ಕ್ರೀಡೆ

ಮನು ಭಾಕರ್‌, ಡಿ.ಗುಕೇಶ್‌ ಸೇರಿದಂತೆ ನಾಲ್ವರಿಗೆ ಖೇಲ್‌ ರತ್ನ ಪ್ರಶಸ್ತಿ ಘೋಷಣೆ

ಹೊಸದಿಲ್ಲಿ: ಎರಡು ಒಲಿಂಪಿಕ್‌ನಲ್ಲಿ ಪದಕ ಗೆದ್ದ  ಮನು ಭಾಕರ್‌,  ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌ ಗೆದ್ದ ಡಿ.ಗುಕೇಶ್‌ ಸೇರಿದಂತೆ ನಾಲ್ವರು  ಕ್ರೀಡಾಪಟುಗಳಿಗೆ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿ ಒಲಿದು ಬಂದಿದೆ. ಈ ಬಗ್ಗೆ ಗುರುವಾರ ಕ್ರೀಡಾ ಸಚಿವಾಲಯವು ಅಧಿಕೃತವಾಗಿ ಘೋಷಣೆ ಮಾಡಿದೆ.

ಒಲಂಪಿಕ್‌ ಶೂಟಿಂಗ್‌ನಲ್ಲಿ 2 ಕಂಚಿನ ಪದಕ ಗೆದ್ದ ಮನು ಭಾಕರ್‌, ವಿಶ್ವ ಚೆಸ್‌ ಚಾಂಪಿಯನ್‌ ಡಿ. ಗುಕೇಶ್‌, ಪ್ಯಾರಾಂಲಿಪಿಕ್ಸ್‌ ಪ್ರವೀಣ್‌ ಕುಮಾರ್ ಹಾಗೂ‌ ಭಾರತದ ಹಾಕಿ ತಂಡದ ನಾಯಕ ಹರ್ಮನ್‌ ಪ್ರೀತ್‌ ಖೇಲ್‌ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜ.17ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕ್ರೀಡಾಪಟುಗಳಿಗೆ ಖೇಲ್‌ ರತ್ನ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ಕ್ರಮಬದ್ಧವಾದ ಪರಿಶೀಲನೆಯ ನಂತರ ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ ಕ್ರೀಡಾಪಟುಗಳು, ತರಬೇತಿದಾರರು, ವಿಶ್ವವಿದ್ಯಾಲಯ ಮತ್ತು ಘಟಕಗಳಿಗೆ ಪ್ರಶಸ್ತಿಯನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕ್ರೀಡಾ ಸಚಿವಾಲಯ ಹೇಳಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

8 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

9 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

9 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

9 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

9 hours ago