ಕ್ರೀಡೆ

ಒಲಿಂಪಿಕ್ ಸಮಾರೋಪದಲ್ಲಿ ಮನುಭಾಕರ್ ಜೊತೆ ಶ್ರೀಜೇಶ್ ದ್ವಜಧಾರಿ

ಪ್ಯಾರಿಸ್‌: ಸುಮಾರು ಎರಡು ದಶಕಗಳ ಕಾಲ ಭಾರತದ ಹಾಕಿ ತಂಡದ ಗೋಲ್ ಕೀಪರ್ ಆಗಿ ಗಮನ ಸೆಳೆದಿದ್ದ ಕೇರಳ ಮೂಲದ ಶ್ರೀಜೇಶ್ ಅವರು 2024ರ ಪ್ಯಾರಿಸ್ ಒಲಿಂಪಕ್ ನನ್ನ ಕೊನೆಯ ಕಣ ಎಂದು ಈ ಮೊದಲೇ ಘೋಷಿಸಿದ್ದರು.

ಶ್ರೀಜೇಶ್ ನಿವೃತ್ತಿ ಹೊಂದುತ್ತಿರುವ ಕಾರಣದಿಂದಾಗಿ ಗೌರವ ಸಪರ್ಪಣೆಯ ಕಾರಣದಿಂದಾಗಿ ಮನುಭಾಕರ್ ಅವರೊಂದಿಗೆ ಭಾರತದ ಧ್ವಜಧಾರಿ ಆಯ್ಕೆ ಮಾಡಿರುವುದಾಗಿ ಭಾರತದ ಒಲಿಂಪಿಕ್ ಸಂಸ್ಥೆ ಐಒಎ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಈ ಬಾರಿಯ ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ಭಾರತ ಕಂಚಿನ ಪದಕ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶ್ರೀಜೇಶ್‌ ಅವರು, ಒಲಂಪಿಕ್ಸ್‌ನೊಂದಿಗೆ ನಿವೃತ್ತಿಯಾಗುವುದಾಗಿ ಹೇಳಿದ್ದರು. ಇವರಿಗೆ ಗೌರವ ಸೂಚಿಸುವ ಸಲುವಾಗಿ ಧ್ವಜಧಾರಿಯಾಗಿ ಮುನ್ನಡೆಯಲು ಅವಕಾಶ ನೀಡಿದೆ.

ಈ ಬಾರಿಯ ಒಲಿಂಪಿಕ್ ನಲ್ಲೆ ಶ್ರೀಜೆಶ್ ನಿವೃತ್ತರಾಗಿದ್ದು, ಜಾವಲಿನ್ ಥ್ರೋವರ್ ನೀರಜ್ ಚೋಪ್ರ ಅವರನ್ನು ಧ್ವಜಧಾರಿಯಾಗುವಂತೆ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ ಪಿಟಿ ಉಷಾ ಮಾತಕತೆ ನಡೆಸಿದ್ದರು. ಆದರೆ ನೀರಜ್‌ ಧ್ವಜಧಾರಿಯಾಗಿ ಶ್ರೀಜೇಶ್‌ ಅವರನ್ನು ನೇಮಕ ಮಾಡುವಂತ ಹೇಳಿದ್ದರು. ಆದ್ದರಿಂದ ಒಲಿಂಪಿಕ್ಸ್‌ಗೆ ನಿವೃತ್ತಿ ಘೊಷಿಸುತ್ತಿರುವ ಕಾರಣದಿಂದಾಗಿ ಈ ಬಾರಿ ಒಲಿಂಪಿಕ್ ನ ಸಮಾರೋಪ ಸಮಾರಂಭದಲ್ಲಿ ಮನುಭಾಕರ್ ಅವರೊಟ್ಟಿಗೆ ಶ್ರೀಜೇಶ್ ಧ್ವಜಧಾರಿಯಾಗಿ ಭಾರತದ ಬಾವುಟವನ್ನು ಹೊತ್ತು ಭಾಗವಹಿಸಲಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರವಾಸಿಗರ ಗಮನಕ್ಕೆ: ಬಲಮುರಿ ಮತ್ತು ಎಡಮುರಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್‌ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ…

11 mins ago

ಹನೂರು| ಬೀದಿ ನಾಯಿ ದಾಳಿ: ಜಿಂಕೆ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಅರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…

52 mins ago

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

4 hours ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

4 hours ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

4 hours ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

4 hours ago