಅತಿಹೆಚ್ಚು ರನ್‌ ಆಗಿತ್ತು.

ಉಳಿದಂತೆ ಕಮಿಂದು ಮೆಂಡೀಸ್‌ 11(15)ರನ್‌, ನಾಯಕ ಹಸರಂಗ ಮತ್ತು ಸಮರವಿಕ್ರಮ ಡಕ್‌ಔಟ್‌ ಆಗಿ ಹೊರನಡೆದರು. ಅಸಲಂಕ 6(9)ರನ್‌, ಮ್ಯಾಥ್ಯೂಸ್‌ 16(16)ರನ್‌, ಶನಕ 9(10)ರನ್‌, ಪತಿರಣ ಹಾಗೂ ತುಷಾರ ಶೂನ್ಯ ಸಂಪಾದಿಸಿದರೇ ತೀಕ್ಷಣ ಔಟಾಗದೇ 7(16)ರನ್‌ ಗಳಿಸಿದರು.

ದಕ್ಷಿಣ ಆಫ್ರಿಕಾ ಪರ ನೋಕಿಯೋ 4 ಓವರ್‌ ಬೌಲಿಂಗ್‌ ಮಾಡಿ, ಕೇವಲ 7ರನ್‌ ನೀಡಿ ಪ್ರಮುಖ 4 ವಿಕೆಟ್‌ ಪಡೆದು ಮಿಂಚಿದರು. ರಬಾಡ ಹಾಗೂ ಕೇಶವ್‌ ಮಹಾರಾಜ ತಲಾ 2 ವಿಕೆಟ್‌ ಪಡೆದರೆ, ಬಾರ್ಟ್ಮನ್‌ ಒಂದು ವಿಕೆಟ್‌ ಪಡೆದು ಗಮನ ಸೆಳೆದರು.

ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌: ಶ್ರೀಲಂಕಾ ನೀಡಿದ ಸಾದಾರಣ ಮೊತ್ತ ಬೆನ್ನತ್ತಿದ ದಕ್ಷಿಣ ಆಫ್ರಿಕಾಗೆ ಆರಂಭಿಕ ಆಘಾತ ಉಂಟಾಯಿತು. ರೀಜಾ ಹೆಂಡ್ರಿಕ್ಸ್‌ 4(2) ರನ್‌ ಗಳಿಸಿ ಬಂದಷ್ಟೆ ವೇಗವಾಗಿ ಹಿಂತಿರುಗಿದರು. ಬಳಿಕ ಬಂದ ನಾಯಕ ಐಡೆನ್‌ ಮಾರ್ಕ್ರಂ 12(14) ರನ್‌ ಗಳಿಸಿ ಔಟಾಗಿ ನಿರ್ಗಮಿಸಿದರು.

ಕಡಿಮೆ ಮೊತ್ತ ಬೆನ್ನತ್ತಿದರೂ ಕೂಡಾ ಆರಂಭಿಕ ಆಘಾತ ಅನುಭವಿಸಿದ ತಂಡಕ್ಕೆ ಡಿಕಾಕ್‌ ಚೇತರಿಕೆ ಆಟವಾಡಿದರು. ಇವರು 20(27) ರನ್‌ ಕಲೆಹಾಕಿ ಔಟಾದರು. ಇವರಿಗೆ ಟ್ರಿಸ್ಟನ್‌ ಸ್ಟಬ್ಸ್‌ 13(28)ರನ್‌ ಕಲೆಹಾಕಿದರು.

ಕೊನೆಯಲ್ಲಿ ಅಬ್ಬರಿಸಿದ ಹೆನ್ರಿಚ್‌ ಕ್ಲಾಸೆನ್‌ ಹಾಗೂ ಡೇವಿಡ್‌ ಮಿಲ್ಲರ್‌ ತಂಡಕ್ಕೆ ಗೆಲುವು ತಂದಿಟ್ಟರು. ಕ್ಲಾಸೆನ್‌ 19(22) ರನ್‌ ಮಿಲ್ಲರ್‌ 6(6) ರನ್‌ ಬಾರಿಸಿ ಗೆಲುವಿನ ನಗೆ ಬೀರಿದರು.

ಶ್ರೀಲಂಕಾ ಪರ ವನಿಂದು ಹಸರಂಗ 2, ಶನಕ ಹಾಗೂ ತುಷಾರ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ಎನ್ರಿಚ್‌ ನೋಕಿಯೋ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

2 mins ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

8 mins ago

ಸಂವಿಧಾನ ನಮ್ಮ ಬಳಿ ಇದೆ, ಆದರೆ ಅದರ ಧ್ವನಿ ಎಲ್ಲಿದೆ?

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…

12 mins ago

ಗಣರಾಜ್ಯೋತ್ಸವದ ಅಯೋಮಯ ಇಂಗ್ಲಿಷ್ ಭಾಷಣ

ಗಣರಾಜ್ಯೋತ್ಸವ ಎಂದೊಡನೆ ನಾನು ಪ್ರೌಢಶಾಲೆಯಲ್ಲಿ ಸತತವಾಗಿ ೩ವರ್ಷ ಮಾಡಿದ ಇಂಗ್ಲಿಷ್ ಭಾಷಣ ನೆನಪಾಗುತ್ತದೆ. ಈ ದಿನದ ಮಹತ್ವದ ಬಗ್ಗೆ ಇತ್ತೀಚೆಗೆ…

15 mins ago

ಈಗ ಗಣರಾಜ್ಯೋತ್ಸವದಲ್ಲೂ ದ್ವೇಷದ ಉರಿಗಾಳಿ

ಗಣರಾಜ್ಯೋತ್ಸವ ಅಂದರೆ ನನಗೆ ನೆನಪಾಗೋದು ಶಾಲಾ ದಿನಗಳು. ಗಣರಾಜ್ಯದ ಹಿಂದಿನ ಎರಡು ಮೂರು ದಿನಗಳು ಯಾವುದೇ ತರಗತಿ ನಡೆಯುತ್ತಿರ ಲಿಲ್ಲ.…

18 mins ago

ಹಾಳೆ ಅಂಬುಲೆ ಉಯ್ಯಾಲೆ ಆಡಿ…

ನಾನು ಕೆಲಸ ಮಾಡುವ ಪಿರಿಯಾಪಟ್ಟಣದ ಶಾಲೆ ಮೈಸೂರು ಜಿಲ್ಲೆಯಲ್ಲೇ ವಿಶೇಷವಾದ ಶಾಲೆ. ಮೈಸೂರು ಜಿಲ್ಲೆಗೆ ಸೇರಿದ್ದರೂ ಕೊಡಗು ಜಿಲ್ಲೆಗೆ ಸಮೀಪ…

22 mins ago