ಕ್ರೀಡೆ

ವರ್ಲ್ಡ್‌ ಕಪ್​ನಿಂದ ದಕ್ಷಿಣ ಆಫ್ರಿಕಾ ತಂಡ ಬ್ಯಾನ್​

ಬೆಂಗಳೂರು : ಕ್ರಿಕೆಟ್​ ವಿಶ್ವಕಪ್ ವಿಚಾರದಲ್ಲಿ ದುರದೃಷ್ಟ ದಕ್ಷಿಣ ಆಫ್ರಿಕಾ ತಂಡದ ಹೆಗಲೇರಿ ಕುಳಿತಿರುತ್ತದೆ. ಆ ತಂಡ ಎಷ್ಟೇ ಉತ್ತಮ ಪ್ರದರ್ಶನ ನೀಡಿದರೂ ಕಪ್​ ಗೆಲ್ಲುವುದಕ್ಕೆ ಸಾಧ್ಯವಾಗಿಲ್ಲ. ಆದರೆ ಈ ಬಾರಿ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ 2023 ರಲ್ಲಿ, ವಿಶ್ವ ಉದ್ದೀಪನ ಮದ್ದು ವಿರೋಧಿ ಸಂಸ್ಥೆಯ ಡೋಪಿಂಗ್ ವಿರೋಧಿ ನಿಯಮಗಳನ್ನು ಅನುಸರಿಸದ ಕಾರಣ ಅವರು ಮತ್ತೊಂದು ಬಗೆಯ ಸಮಸ್ಯೆಗೆ ಸಿಲುಕಿದ ಹರಿಣಗಳ ಪಡೆ. ಕ್ರಿಕ್​ಬಜ್​ ವರದಿ ಪ್ರಕಾರ ವಾಡಾದ ನಿಯಮ ಪಾಲಿಸದ ಕಾರಣ ತಂಡಕ್ಕೆ ನಿರ್ಬಂಧ ಹೇರುವ ಸಾಧ್ಯತೆಗಳಿವೆ.

ದಕ್ಷಿಣ ಆಫ್ರಿಕಾದ ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಸಂಸ್ಥೆ 2021 ರಲ್ಲಿ ತಂದ ಜಾರಿಗೆ ತಂದಿರುವ ವಾಡಾ ಸಂಹಿತೆಯನ್ನು ಕ್ರಿಕೆಟ್​ ತಂಡ ಅನುಸರಿಸಿಲ್ಲ ಎಂದು ವರದಿ ಸೂಚಿಸುತ್ತದೆ. ಇಂಥ ಘಟನೆಗಳು ಕ್ರಿಕೆಟ್ ಅನ್ನು ಒಲಿಂಪಿಕ್ಸ್ ಸ್ಪರ್ಧೆಯ ಪಟ್ಟಿಗೆ ತರಲು ಅಡಚಣೆಯನ್ನುಂಟುಮಾಡುತ್ತವೆ. ಒಲಿಂಪಿಕ್ಸ್​​ನಲ್ಲಿ ಕ್ರಿಕೆಟ್ ಸೇರ್ಪಡೆಗೆ ಸಂಬಂಧಿಸಿದಂತೆ ಐಒಸಿ ಅಧಿಕಾರಿಗಳು ಮುಂದಿನ ವಾರ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಈ ವೇಳೆಯಲ್ಲಿ ದಕ್ಷಿಣ ಆಫ್ರಿಕಾ ತಂಡ ಯಡವಟ್ಟು ಮಾಡಿಕೊಂಡಿದೆ.

ಈ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ಶ್ರೀಲಂಕಾ ವಿರುದ್ಧ ಒಂದು ಪಂದ್ಯವನ್ನಾಡಿದೆ. ಅವರು 400 ಕ್ಕೂ ಹೆಚ್ಚು ರನ್ ಗಳಿಸಿದ್ದರೆ. ಬೃಹತ್​ ಅಂತರದಿಂದ ಗೆಲುವು ಸಾಧಿಸಿದೆ. ಅತ್ಯುತ್ತಮ ಆರಂಭದ ಹೊರತಾಗಿಯೂ ಮುಂದಿನ ಪಂದ್ಯಗಳಲ್ಲಿ ತಂಡದ ಭವಿಷ್ಯ ಏನಾಗಲಿದೆ ಎಂಬುದು ವಾಡಾದ ನಿರ್ಧಾರದ ಮೇಲೆ ನಿಂತಿದೆ. ವಾಡಾ ಹೇಳಿಕೆಯಲ್ಲಿ ದಕ್ಷಿಣ ಆಫ್ರಿಕಾದ ಮೇಲೆ ವಿಧಿಸಬಹುದಾದ ನಿರ್ಬಂಧಗಳನ್ನು ಪಟ್ಟಿ ಮಾಡಿದೆ.

ದಕ್ಷಿಣ ಆಫ್ರಿಕಾದ ಸಂಪೂರ್ಣ ನಿಷೇಧವನ್ನು ತಳ್ಳಿಹಾಕಲಾಗಿದೆ. ಹೀಗಾಗಿ ಹಾಲಿ ವಿಶ್ವ ಕಪ್​ನಲ್ಲಿ ತಂಡವು ಆಟವನ್ನು ಮುಂದುವರಿಸುವ ಸಾಧ್ಯತೆಗಳಿವೆ. ಆದರೆ, ವಾಡಾ ದಕ್ಷಿಣ ಆಫ್ರಿಕಾವನ್ನು ಹೇಗೆ ನಿರ್ಬಂಧಿಸಬಹುದು ಎಂಬ ಮಾಹಿತಿಯನ್ನೂ ನೀಡಿದೆ. ಎಸ್ಎಐಡಿಎಸ್ ಪುನಃಸ್ಥಾಪನೆಯಾಗುವವರೆಗೆ ಪ್ರಾದೇಶಿಕ ಖಂಡಾಂತರ ಮತ್ತು ವಿಶ್ವ ಚಾಂಪಿಯನ್​ಶಿಪ್​ಗಳು ಮತ್ತು ಪ್ರಮುಖ ಕ್ರೀಡಾಕೂಟಗಳು (ಒಲಿಂಪಿಕ್ ಕ್ರೀಡಾಕೂಟ ಮತ್ತು ಪ್ಯಾರಾಲಿಂಪಿಕ್ ಕ್ರೀಡಾಕೂಟಗಳನ್ನು ಹೊರತುಪಡಿಸಿ) ಆಯೋಜಿಸುವ ಕಾರ್ಯಕ್ರಮಗಳಲ್ಲಿ ದಕ್ಷಿಣ ಆಫ್ರಿಕಾದ ಧ್ವಜವನ್ನು ಹಾರಿಸಲು ಬಿಡುವುದಿಲ್ಲ. ಹೀಗಾಗಿ ಒಂದು ವೇಳೆ ದಕ್ಷಿಣ ಆಫ್ರಿಕಾ ವಾಡಾದ ನಿರ್ಬಂಧಕ್ಕೆ ಒಳಪಟ್ಟರೆ ಅದು ದೇಶದ ಧ್ವಜದ ಅಡಿಯಲ್ಲಿ ಆಡಲು ಸಾಧ್ಯವಿಲ್ಲ.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

13 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago