ಪ್ಯಾರಿಸ್: ಸುಮಾರು ಎರಡು ದಶಕಗಳ ಕಾಲ ಭಾರತದ ಹಾಕಿ ತಂಡದ ಗೋಲ್ ಕೀಪರ್ ಆಗಿ ಗಮನ ಸೆಳೆದಿದ್ದ ಕೇರಳ ಮೂಲದ ಶ್ರೀಜೇಶ್ ಅವರು 2024ರ ಪ್ಯಾರಿಸ್ ಒಲಿಂಪಕ್ ನನ್ನ ಕೊನೆಯ ಕಣ ಎಂದು ಈ ಮೊದಲೇ ಘೋಷಿಸಿದ್ದರು.
ಶ್ರೀಜೇಶ್ ನಿವೃತ್ತಿ ಹೊಂದುತ್ತಿರುವ ಕಾರಣದಿಂದಾಗಿ ಗೌರವ ಸಪರ್ಪಣೆಯ ಕಾರಣದಿಂದಾಗಿ ಮನುಭಾಕರ್ ಅವರೊಂದಿಗೆ ಭಾರತದ ಧ್ವಜಧಾರಿ ಆಯ್ಕೆ ಮಾಡಿರುವುದಾಗಿ ಭಾರತದ ಒಲಿಂಪಿಕ್ ಸಂಸ್ಥೆ ಐಒಎ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಈ ಬಾರಿಯ ಪ್ಯಾರಿಸ್ ಒಲಂಪಿಕ್ಸ್ನಲ್ಲಿ ಭಾರತ ಕಂಚಿನ ಪದಕ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶ್ರೀಜೇಶ್ ಅವರು, ಒಲಂಪಿಕ್ಸ್ನೊಂದಿಗೆ ನಿವೃತ್ತಿಯಾಗುವುದಾಗಿ ಹೇಳಿದ್ದರು. ಇವರಿಗೆ ಗೌರವ ಸೂಚಿಸುವ ಸಲುವಾಗಿ ಧ್ವಜಧಾರಿಯಾಗಿ ಮುನ್ನಡೆಯಲು ಅವಕಾಶ ನೀಡಿದೆ.
ಈ ಬಾರಿಯ ಒಲಿಂಪಿಕ್ ನಲ್ಲೆ ಶ್ರೀಜೆಶ್ ನಿವೃತ್ತರಾಗಿದ್ದು, ಜಾವಲಿನ್ ಥ್ರೋವರ್ ನೀರಜ್ ಚೋಪ್ರ ಅವರನ್ನು ಧ್ವಜಧಾರಿಯಾಗುವಂತೆ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ ಪಿಟಿ ಉಷಾ ಮಾತಕತೆ ನಡೆಸಿದ್ದರು. ಆದರೆ ನೀರಜ್ ಧ್ವಜಧಾರಿಯಾಗಿ ಶ್ರೀಜೇಶ್ ಅವರನ್ನು ನೇಮಕ ಮಾಡುವಂತ ಹೇಳಿದ್ದರು. ಆದ್ದರಿಂದ ಒಲಿಂಪಿಕ್ಸ್ಗೆ ನಿವೃತ್ತಿ ಘೊಷಿಸುತ್ತಿರುವ ಕಾರಣದಿಂದಾಗಿ ಈ ಬಾರಿ ಒಲಿಂಪಿಕ್ ನ ಸಮಾರೋಪ ಸಮಾರಂಭದಲ್ಲಿ ಮನುಭಾಕರ್ ಅವರೊಟ್ಟಿಗೆ ಶ್ರೀಜೇಶ್ ಧ್ವಜಧಾರಿಯಾಗಿ ಭಾರತದ ಬಾವುಟವನ್ನು ಹೊತ್ತು ಭಾಗವಹಿಸಲಿದ್ದಾರೆ.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…
ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್…