ಹೊಸದಿಲ್ಲಿ: ಎರಡು ಒಲಿಂಪಿಕ್ನಲ್ಲಿ ಪದಕ ಗೆದ್ದ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್ಶಿಪ್ ಗೆದ್ದ ಡಿ.ಗುಕೇಶ್ ಸೇರಿದಂತೆ ನಾಲ್ವರು ಕ್ರೀಡಾಪಟುಗಳಿಗೆ ಮೇಜರ್ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿ ಒಲಿದು ಬಂದಿದೆ. ಈ ಬಗ್ಗೆ ಗುರುವಾರ ಕ್ರೀಡಾ ಸಚಿವಾಲಯವು ಅಧಿಕೃತವಾಗಿ ಘೋಷಣೆ ಮಾಡಿದೆ.
ಒಲಂಪಿಕ್ ಶೂಟಿಂಗ್ನಲ್ಲಿ 2 ಕಂಚಿನ ಪದಕ ಗೆದ್ದ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್ ಡಿ. ಗುಕೇಶ್, ಪ್ಯಾರಾಂಲಿಪಿಕ್ಸ್ ಪ್ರವೀಣ್ ಕುಮಾರ್ ಹಾಗೂ ಭಾರತದ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜ.17ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ಕ್ರಮಬದ್ಧವಾದ ಪರಿಶೀಲನೆಯ ನಂತರ ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ ಕ್ರೀಡಾಪಟುಗಳು, ತರಬೇತಿದಾರರು, ವಿಶ್ವವಿದ್ಯಾಲಯ ಮತ್ತು ಘಟಕಗಳಿಗೆ ಪ್ರಶಸ್ತಿಯನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕ್ರೀಡಾ ಸಚಿವಾಲಯ ಹೇಳಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…