ಕ್ರೀಡೆ

ಜನರನ್ನು ಒಟ್ಟುಗೂಡಿಸುವ ವಿಷಯ ಕ್ರೀಡೆ : ರವಿಶಂಕರ್ ಗುರೂಜಿ

ಕ್ರೀಡೆ, ಕಾರ್ಪೊರೇಟ್ ಆಡಳಿತ ಮತ್ತು ಮಾನವೀಯತೆಯನ್ನು ಉತ್ತೇಜಿಸುವಲ್ಲಿ ಕ್ರೀಡೆಗಳ ಪಾತ್ರ ಮತ್ತು ನೈತಿಕತೆಯನ್ನು ಕಾಪಾಡುವ ಕುರಿತಾದ 6ನೇ ವಿಶ್ವ ಶೃಂಗಸಭೆಯನ್ನು ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಜೊತೆಗೂಡಿ ವರ್ಲ್ಡ್ ಫೋರಮ್ ಫಾರ್ ಎಥಿಕ್ಸ್ ಇನ್ ಬ್ಯುಸಿನೆಸ್ ಆಯೋಜಿಸಿದೆ.  ಈ ವಿಶೇಷ ಸಂವಾದ ಕಾರ್ಯಕ್ರಮ ಅಕ್ಟೋಬರ್ 13 ಮತ್ತು 14 ರಂದು ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಶ್ರೀ ರವಿಶಂಕರ್ ಗುರೂಜಿ, “ಕ್ರೀಡೆಯು ಜನರನ್ನು ಒಟ್ಟುಗೂಡಿಸುವ ಒಂದು ವಿಷಯವಾಗಿದೆ. ಆದರೆ ಇಂದು ಕ್ರೀಡೆಯನ್ನು ಯುದ್ಧದಂತೆ ಆಡಲಾಗುತ್ತದೆ. ಅಲ್ಲದೆ ಕದನಗಳಂತೆ ಕ್ರೀಡೆಯನ್ನು ಬಿಂಬಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಆಟಗಾರರು ಜವಾಬ್ದಾರಿಯ ಪ್ರಜ್ಞೆಯೊಂದಿಗೆ ಆಡಬೇಕು. ಹಾಗೆಯೇ ವೀಕ್ಷಕರು ಮತ್ತು ಅಭಿಮಾನಿಗಳು ಸಹ ಕ್ರೀಡಾಸ್ಪೂರ್ತಿಯ ಪ್ರಜ್ಞೆಯನ್ನು ಹೊಂದಿರಬೇಕು. ಕ್ರೀಡೆಯಲ್ಲಿ ನೈತಿಕತೆಯು ಕೇವಲ ಒಬ್ಬನು ಮಾಡಬೇಕಿರುವ ವಿಷಯವಲ್ಲ. ಇದರ ಅರಿವು ಎಲ್ಲರಿಗೂ ಬಹಳ ಮುಖ್ಯವಾಗಿದೆ ಎಂದು ಗುರೂಜಿ ತಿಳಿಸಿದರು.

ಕಾನೂನು ಮತ್ತು ನ್ಯಾಯ ಸಚಿವ ಶ್ರೀ ಕಿರಣ್ ರಿಜಿಜು ಭಾರತದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಅಗತ್ಯತೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಆಟಗಾರರಿಗೆ ಕ್ರೀಡಾ ಪರಿಸರ ವ್ಯವಸ್ಥೆಯಲ್ಲಿ ವೃತ್ತಿ ಅವಕಾಶಗಳನ್ನು ಸೃಷ್ಟಿಸುತ್ತಾರೆ. ತರಬೇತುದಾರರು, ವ್ಯವಸ್ಥಾಪಕರು, ಕ್ರೀಡಾ ವ್ಯವಹಾರಗಳು ಮತ್ತು ಕ್ರಿಕೆಟ್ ಹೊರತಾಗಿಯ ಕ್ರೀಡೆಗಳನ್ನು ವೀಕ್ಷಕರಿಗೆ ತಲುಪಿಸುವಲ್ಲಿ ಮುಖ್ಯ ಪಾತ್ರವಹಿಸಬೇಕೆಂದು ತಿಳಿಸಿದರು.

“ಕ್ರೀಡೆ ಕೇವಲ ಆಟವಾಡುವುದಲ್ಲ. ಅದು ರಾಷ್ಟ್ರಗೀತೆಯೊಂದಿಗೆ ದೇಶಕ್ಕೆ ಗೌರವವನ್ನು ತರುತ್ತದೆ. ಅಂದರೆ ಕ್ರೀಡೆಗಳಲ್ಲಿ ನೀವು ಹಿಂಸೆಯಿಲ್ಲದೆ ಅಂತರರಾಷ್ಟ್ರೀಯ ರಂಗದಲ್ಲಿ ಗೆಲ್ಲಬಹುದು.” ಎಂದು ಮಾಜಿ ಹಾಕಿ ಆಟಗಾರ ಸಂದೀಪ್ ಸಿಂಗ್ ಹೇಳಿದರು.

ಇದೇ ವೇಳೆ ಈ ಕಾರ್ಯಕ್ರಮದಲ್ಲಿ ಭಾರತೀಯ ಮಹಿಳಾ ರಾಷ್ಟ್ರೀಯ ಹಾಕಿ ತಂಡದ ನಾಯಕಿ ಶ್ರೀಮತಿ ಸವಿತಾ ಪುನಿಯಾ , ಹಾಕಿ ಆಟಗಾರ ಪಿಆರ್ ಶ್ರೀಜೇಶ್, ಬಿಲಿಯರ್ಡ್-ಸ್ನೂಕರ್ ಚಾಂಪಿಯನ್ ಪಂಕಜ್ ಅಡ್ವಾಣಿ ಭಾರತೀಯ ಒಲಿಂಪಿಕ್ ಅಸೋಸಿಯೇಷನ್​ನ ಸದಸ್ಯರು ಸೇರಿದಂತೆ ಕ್ರೀಡಾ ಕ್ಷೇತ್ರದ ಅನೇಕರು ಹಾಜರಿದ್ದರು.

andolana

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

15 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

15 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

15 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

15 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

15 hours ago