ಕ್ರೀಡೆ

ಜನರನ್ನು ಒಟ್ಟುಗೂಡಿಸುವ ವಿಷಯ ಕ್ರೀಡೆ : ರವಿಶಂಕರ್ ಗುರೂಜಿ

ಕ್ರೀಡೆ, ಕಾರ್ಪೊರೇಟ್ ಆಡಳಿತ ಮತ್ತು ಮಾನವೀಯತೆಯನ್ನು ಉತ್ತೇಜಿಸುವಲ್ಲಿ ಕ್ರೀಡೆಗಳ ಪಾತ್ರ ಮತ್ತು ನೈತಿಕತೆಯನ್ನು ಕಾಪಾಡುವ ಕುರಿತಾದ 6ನೇ ವಿಶ್ವ ಶೃಂಗಸಭೆಯನ್ನು ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಜೊತೆಗೂಡಿ ವರ್ಲ್ಡ್ ಫೋರಮ್ ಫಾರ್ ಎಥಿಕ್ಸ್ ಇನ್ ಬ್ಯುಸಿನೆಸ್ ಆಯೋಜಿಸಿದೆ.  ಈ ವಿಶೇಷ ಸಂವಾದ ಕಾರ್ಯಕ್ರಮ ಅಕ್ಟೋಬರ್ 13 ಮತ್ತು 14 ರಂದು ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಶ್ರೀ ರವಿಶಂಕರ್ ಗುರೂಜಿ, “ಕ್ರೀಡೆಯು ಜನರನ್ನು ಒಟ್ಟುಗೂಡಿಸುವ ಒಂದು ವಿಷಯವಾಗಿದೆ. ಆದರೆ ಇಂದು ಕ್ರೀಡೆಯನ್ನು ಯುದ್ಧದಂತೆ ಆಡಲಾಗುತ್ತದೆ. ಅಲ್ಲದೆ ಕದನಗಳಂತೆ ಕ್ರೀಡೆಯನ್ನು ಬಿಂಬಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಆಟಗಾರರು ಜವಾಬ್ದಾರಿಯ ಪ್ರಜ್ಞೆಯೊಂದಿಗೆ ಆಡಬೇಕು. ಹಾಗೆಯೇ ವೀಕ್ಷಕರು ಮತ್ತು ಅಭಿಮಾನಿಗಳು ಸಹ ಕ್ರೀಡಾಸ್ಪೂರ್ತಿಯ ಪ್ರಜ್ಞೆಯನ್ನು ಹೊಂದಿರಬೇಕು. ಕ್ರೀಡೆಯಲ್ಲಿ ನೈತಿಕತೆಯು ಕೇವಲ ಒಬ್ಬನು ಮಾಡಬೇಕಿರುವ ವಿಷಯವಲ್ಲ. ಇದರ ಅರಿವು ಎಲ್ಲರಿಗೂ ಬಹಳ ಮುಖ್ಯವಾಗಿದೆ ಎಂದು ಗುರೂಜಿ ತಿಳಿಸಿದರು.

ಕಾನೂನು ಮತ್ತು ನ್ಯಾಯ ಸಚಿವ ಶ್ರೀ ಕಿರಣ್ ರಿಜಿಜು ಭಾರತದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಅಗತ್ಯತೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಆಟಗಾರರಿಗೆ ಕ್ರೀಡಾ ಪರಿಸರ ವ್ಯವಸ್ಥೆಯಲ್ಲಿ ವೃತ್ತಿ ಅವಕಾಶಗಳನ್ನು ಸೃಷ್ಟಿಸುತ್ತಾರೆ. ತರಬೇತುದಾರರು, ವ್ಯವಸ್ಥಾಪಕರು, ಕ್ರೀಡಾ ವ್ಯವಹಾರಗಳು ಮತ್ತು ಕ್ರಿಕೆಟ್ ಹೊರತಾಗಿಯ ಕ್ರೀಡೆಗಳನ್ನು ವೀಕ್ಷಕರಿಗೆ ತಲುಪಿಸುವಲ್ಲಿ ಮುಖ್ಯ ಪಾತ್ರವಹಿಸಬೇಕೆಂದು ತಿಳಿಸಿದರು.

“ಕ್ರೀಡೆ ಕೇವಲ ಆಟವಾಡುವುದಲ್ಲ. ಅದು ರಾಷ್ಟ್ರಗೀತೆಯೊಂದಿಗೆ ದೇಶಕ್ಕೆ ಗೌರವವನ್ನು ತರುತ್ತದೆ. ಅಂದರೆ ಕ್ರೀಡೆಗಳಲ್ಲಿ ನೀವು ಹಿಂಸೆಯಿಲ್ಲದೆ ಅಂತರರಾಷ್ಟ್ರೀಯ ರಂಗದಲ್ಲಿ ಗೆಲ್ಲಬಹುದು.” ಎಂದು ಮಾಜಿ ಹಾಕಿ ಆಟಗಾರ ಸಂದೀಪ್ ಸಿಂಗ್ ಹೇಳಿದರು.

ಇದೇ ವೇಳೆ ಈ ಕಾರ್ಯಕ್ರಮದಲ್ಲಿ ಭಾರತೀಯ ಮಹಿಳಾ ರಾಷ್ಟ್ರೀಯ ಹಾಕಿ ತಂಡದ ನಾಯಕಿ ಶ್ರೀಮತಿ ಸವಿತಾ ಪುನಿಯಾ , ಹಾಕಿ ಆಟಗಾರ ಪಿಆರ್ ಶ್ರೀಜೇಶ್, ಬಿಲಿಯರ್ಡ್-ಸ್ನೂಕರ್ ಚಾಂಪಿಯನ್ ಪಂಕಜ್ ಅಡ್ವಾಣಿ ಭಾರತೀಯ ಒಲಿಂಪಿಕ್ ಅಸೋಸಿಯೇಷನ್​ನ ಸದಸ್ಯರು ಸೇರಿದಂತೆ ಕ್ರೀಡಾ ಕ್ಷೇತ್ರದ ಅನೇಕರು ಹಾಜರಿದ್ದರು.

andolana

Recent Posts

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

41 mins ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

2 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

5 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

5 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

9 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

9 hours ago