ಕ್ರೀಡೆ

ಜನರನ್ನು ಒಟ್ಟುಗೂಡಿಸುವ ವಿಷಯ ಕ್ರೀಡೆ : ರವಿಶಂಕರ್ ಗುರೂಜಿ

ಕ್ರೀಡೆ, ಕಾರ್ಪೊರೇಟ್ ಆಡಳಿತ ಮತ್ತು ಮಾನವೀಯತೆಯನ್ನು ಉತ್ತೇಜಿಸುವಲ್ಲಿ ಕ್ರೀಡೆಗಳ ಪಾತ್ರ ಮತ್ತು ನೈತಿಕತೆಯನ್ನು ಕಾಪಾಡುವ ಕುರಿತಾದ 6ನೇ ವಿಶ್ವ ಶೃಂಗಸಭೆಯನ್ನು ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಜೊತೆಗೂಡಿ ವರ್ಲ್ಡ್ ಫೋರಮ್ ಫಾರ್ ಎಥಿಕ್ಸ್ ಇನ್ ಬ್ಯುಸಿನೆಸ್ ಆಯೋಜಿಸಿದೆ.  ಈ ವಿಶೇಷ ಸಂವಾದ ಕಾರ್ಯಕ್ರಮ ಅಕ್ಟೋಬರ್ 13 ಮತ್ತು 14 ರಂದು ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಶ್ರೀ ರವಿಶಂಕರ್ ಗುರೂಜಿ, “ಕ್ರೀಡೆಯು ಜನರನ್ನು ಒಟ್ಟುಗೂಡಿಸುವ ಒಂದು ವಿಷಯವಾಗಿದೆ. ಆದರೆ ಇಂದು ಕ್ರೀಡೆಯನ್ನು ಯುದ್ಧದಂತೆ ಆಡಲಾಗುತ್ತದೆ. ಅಲ್ಲದೆ ಕದನಗಳಂತೆ ಕ್ರೀಡೆಯನ್ನು ಬಿಂಬಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಆಟಗಾರರು ಜವಾಬ್ದಾರಿಯ ಪ್ರಜ್ಞೆಯೊಂದಿಗೆ ಆಡಬೇಕು. ಹಾಗೆಯೇ ವೀಕ್ಷಕರು ಮತ್ತು ಅಭಿಮಾನಿಗಳು ಸಹ ಕ್ರೀಡಾಸ್ಪೂರ್ತಿಯ ಪ್ರಜ್ಞೆಯನ್ನು ಹೊಂದಿರಬೇಕು. ಕ್ರೀಡೆಯಲ್ಲಿ ನೈತಿಕತೆಯು ಕೇವಲ ಒಬ್ಬನು ಮಾಡಬೇಕಿರುವ ವಿಷಯವಲ್ಲ. ಇದರ ಅರಿವು ಎಲ್ಲರಿಗೂ ಬಹಳ ಮುಖ್ಯವಾಗಿದೆ ಎಂದು ಗುರೂಜಿ ತಿಳಿಸಿದರು.

ಕಾನೂನು ಮತ್ತು ನ್ಯಾಯ ಸಚಿವ ಶ್ರೀ ಕಿರಣ್ ರಿಜಿಜು ಭಾರತದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಅಗತ್ಯತೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಆಟಗಾರರಿಗೆ ಕ್ರೀಡಾ ಪರಿಸರ ವ್ಯವಸ್ಥೆಯಲ್ಲಿ ವೃತ್ತಿ ಅವಕಾಶಗಳನ್ನು ಸೃಷ್ಟಿಸುತ್ತಾರೆ. ತರಬೇತುದಾರರು, ವ್ಯವಸ್ಥಾಪಕರು, ಕ್ರೀಡಾ ವ್ಯವಹಾರಗಳು ಮತ್ತು ಕ್ರಿಕೆಟ್ ಹೊರತಾಗಿಯ ಕ್ರೀಡೆಗಳನ್ನು ವೀಕ್ಷಕರಿಗೆ ತಲುಪಿಸುವಲ್ಲಿ ಮುಖ್ಯ ಪಾತ್ರವಹಿಸಬೇಕೆಂದು ತಿಳಿಸಿದರು.

“ಕ್ರೀಡೆ ಕೇವಲ ಆಟವಾಡುವುದಲ್ಲ. ಅದು ರಾಷ್ಟ್ರಗೀತೆಯೊಂದಿಗೆ ದೇಶಕ್ಕೆ ಗೌರವವನ್ನು ತರುತ್ತದೆ. ಅಂದರೆ ಕ್ರೀಡೆಗಳಲ್ಲಿ ನೀವು ಹಿಂಸೆಯಿಲ್ಲದೆ ಅಂತರರಾಷ್ಟ್ರೀಯ ರಂಗದಲ್ಲಿ ಗೆಲ್ಲಬಹುದು.” ಎಂದು ಮಾಜಿ ಹಾಕಿ ಆಟಗಾರ ಸಂದೀಪ್ ಸಿಂಗ್ ಹೇಳಿದರು.

ಇದೇ ವೇಳೆ ಈ ಕಾರ್ಯಕ್ರಮದಲ್ಲಿ ಭಾರತೀಯ ಮಹಿಳಾ ರಾಷ್ಟ್ರೀಯ ಹಾಕಿ ತಂಡದ ನಾಯಕಿ ಶ್ರೀಮತಿ ಸವಿತಾ ಪುನಿಯಾ , ಹಾಕಿ ಆಟಗಾರ ಪಿಆರ್ ಶ್ರೀಜೇಶ್, ಬಿಲಿಯರ್ಡ್-ಸ್ನೂಕರ್ ಚಾಂಪಿಯನ್ ಪಂಕಜ್ ಅಡ್ವಾಣಿ ಭಾರತೀಯ ಒಲಿಂಪಿಕ್ ಅಸೋಸಿಯೇಷನ್​ನ ಸದಸ್ಯರು ಸೇರಿದಂತೆ ಕ್ರೀಡಾ ಕ್ಷೇತ್ರದ ಅನೇಕರು ಹಾಜರಿದ್ದರು.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago