ಕ್ರೀಡೆ

ಒಲಿಂಪಿಕ್ ಸಮಾರೋಪದಲ್ಲಿ ಮನುಭಾಕರ್ ಜೊತೆ ಶ್ರೀಜೇಶ್ ದ್ವಜಧಾರಿ

ಪ್ಯಾರಿಸ್‌: ಸುಮಾರು ಎರಡು ದಶಕಗಳ ಕಾಲ ಭಾರತದ ಹಾಕಿ ತಂಡದ ಗೋಲ್ ಕೀಪರ್ ಆಗಿ ಗಮನ ಸೆಳೆದಿದ್ದ ಕೇರಳ ಮೂಲದ ಶ್ರೀಜೇಶ್ ಅವರು 2024ರ ಪ್ಯಾರಿಸ್ ಒಲಿಂಪಕ್ ನನ್ನ ಕೊನೆಯ ಕಣ ಎಂದು ಈ ಮೊದಲೇ ಘೋಷಿಸಿದ್ದರು.

ಶ್ರೀಜೇಶ್ ನಿವೃತ್ತಿ ಹೊಂದುತ್ತಿರುವ ಕಾರಣದಿಂದಾಗಿ ಗೌರವ ಸಪರ್ಪಣೆಯ ಕಾರಣದಿಂದಾಗಿ ಮನುಭಾಕರ್ ಅವರೊಂದಿಗೆ ಭಾರತದ ಧ್ವಜಧಾರಿ ಆಯ್ಕೆ ಮಾಡಿರುವುದಾಗಿ ಭಾರತದ ಒಲಿಂಪಿಕ್ ಸಂಸ್ಥೆ ಐಒಎ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಈ ಬಾರಿಯ ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ಭಾರತ ಕಂಚಿನ ಪದಕ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶ್ರೀಜೇಶ್‌ ಅವರು, ಒಲಂಪಿಕ್ಸ್‌ನೊಂದಿಗೆ ನಿವೃತ್ತಿಯಾಗುವುದಾಗಿ ಹೇಳಿದ್ದರು. ಇವರಿಗೆ ಗೌರವ ಸೂಚಿಸುವ ಸಲುವಾಗಿ ಧ್ವಜಧಾರಿಯಾಗಿ ಮುನ್ನಡೆಯಲು ಅವಕಾಶ ನೀಡಿದೆ.

ಈ ಬಾರಿಯ ಒಲಿಂಪಿಕ್ ನಲ್ಲೆ ಶ್ರೀಜೆಶ್ ನಿವೃತ್ತರಾಗಿದ್ದು, ಜಾವಲಿನ್ ಥ್ರೋವರ್ ನೀರಜ್ ಚೋಪ್ರ ಅವರನ್ನು ಧ್ವಜಧಾರಿಯಾಗುವಂತೆ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ ಪಿಟಿ ಉಷಾ ಮಾತಕತೆ ನಡೆಸಿದ್ದರು. ಆದರೆ ನೀರಜ್‌ ಧ್ವಜಧಾರಿಯಾಗಿ ಶ್ರೀಜೇಶ್‌ ಅವರನ್ನು ನೇಮಕ ಮಾಡುವಂತ ಹೇಳಿದ್ದರು. ಆದ್ದರಿಂದ ಒಲಿಂಪಿಕ್ಸ್‌ಗೆ ನಿವೃತ್ತಿ ಘೊಷಿಸುತ್ತಿರುವ ಕಾರಣದಿಂದಾಗಿ ಈ ಬಾರಿ ಒಲಿಂಪಿಕ್ ನ ಸಮಾರೋಪ ಸಮಾರಂಭದಲ್ಲಿ ಮನುಭಾಕರ್ ಅವರೊಟ್ಟಿಗೆ ಶ್ರೀಜೇಶ್ ಧ್ವಜಧಾರಿಯಾಗಿ ಭಾರತದ ಬಾವುಟವನ್ನು ಹೊತ್ತು ಭಾಗವಹಿಸಲಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago