ಕ್ರೀಡೆ

ಜನರನ್ನು ಒಟ್ಟುಗೂಡಿಸುವ ವಿಷಯ ಕ್ರೀಡೆ : ರವಿಶಂಕರ್ ಗುರೂಜಿ

ಕ್ರೀಡೆ, ಕಾರ್ಪೊರೇಟ್ ಆಡಳಿತ ಮತ್ತು ಮಾನವೀಯತೆಯನ್ನು ಉತ್ತೇಜಿಸುವಲ್ಲಿ ಕ್ರೀಡೆಗಳ ಪಾತ್ರ ಮತ್ತು ನೈತಿಕತೆಯನ್ನು ಕಾಪಾಡುವ ಕುರಿತಾದ 6ನೇ ವಿಶ್ವ ಶೃಂಗಸಭೆಯನ್ನು ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಜೊತೆಗೂಡಿ ವರ್ಲ್ಡ್ ಫೋರಮ್ ಫಾರ್ ಎಥಿಕ್ಸ್ ಇನ್ ಬ್ಯುಸಿನೆಸ್ ಆಯೋಜಿಸಿದೆ.  ಈ ವಿಶೇಷ ಸಂವಾದ ಕಾರ್ಯಕ್ರಮ ಅಕ್ಟೋಬರ್ 13 ಮತ್ತು 14 ರಂದು ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಶ್ರೀ ರವಿಶಂಕರ್ ಗುರೂಜಿ, “ಕ್ರೀಡೆಯು ಜನರನ್ನು ಒಟ್ಟುಗೂಡಿಸುವ ಒಂದು ವಿಷಯವಾಗಿದೆ. ಆದರೆ ಇಂದು ಕ್ರೀಡೆಯನ್ನು ಯುದ್ಧದಂತೆ ಆಡಲಾಗುತ್ತದೆ. ಅಲ್ಲದೆ ಕದನಗಳಂತೆ ಕ್ರೀಡೆಯನ್ನು ಬಿಂಬಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಆಟಗಾರರು ಜವಾಬ್ದಾರಿಯ ಪ್ರಜ್ಞೆಯೊಂದಿಗೆ ಆಡಬೇಕು. ಹಾಗೆಯೇ ವೀಕ್ಷಕರು ಮತ್ತು ಅಭಿಮಾನಿಗಳು ಸಹ ಕ್ರೀಡಾಸ್ಪೂರ್ತಿಯ ಪ್ರಜ್ಞೆಯನ್ನು ಹೊಂದಿರಬೇಕು. ಕ್ರೀಡೆಯಲ್ಲಿ ನೈತಿಕತೆಯು ಕೇವಲ ಒಬ್ಬನು ಮಾಡಬೇಕಿರುವ ವಿಷಯವಲ್ಲ. ಇದರ ಅರಿವು ಎಲ್ಲರಿಗೂ ಬಹಳ ಮುಖ್ಯವಾಗಿದೆ ಎಂದು ಗುರೂಜಿ ತಿಳಿಸಿದರು.

ಕಾನೂನು ಮತ್ತು ನ್ಯಾಯ ಸಚಿವ ಶ್ರೀ ಕಿರಣ್ ರಿಜಿಜು ಭಾರತದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಅಗತ್ಯತೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಆಟಗಾರರಿಗೆ ಕ್ರೀಡಾ ಪರಿಸರ ವ್ಯವಸ್ಥೆಯಲ್ಲಿ ವೃತ್ತಿ ಅವಕಾಶಗಳನ್ನು ಸೃಷ್ಟಿಸುತ್ತಾರೆ. ತರಬೇತುದಾರರು, ವ್ಯವಸ್ಥಾಪಕರು, ಕ್ರೀಡಾ ವ್ಯವಹಾರಗಳು ಮತ್ತು ಕ್ರಿಕೆಟ್ ಹೊರತಾಗಿಯ ಕ್ರೀಡೆಗಳನ್ನು ವೀಕ್ಷಕರಿಗೆ ತಲುಪಿಸುವಲ್ಲಿ ಮುಖ್ಯ ಪಾತ್ರವಹಿಸಬೇಕೆಂದು ತಿಳಿಸಿದರು.

“ಕ್ರೀಡೆ ಕೇವಲ ಆಟವಾಡುವುದಲ್ಲ. ಅದು ರಾಷ್ಟ್ರಗೀತೆಯೊಂದಿಗೆ ದೇಶಕ್ಕೆ ಗೌರವವನ್ನು ತರುತ್ತದೆ. ಅಂದರೆ ಕ್ರೀಡೆಗಳಲ್ಲಿ ನೀವು ಹಿಂಸೆಯಿಲ್ಲದೆ ಅಂತರರಾಷ್ಟ್ರೀಯ ರಂಗದಲ್ಲಿ ಗೆಲ್ಲಬಹುದು.” ಎಂದು ಮಾಜಿ ಹಾಕಿ ಆಟಗಾರ ಸಂದೀಪ್ ಸಿಂಗ್ ಹೇಳಿದರು.

ಇದೇ ವೇಳೆ ಈ ಕಾರ್ಯಕ್ರಮದಲ್ಲಿ ಭಾರತೀಯ ಮಹಿಳಾ ರಾಷ್ಟ್ರೀಯ ಹಾಕಿ ತಂಡದ ನಾಯಕಿ ಶ್ರೀಮತಿ ಸವಿತಾ ಪುನಿಯಾ , ಹಾಕಿ ಆಟಗಾರ ಪಿಆರ್ ಶ್ರೀಜೇಶ್, ಬಿಲಿಯರ್ಡ್-ಸ್ನೂಕರ್ ಚಾಂಪಿಯನ್ ಪಂಕಜ್ ಅಡ್ವಾಣಿ ಭಾರತೀಯ ಒಲಿಂಪಿಕ್ ಅಸೋಸಿಯೇಷನ್​ನ ಸದಸ್ಯರು ಸೇರಿದಂತೆ ಕ್ರೀಡಾ ಕ್ಷೇತ್ರದ ಅನೇಕರು ಹಾಜರಿದ್ದರು.

andolana

Recent Posts

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

2 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

3 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

3 hours ago

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

4 hours ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

5 hours ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

6 hours ago