ಹೈದರಾಬಾದ್: ಸಂಘಟಿತ ಬ್ಯಾಟಿಂಗ್, ಬೌಲಿಂಗ್ ಪ್ರದರ್ಶನ ಮೂಲಕ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಕಟ್ಟಿಹಾಕುವಲ್ಲಿ ಪ್ಯಾಟ್ ಕಮಿನ್ಸ್ ನೇತೃತ್ವದ ಸನ್ರೈಸರ್ಸ್ ಹೈದರಾಬಾದ್ ತಂಡ ಯಶಸ್ವಿಯಾಗಿದೆ.
ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಲೀಗ್ ಪಂದ್ಯದಲ್ಲಿ ಎಸ್ಆರ್ಎಚ್ ತಂಡ ಸಿಎಸ್ಕೆ ತಂಡವನ್ನು 6 ವಿಕೆಟ್ಗಳ ಅಂತರದಿಂದ ಸೋಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 165 ರನ್ ಕಲೆ ಹಾಕಿದೆ. ಈ ಸಾಧಾರಣ ಮೊತ್ತ ಬೆನ್ನತ್ತಿದ ಎಸ್ಆರ್ಎಚ್ 18.1 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 166 ರನ್ ಕೆಲಹಾಕಿ ಗೆದ್ದು ಬೀಗಿತು.
ಸಿಎಸ್ಕೆ ಇನ್ನಿಂಗ್ಸ್: ಆರಂಭಿಕ ದಾಂಡಿಗರಾಗಿ ಬಂದ ನಾಯಕ ಋತುರಾಜ್ ಗಾಯಕ್ವಾಡ್ 26, ರಚಿನ್ ರವೀಂದ್ರ 12 ರನ್ಗೆ ಔಟಾದರು. ಬಳಿಕ ಬಂದ ಎಡಗೈ ದಾಂಡಿಗ ಶಿವಂ ದುಬೆ 24 ಎಸೆತಗಳಲ್ಲಿ 2 ಬೌಂಡರಿ, 4 ಸಿಕ್ಸರ್ ಸಹಿತ 45 ರನ್ ಬಾರಿಸಿದ್ದೇ ಸಿಎಸ್ಕೆ ಪರ ಅತ್ಯಧಿಕ ರನ್ ಆಗಿತ್ತು. ಅಜಿಂಕ್ಯ ರಹಾನೆ 35, ರವೀಂದ್ರ ಜಡೇಜ ಅಜೇಯ 31 ರನ್ ಮತ್ತು ಡೇರಿಯಲ್ ಮಿಎಲ್ 13 ರನ್ಗಳಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಕೆಲಹಾಕುವಲ್ಲಿ ಯಶಸ್ವಿಯಾದರು.
ಎಸ್ಆರ್ಎಚ್ ಪರ ಭುವನೇಶ್ವರ್ ಕುಮಾರ್, ಕಮಿನ್ಸ್ ಉನಾದ್ಯಟ್ ಶಾಹಬಾಜ್ ಮತ್ತು ಟಿ. ನಟರಾಜನ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಎಸ್ಆರ್ಎಚ್ ಇನ್ನಿಂಗ್ಸ್: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿ ಎಸ್ಆರ್ಎಚ್ಗೆ ಭರ್ಜರಿ ಆರಂಭ ದೊರೆಯಿತು. ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ 37, (12 ಎಸೆತ, 3ಬೌಂಡರಿ 4 ಸಿಕ್ಸರ್) ಉತ್ತಮವಾಗಿ ಬ್ಯಾಟ್ ಬೀಸಿ ಔಟಾದರು. ಇವರಿಗೆ ಜೊತೆಯಾಗಿ ಟ್ರಾವಿಸ್ ಹೆಡ್ 31, ಷಹಬಾಜ್ ಅಹ್ಮದ್ 18 ರನ್ ಗಳಿಸಿದರು. ಆರಂಭದಿಂದಲೂ ತಾಳ್ಮೆ ಆಟವಾಡಿದ ಮಾರ್ಕ್ರಂ 36 ಎಸೆತಗಳಲ್ಲಿ 4ಬೌಂಡರಿ, 1 ಸಿಕ್ಸರ್ ಸಹಿತ 50 ರನ್ ಗಳಿಸಿ ತಂಡ ಗೆಲ್ಲಲ್ಲು ಪ್ರಮುಖ ಪಾತ್ರ ವಹಿಸಿದರು.
ಕೊನೆಯಲ್ಲಿ ಒಂದಾದ ಹೆನ್ರಿಚ್ ಕ್ಲಾಸೆನ್ 10 ಮತ್ತು ನಿತೀಶ್ ರೆಡ್ಡಿ 14 ರನ್ ಬಾರಿಸಿದರು ತಂಡಕ್ಕೆ ಗೆಲುವು ತಂದುಕೊಟ್ಟರು. ಲೋಕಲ್ ಬಾಯ್ ನಿತೀಶ್ ರೆಡ್ಡಿ ಚಾಹರ್ ಎಸೆದ 18ನೇ ಓವರ್ನ ಮೊದಲ ಎಸೆತವನ್ನೇ ಸಿಕ್ಸರ್ ಬಾರಿಸಿ ಪಂದ್ಯವನ್ನು ಮುಗಿಸಿದರು.
ಸಿಎಸ್ಕೆ ಪರ ಮೋಯಿನ್ ಅಲಿ 2, ದೀಪಕ್ ಚಾಹರ್ ಮತ್ತು ತೀಕ್ಷಣ ತಲಾ ಒಂದು ವಿಕೆಟ್ ಪಡೆದರು.
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…