ಕ್ರೀಡೆ

ICC t20 worldcup 2024: ಅಫ್ಘನ್‌ ಮಣಿಸಿ ಮೊದಲ ಬಾರಿಗೆ ಫೈನಲ್‌ ಪ್ರವೇಶಿಸಿದ ದಕ್ಷಿಣ ಆಫ್ರಿಕಾ!

ಟ್ರಿನಿಡಾಡ್‌: ದಕ್ಷಿಣ ಆಫ್ರಿಕಾ ತಂಡದ ಕರಾರುವಕ್ಕಾದ ಬೌಲಿಂಗ್‌ ದಾಳಿಗೆ ನಲುಗಿದ ಅಫ್ಘಾನಿಸ್ತಾನ ತಂಡ ಟಿ20 ವಿಶ್ವಕಪ್‌ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಹೀನಾಯ ಸೋಲು ಕಂಡಿತು.

ಅಫ್ಘಾನ್‌ ವಿರುದ್ಧ 9 ವಿಕೆಟ್‌ಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ ದಕ್ಷಿಣ ಆಫ್ರಿಕಾ ತಂಡ ಟಿ20 ವಿಶ್ವಕಪ್‌ ಟೂರ್ನಿ ಇತಿಹಾಸದಲ್ಲಿ ಮೊದಲ ಬಾರಿಗೆ ಸೆಮಿ ಫೈನಲ್‌ ಪ್ರವೇಶಿಸಿ ದಾಖಲೆ ಬರೆಯಿತು.

ಇಲ್ಲಿನ ಬ್ರಯಾನ್‌ ಲಾರಾ ಕ್ರೀಡಾಂಗಣದಲ್ಲಿ ನಡೆದ ಅಫ್ಘಾನಿಸ್ತಾನ್‌ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಅಫ್ಘಾನಿಸ್ತಾನ್‌ 11.5 ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ ಕೇವಲ 56ರನ್‌ ಗಳಿಸಿ ಎದುರಾಳಿಗೆ 57ರನ್‌ಗಳ ಗುರಿ ನೀಡಿತು. ಈ ಸಾದಾರಣ ಮೊತ್ತ ಬೆನ್ನತ್ತಿದ ದ.ಆಫ್ರಿಕಾ 8.5 ಓವರ್‌ಗಳಲ್ಲಿ ಒಂದು ವಿಕೆಟ್‌ ಕಳೆದುಕೊಂಡು 60 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

ಅಫ್ಘಾನ್‌ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಅಫ್ಘಾನ್‌ ಪರ ಗುರ್ಬಾಜ್‌ ಹಾಗೂ ಇಬ್ರಾಹಿಂ ಜದ್ರಾನ್‌ ಆರಂಭಿಕರಾಗಿ ಕಣಕ್ಕಿಳಿದರು. ಮಾರ್ಕೋ ಎನ್ಸನ್‌ ಮೊದಲ ಓವರ್‌ನಲ್ಲೇ ಗುರ್ಬಾಜ್‌ ಡಕ್‌ಔಟ್‌ ಆಗಿ ಹೊರ ನಡೆದರು. ಬಳಿಕ ಬಂದ ರಬಾಡ 2(5)ರನ್‌ ಬಾರಿಸಿದ್ದ ಜದ್ರಾನ್‌ರನ್ನು ಕ್ಲೀನ್‌ ಬೌಲ್ಡ್‌ ಮಾಡಿದರು.

ಬಳಿಕ ಬಂದ ಗುಲ್ಬದಿನ್‌ ನೈಬ್‌ 9(8) ರನ್‌ ಹಾಗೂ ಅಜರತ್ತುಲ್ಲಾ 10(12)ರನ್‌ ಗಳಿಸಿ ಔಟಾದರು. ಅಜರತ್ತುಲ್ಲಾ ಗಳಿಸಿದ್ದೇ ತಂಡದ ಪರ ಅತ್ಯಧಿಕ ರನ್‌ ಆಗಿತ್ತು. ಬಳಿಕ ಬಂದ ಬೇರಾವ ಆಟಗಾರರಿಂದಲೂ ದಕ್ಷಿಣ ಆಫ್ರಿಕಾ ತಂಡದ ಬಿಗಿ ಬೌಲಿಂಗ್‌ ಮುಂದೆ ನಿಂತು ಇನ್ನಿಗ್ಸ್‌ ಕಟ್ಟಲಾಗಲಿಲ್ಲ.

ಉಳಿದಂತೆ ನಬಿ ಡಕ್‌ಔಟ್‌, ಖರೋಟ್ಟೆ 2(7)ರನ್‌, ಜನತ್‌ 8(13) ರನ್‌, ನಾಯಕ ರಶೀದ್‌ ಖಾನ್‌ 8(8) ರನ್‌, ನೂರ್‌ ಅಹ್ಮದ್‌ ಡಕ್‌ಔಟ್‌, ನವೀನ್‌ ಉಲ್‌-ಹಕ್‌ 2(8)ರನ್‌ ಗಳಿಸಿದರೇ, ಫರೂಕಿ ಔಟಾಗದೇ 2(2)ರನ್‌ ಗಳಿಸಿದರು.

ದಕ್ಷಿಣ ಆಫ್ರಿಕಾ ಪರ ಮಾರ್ಕೋ ಎನ್ಸನ್‌ ಹಾಗೂ ಸಂಶಿ ತಲಾ 3 ವಿಕೆಟ್‌, ನೋಕಿಯೋ ಮತ್ತು ರಬಾಡ ತಲಾ 2 ವಿಕೆಟ್‌ ಕಬಳಿಸಿ ಮಿಂಚಿದರು.

ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌: ಈ ಸಾದಾರಣ ಮೊತ್ತ ಬೆನ್ನತ್ತಿದ ದಕ್ಷಿಣ ಆಫ್ರಿಕಾ ಕೇವಲ 8.5 ಓವರ್‌ಗಳಲ್ಲಿ 60ರನ್‌ ಗಳಿಸಿ 9 ವಿಕೆಟ್‌ಗಳ ಅಂತರದಿಂದ ಭರ್ಜರಿಯಾಗಿ ಗೆಲುವು ದಾಖಲಿಸಿತು. ತಂಡದ ಪರ ಡಿಕಾಕ್‌ 5(8)ರನ್‌, ಹೆನ್ರಿಕ್ಸ್‌ ಔಟಾಗದೇ 29(25)ರನ್‌ ಹಾಗೂ ನಾಯಕ ಐಡೆನ್‌ ಮಾರ್ಕ್ರಂ ಔಟಾಗದೇ 23(21)ರನ್‌ ಗಳಿಸಿದರು.

ಅಫ್ಘಾನ್‌ ಪರ ಫರೂಕಿ ಒಂದು ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಮಾರ್ಕೋ ಎನ್ಸನ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

2 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

2 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

2 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

2 hours ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

13 hours ago