ಕ್ರೀಡೆ

IPL 2024: ರೋಚಕ ಹಣಾಹಣೆಯಲ್ಲಿ ಗೆದ್ದುಬೀಗಿದ ಎಸ್‌ಆರ್‌ಎಚ್‌!

ನವದೆಹಲಿ: ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಸಂಘಟಿತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ದಾಳಿಗೆ ನಲುಗಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ 67 ರನ್‌ಗಳ ಅಂತರದ ಸೋಲು ಕಂಡಿದೆ.

ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ ಸೀಸನ್‌ 17ರ ಐಪಿಎಲ್‌ ಟೂರ್ನಿಯಲ್ಲಿನ ಲೀಗ್‌ ಪಂದ್ಯದಲ್ಲಿ ಎಸ್‌ಆರ್‌ಎಚ್‌ ಹಾಗೂ ಡಿಸಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಎಸ್‌ಆರ್‌ಎಚ್‌ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 266ರನ್‌ ಕಲೆಹಾಕಿ ಡಿಸಿಗೆ 267ರನ್‌ಗಳ ಗುರಿ ನೀಡಿತ್ತು. ಈ ಮೊತ್ತ ಚೇಸ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ನಿಗದಿತ 19.1ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ 199 ರನ್‌ ಕೆಲಹಾಕಿ 67 ರನ್‌ಗಳ ಅಂತರದ ಹೀನಾಯ ಸೋಲು ಕಂಡಿತು.

ಎಸ್‌ಆರ್‌ಎಚ್‌ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ಗೆ ಭರ್ಜರಿ ಆರಂಭ ದೊರೆಯಿತು. ಅಭಿಷೇಕ್‌ ಶರ್ಮಾ 46(12) ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಇವರಿಗೆ ಜೊತೆಯಾಗಿ ಕಳೆದ ಮ್ಯಾಚ್‌ನಲ್ಲಿ ಸೆಂಚುರಿ ಬಾರಿಸಿದ್ದ ಹೆಡ್‌ ಈ ಪಂದ್ಯದಲ್ಲಿ ಅಮೋಘ ಅರ್ಧಶತಕ ಬಾರಿಸಿದರು. ಅವರು, 32ಎಸೆತದಲ್ಲಿ 11ಬೌಂಡರಿ ಹಾಗೂ 6 ಸಿಕ್ಸರ್‌ ಸಹಿತ 89 ರನ್‌ ಚಚ್ಚಿ ಔಟಾದರು. ಈ ಜೋಡಿ ಪವರ್‌ ಪ್ಲೇ ನಲ್ಲಿ ಬರೋಬ್ಬರಿ 125 ರನ್‌ ಚಚ್ಚಿದರು. ಇದು ಐಪಿಎಲ್‌ ಇತಿಹಾಸದಲ್ಲಿಯೇ ಪವರ್‌ ಪ್ಲೇನಲ್ಲಿ ದಾಖಲಾದ ಗರಿಷ್ಠ ಮೊತ್ತವಾಗಿದೆ.

ಉಳಿದಂತೆ ಮಾರ್ಕ್ರಂ 1, ಕ್ಲಾಸೆನ್‌ 15, ಅಬ್ದುಲ್‌ ಸಮದ್‌ 13 ರನ್‌ ಗಳಿಸಿ ಔಟಾದರು. ಕೊನೆಯಲ್ಲಿ ಅಬ್ಬರಿಸಿದ ನಿತೀಶ್‌ ರೆಡ್ಡಿ 37(27) ಹಾಗೂ ಆಲ್‌ರೌಂಡರ್‌ ಷಹಬಾಜ್‌ ಅಹ್ಮದ್‌ (59ರನ್‌, 29ಬಾಲ್‌ 2ಬೌಂಡರಿ ಹಾಗೂ 5ಸಿಕ್ಸ್) ಅರ್ಧಶತಕ ಗಳಿಸಿ ತಂಡದ ಮೊತ್ತವನ್ನು 266 ಗಡಿ ಸೇರಿಸಿದರು.‌

