ಹೊಸದಿಲ್ಲಿ: ಮೊನ್ನೆಯಷ್ಟೇ ( ಸೆಪ್ಟೆಂಬರ್ 8 ) ಮುಕ್ತಾಯಗೊಂಡ 2024ರ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಪರ ಪದಕಗಳನ್ನು ಗೆದ್ದ ಕ್ರೀಡಾಪಟುಗಳಿಗೆ ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಇಂದು ( ಸೆಪ್ಟೆಂಬರ್ 10 ) ನಡೆದ ಅಭಿನಂದನಾ ಸಮಾರಂಭದಲ್ಲಿ ನಗದು ಬಹುಮಾನವನ್ನು ಘೋಷಿಸಿದರು.
ಪ್ಯಾರಾಲಿಂಪಿಕ್ಸ್ ಕ್ರೀಡೆಗಳಲ್ಲಿ ಚಿನ್ನ ಗೆದ್ದ ಕ್ರೀಡಾಪಟುಗಳಿಗೆ 75 ಲಕ್ಷ ರೂ, ಬೆಳ್ಳಿ ಗೆದ್ದವರಿಗೆ 50 ಲಕ್ಷ ರೂ ಮತ್ತು ಕಂಚಿನ ಪದಕಗಳನ್ನು ಗೆದ್ದ ಕ್ರೀಡಾಪಟುಗಳಿಗೆ 30 ಲಕ್ಷ ರೂಪಾಯಿ ನಗದು ಬಹುಮಾನವನ್ನಾಗಿ ವಿತರಿಸಿ ಗೌರವಿಸಲಾಗುವುದು ಎಂದು ತಿಳಿಸಿದರು. ಇನ್ನು ಮಿಶ್ರ ತಂಡವಾಗಿ ಕಂಚಿನ ಪದಕ ಗೆದ್ದವರಿಗೆ ತಲಾ 22.5 ಲಕ್ಷ ರೂಪಾಯಿಗಳನ್ನು ಬಹುಮಾನವನ್ನಾಗಿ ನೀಡಲಾಗುವುದು.
ಈ ಬಾರಿಯ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಒಟ್ಟು 29 ಪದಕಗಳನ್ನು ಗೆದ್ದು ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಶ್ರೇಷ್ಠ ಸಾಧನೆಯನ್ನು ಮಾಡಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…