ಕ್ರೀಡೆ

ವರ್ಲ್ಡ್‌ ಕಪ್​ನಿಂದ ದಕ್ಷಿಣ ಆಫ್ರಿಕಾ ತಂಡ ಬ್ಯಾನ್​

ಬೆಂಗಳೂರು : ಕ್ರಿಕೆಟ್​ ವಿಶ್ವಕಪ್ ವಿಚಾರದಲ್ಲಿ ದುರದೃಷ್ಟ ದಕ್ಷಿಣ ಆಫ್ರಿಕಾ ತಂಡದ ಹೆಗಲೇರಿ ಕುಳಿತಿರುತ್ತದೆ. ಆ ತಂಡ ಎಷ್ಟೇ ಉತ್ತಮ ಪ್ರದರ್ಶನ ನೀಡಿದರೂ ಕಪ್​ ಗೆಲ್ಲುವುದಕ್ಕೆ ಸಾಧ್ಯವಾಗಿಲ್ಲ. ಆದರೆ ಈ ಬಾರಿ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ 2023 ರಲ್ಲಿ, ವಿಶ್ವ ಉದ್ದೀಪನ ಮದ್ದು ವಿರೋಧಿ ಸಂಸ್ಥೆಯ ಡೋಪಿಂಗ್ ವಿರೋಧಿ ನಿಯಮಗಳನ್ನು ಅನುಸರಿಸದ ಕಾರಣ ಅವರು ಮತ್ತೊಂದು ಬಗೆಯ ಸಮಸ್ಯೆಗೆ ಸಿಲುಕಿದ ಹರಿಣಗಳ ಪಡೆ. ಕ್ರಿಕ್​ಬಜ್​ ವರದಿ ಪ್ರಕಾರ ವಾಡಾದ ನಿಯಮ ಪಾಲಿಸದ ಕಾರಣ ತಂಡಕ್ಕೆ ನಿರ್ಬಂಧ ಹೇರುವ ಸಾಧ್ಯತೆಗಳಿವೆ.

ದಕ್ಷಿಣ ಆಫ್ರಿಕಾದ ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಸಂಸ್ಥೆ 2021 ರಲ್ಲಿ ತಂದ ಜಾರಿಗೆ ತಂದಿರುವ ವಾಡಾ ಸಂಹಿತೆಯನ್ನು ಕ್ರಿಕೆಟ್​ ತಂಡ ಅನುಸರಿಸಿಲ್ಲ ಎಂದು ವರದಿ ಸೂಚಿಸುತ್ತದೆ. ಇಂಥ ಘಟನೆಗಳು ಕ್ರಿಕೆಟ್ ಅನ್ನು ಒಲಿಂಪಿಕ್ಸ್ ಸ್ಪರ್ಧೆಯ ಪಟ್ಟಿಗೆ ತರಲು ಅಡಚಣೆಯನ್ನುಂಟುಮಾಡುತ್ತವೆ. ಒಲಿಂಪಿಕ್ಸ್​​ನಲ್ಲಿ ಕ್ರಿಕೆಟ್ ಸೇರ್ಪಡೆಗೆ ಸಂಬಂಧಿಸಿದಂತೆ ಐಒಸಿ ಅಧಿಕಾರಿಗಳು ಮುಂದಿನ ವಾರ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಈ ವೇಳೆಯಲ್ಲಿ ದಕ್ಷಿಣ ಆಫ್ರಿಕಾ ತಂಡ ಯಡವಟ್ಟು ಮಾಡಿಕೊಂಡಿದೆ.

ಈ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ಶ್ರೀಲಂಕಾ ವಿರುದ್ಧ ಒಂದು ಪಂದ್ಯವನ್ನಾಡಿದೆ. ಅವರು 400 ಕ್ಕೂ ಹೆಚ್ಚು ರನ್ ಗಳಿಸಿದ್ದರೆ. ಬೃಹತ್​ ಅಂತರದಿಂದ ಗೆಲುವು ಸಾಧಿಸಿದೆ. ಅತ್ಯುತ್ತಮ ಆರಂಭದ ಹೊರತಾಗಿಯೂ ಮುಂದಿನ ಪಂದ್ಯಗಳಲ್ಲಿ ತಂಡದ ಭವಿಷ್ಯ ಏನಾಗಲಿದೆ ಎಂಬುದು ವಾಡಾದ ನಿರ್ಧಾರದ ಮೇಲೆ ನಿಂತಿದೆ. ವಾಡಾ ಹೇಳಿಕೆಯಲ್ಲಿ ದಕ್ಷಿಣ ಆಫ್ರಿಕಾದ ಮೇಲೆ ವಿಧಿಸಬಹುದಾದ ನಿರ್ಬಂಧಗಳನ್ನು ಪಟ್ಟಿ ಮಾಡಿದೆ.

