ಕ್ರೀಡೆ

ಮೂರನೇ ಬಾರಿ ಒಂದೇ ಇನ್ನಿಂಗ್ಸ್ ನಲ್ಲಿ 3 ಶತಕ ದಾಖಲಿಸಿದ ದಕ್ಷಿಣ ಆಫ್ರಿಕಾ

ನವದೆಹಲಿ : ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ ಪೇರಿಸಿದೆ. ತಂಡದ ಪರವಾಗಿ ಮೂರು ಶತಕ ದಾಖಲಿಸುವುದರೊಂದಿಗೆ 428 ರನ್ ಗಳಿಸಿದೆ.

ವಿಶ್ವಕಪ್‌ ಇತಿಹಾಸದಲ್ಲೇ ಅತೀ ಹೆಚ್ಚು ರನ್‌ ಗಳಿಸಿದ ಹೆಗ್ಗಳಿಗೆ ಪಾತ್ರವಾದ ದಕ್ಷಿಣ ಆಫ್ರಿಕಾ ಮೂರನೇ ಬಾರಿ ಒಂದೇ ಇನ್ನಿಂಗ್ಸ್ ನಲ್ಲಿ ಮೂರು ಶತಕ ದಾಖಲಿಸಿದ ಇತಿಹಾಸ ಸೃಷ್ಟಿಸಿದೆ. ಈ ಹಿಂದೆ 2015ರಲ್ಲಿ ಜೋಹಾನ್ಸ್‌ ಬರ್ಗ್‌ ನಲ್ಲಿ ವೆಸ್ಟ್ ಇಂಡೀಸ್‌ ವಿರುದ್ಧ 2 ವಿಕೆಟ್‌ ನಷ್ಟಕ್ಕೆ 439 ರನ್ ಗಳಿಸಿತ್ತು. ಆ ಪಂದ್ಯದಲ್ಲಿ ಹಾಶಿಮ್ ಆಮ್ಲಾ 153 ರನ್‌ ಗಳಿಸಿ ನಾಟೌಟ್‌ ಆಗಿದ್ದರು. ಎಬಿಡಿ ವಿಲಿಯರ್ಸ್ 149, ರಿಲೀ ರೋಸೌವ್ 128 ರನ್‌ ಗಳಿಸಿದ್ದರು.

ಈ ಪಂದ್ಯದಲ್ಲಿ ಕೇವಲ 31 ಬಾಲ್‌ ಗೆ ಶತಕ ಗಳಿಸಿದ್ದ ಎಬಿಡಿ ಯವರ ಸಾಧನೆ ಇದುವರೆಗಿನ ಕ್ರಿಕೆಟ್‌ ಇತಿಹಾಸದಲ್ಲಿ ಅತೀ ವೇಗದ ಶತಕ ಎಂದೇ ದಾಖಲಾಗಿದೆ. ಅದೇ ವರ್ಷ 20115ರಲ್ಲಿ ಭಾರತಕ್ಕೆ ಪ್ರವಾಸ ಬಂದಿದ್ದ ದಕ್ಷಿಣ ಆಫ್ರಿಕಾ ಆತಿಥೇಯ ಭಾರತ ತಂಡದ ವಿರುದ್ಧ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 4 ವಿಕೆಟ್‌ ನಷ್ಟಕ್ಕೆ 438 ರನ್ ಗಳಿಸಿತ್ತು. ದಕ್ಷಿಣ ಆಫ್ರಿಕಾ ಪರ ಫಾಫ್ ಡು ಪ್ಲೆಸಿಸ್ 133 ರನ್‌, ಎಬಿಡಿ ವಿಲಿಯರ್ಸ್‌ 119, ಕ್ವಿಂಟನ್‌ ಡಿಕಾಕ್ 109 ರನ್ ಗಳಿಸಿ ಮೂರು ಶತಕ ಗಳಿಸಿದ್ದರು. ಈ ಪಂದ್ಯದಲ್ಲಿ ಮತ್ತೆ ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶಿಸಿದ್ದ ಎಬಿಡಿ 61 ಎಸೆತಗಳಲ್ಲಿ 3 ಬೌಂಡರಿ, 11 ಸಿಕ್ಸರ್‌ ಗಳೊಂದಿಗೆ 119 ರನ್‌ ಗಳಿಸಿ ಕ್ರಿಕೆಟ್‌ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಸಿದ್ದರು.

ಈ ಪಂದ್ಯದಲ್ಲಿ ಭಾರತ ಸೋತಿತ್ತು. ಇವತ್ತಿನ ವಿಶ್ವಕಪ್ ಪಂದ್ಯದಲ್ಲಿ 5 ವಿಕೆಟ್ ಗೆ 428 ರನ್ ಗಳಿಸಿದ ದಕ್ಷಿಣ ಆಫ್ರಿಕಾ ಶ್ರೀಲಂಕಾಕ್ಕೆ ಬೃಹತ್ ಸವಾಲು ನೀಡಿದೆ. ಈ ಪಂದ್ಯದಲ್ಲಿ ಕ್ವಿಂಟನ್ ಡಿ ಕಾಕ್ 100, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ 108, ಐಡೆನ್ ಮಾರ್ಕ್ರಾಮ್ 106 ರನ್‌ ಗಳಿಸಿದ್ದಾರೆ. ಕೇವಲ 54 ಎಸೆತಗಳಲ್ಲಿ 106 ರನ್‌ ಗಳಿಸಿದ ಐಡೆನ್ ಮಾರ್ಕ್ರಾಮ್ ಅವರು 14 ಬೌಂಡರಿಗಳೊಂದಿಗೆ 3 ಸಿಕ್ಸರ್‌ ಬಾರಿಸಿ ತಂಡದ ರನ್‌ ಗಳಿಕೆಗೆ ವೇಗ ನೀಡಿದರು.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago