ಹೊಸದಿಲ್ಲಿ: ಮೊನ್ನೆಯಷ್ಟೇ ( ಸೆಪ್ಟೆಂಬರ್ 8 ) ಮುಕ್ತಾಯಗೊಂಡ 2024ರ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಪರ ಪದಕಗಳನ್ನು ಗೆದ್ದ ಕ್ರೀಡಾಪಟುಗಳಿಗೆ ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಇಂದು ( ಸೆಪ್ಟೆಂಬರ್ 10 ) ನಡೆದ ಅಭಿನಂದನಾ ಸಮಾರಂಭದಲ್ಲಿ ನಗದು ಬಹುಮಾನವನ್ನು ಘೋಷಿಸಿದರು.
ಪ್ಯಾರಾಲಿಂಪಿಕ್ಸ್ ಕ್ರೀಡೆಗಳಲ್ಲಿ ಚಿನ್ನ ಗೆದ್ದ ಕ್ರೀಡಾಪಟುಗಳಿಗೆ 75 ಲಕ್ಷ ರೂ, ಬೆಳ್ಳಿ ಗೆದ್ದವರಿಗೆ 50 ಲಕ್ಷ ರೂ ಮತ್ತು ಕಂಚಿನ ಪದಕಗಳನ್ನು ಗೆದ್ದ ಕ್ರೀಡಾಪಟುಗಳಿಗೆ 30 ಲಕ್ಷ ರೂಪಾಯಿ ನಗದು ಬಹುಮಾನವನ್ನಾಗಿ ವಿತರಿಸಿ ಗೌರವಿಸಲಾಗುವುದು ಎಂದು ತಿಳಿಸಿದರು. ಇನ್ನು ಮಿಶ್ರ ತಂಡವಾಗಿ ಕಂಚಿನ ಪದಕ ಗೆದ್ದವರಿಗೆ ತಲಾ 22.5 ಲಕ್ಷ ರೂಪಾಯಿಗಳನ್ನು ಬಹುಮಾನವನ್ನಾಗಿ ನೀಡಲಾಗುವುದು.
ಈ ಬಾರಿಯ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಒಟ್ಟು 29 ಪದಕಗಳನ್ನು ಗೆದ್ದು ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಶ್ರೇಷ್ಠ ಸಾಧನೆಯನ್ನು ಮಾಡಿದೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…