ದಕ್ಷಿಣ ಆಫ್ರಿಕಾದ ಸಂಪೂರ್ಣ ನಿಷೇಧವನ್ನು ತಳ್ಳಿಹಾಕಲಾಗಿದೆ. ಹೀಗಾಗಿ ಹಾಲಿ ವಿಶ್ವ ಕಪ್​ನಲ್ಲಿ ತಂಡವು ಆಟವನ್ನು ಮುಂದುವರಿಸುವ ಸಾಧ್ಯತೆಗಳಿವೆ. ಆದರೆ, ವಾಡಾ ದಕ್ಷಿಣ ಆಫ್ರಿಕಾವನ್ನು ಹೇಗೆ ನಿರ್ಬಂಧಿಸಬಹುದು ಎಂಬ ಮಾಹಿತಿಯನ್ನೂ ನೀಡಿದೆ. ಎಸ್ಎಐಡಿಎಸ್ ಪುನಃಸ್ಥಾಪನೆಯಾಗುವವರೆಗೆ ಪ್ರಾದೇಶಿಕ ಖಂಡಾಂತರ ಮತ್ತು ವಿಶ್ವ ಚಾಂಪಿಯನ್​ಶಿಪ್​ಗಳು ಮತ್ತು ಪ್ರಮುಖ ಕ್ರೀಡಾಕೂಟಗಳು (ಒಲಿಂಪಿಕ್ ಕ್ರೀಡಾಕೂಟ ಮತ್ತು ಪ್ಯಾರಾಲಿಂಪಿಕ್ ಕ್ರೀಡಾಕೂಟಗಳನ್ನು ಹೊರತುಪಡಿಸಿ) ಆಯೋಜಿಸುವ ಕಾರ್ಯಕ್ರಮಗಳಲ್ಲಿ ದಕ್ಷಿಣ ಆಫ್ರಿಕಾದ ಧ್ವಜವನ್ನು ಹಾರಿಸಲು ಬಿಡುವುದಿಲ್ಲ. ಹೀಗಾಗಿ ಒಂದು ವೇಳೆ ದಕ್ಷಿಣ ಆಫ್ರಿಕಾ ವಾಡಾದ ನಿರ್ಬಂಧಕ್ಕೆ ಒಳಪಟ್ಟರೆ ಅದು ದೇಶದ ಧ್ವಜದ ಅಡಿಯಲ್ಲಿ ಆಡಲು ಸಾಧ್ಯವಿಲ್ಲ.

lokesh

Recent Posts

ನಿವೃತ್ತ ಅರಣ್ಯಾಧಿಕಾರಿ ಮನೆಯಿಂದ 2ಕೋಟಿ ರೂ. ಮೌಲ್ಯದ ಆನೆ ದಂತ ವಶ

ಮೈಸೂರು : ವನ್ಯಜೀವಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆ ನಡೆಸಿರುವ ಮಹಾರಾಷ್ಟ್ರ ರಾಜ್ಯದ ನಾಗ್ಪುರ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು(ಡಿಆರ್‌ಐ) ಮೈಸೂರಿನಲ್ಲಿ ಶಂಕಿತ…

5 mins ago

ಎಸ್‌ಐಆರ್‌ ಕಾನೂನುಬದ್ಧವಾಗಿದೆ : ಸುಪ್ರಿಂ ಮಹತ್ವದ ಆದೇಶ

ಹೊಸದಿಲ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರುದ್ಧ ಎದ್ದಿದ್ದ ರಾಜಕೀಯ…

55 mins ago

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

4 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

4 hours ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

6 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

7 hours ago