ಡೆಲ್ಲಿ ಕ್ಯಾಪಿಟಲ್ಸ್‌ ಪರ ಕುಲ್ದೀಪ್‌ ಯಾದವ್‌ 4/55 ವಿಕೆಟ್‌ ಪಡೆದು ಮಿಂಚಿದರು. ಇವರಿಗೆ ಅಕ್ಷರ್‌ ಪಟೇಲ್‌ ಹಾಗೂ ಮುಖೇಶ್‌ ತಲಾ ಒಂದೊಂದು ವಿಕೆಟ್‌ ಪಡೆದು ಸಾಥ್ ನೀಡಿದರು.

ಡೆಲ್ಲಿ ಇನ್ನಿಂಗ್ಸ್‌: ಈ ಬೃಹತ್‌ ಮೊತ್ತ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಪೃಥ್ವಿ ಶಾ 15ರನ್‌ ಗಳಿಸಿ ಮೊದಲ ಓವರ್‌ನಲ್ಲಿಯೇ ನಿರ್ಗಮಿಸಿದರು. ಕೇವಲ ಒಂದು ರನ್‌ಗಳಿಸಿದ ವಾರ್ನರ್‌ ಎರಡನೇ ಓವರ್‌ನಲ್ಲಿ ಓಟಾಗಿ ಆರಂಭಿಕ ಆಘಾತ ನೀಡಿದರು.

ಮಧ್ಯಮ ಕ್ರಮಾಂಕದಲ್ಲಿ ಒಂದಾದ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ ಹಾಗೂ ಅಭಿಷೇಕ್‌ ಪೋರೆಲ್‌ ತಂಡಕ್ಕೆ ಸುಧಾರಣೆ ನೀಡಿದರು. ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್(ಮ್ಯಾಕ್‌ಗುರ್ಕ್‌ ಕೇವಲ 15 ಬಾಲ್‌ಗಳಲ್ಲಿ ಅರ್ಧಶತಕ ಬಾರಿಸಿದ ಮ್ಯಾಕ್‌ಗುರ್ಕ್ ಡಿಸಿ ಪರ ಅತೀ ಕಡಿಮೆ ಬಾಲ್‌ನಲ್ಲಿ ಅರ್ಧ ಶತಕ ಬಾರಿಸಿದ ದಾಖಲೆ ಬರೆದರು) 18 ಎಸೆತಗಳಲ್ಲಿ 5 ಬೌಂಡರಿ ಹಾಗೂ 7 ಸಿಕ್ಸರ್‌ ಸಹಿತ 65 ರನ್‌ ಬಾರಿಸಿ ಅಬ್ಬರಿಸಿದರು. ಜೊತೆಗೆ ಪೋರೆಲ್‌ 42ರನ್‌, 22ಎಸೆತ, 7ಬೌಂಡರಿ, 1 ಸಿಕ್ಸ್‌ ಬಾರಿಸಿ ಗೆಲ್ಲುವ ಭರವಸೆ ಮೂಡಿಸಿ ಔಟಾದರು.

ಉಳಿದಂತೆ ಸ್ಟಬ್ಸ್‌ 10, ಲಲಿತ್‌ ಯಾದವ್‌ 7, ಅಕ್ಷರ್‌ ಪಟೇಲ್‌ 6, ಕಲೆಹಾಕಿ ಔಟಾದರು. ಕೊನೆಯಲ್ಲಿ ಕೊಂಚ ಅಬ್ಬರಿಸಿದ ನಾಯಕ ಪಂತ್‌ 35ಎಸೆತದಲ್ಲಿ 5ಬೌಂಡರಿ, 1ಸಿಕ್ಸರ್‌ ಸಹಿತ 44 ರನ್‌ ಬಾರಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲಾಗದೇ ಸೋಲೊಪ್ಪಿಕೊಂಡರು.

ಹೈದರಾಬಾದ್‌ ಪರ ನಟರಾಜನ್‌ 4ಓವರ್‌ ಬೌಲ್‌ ಮಾಡಿ, 19ರನ್‌ ನೀಡಿ ಪ್ರಮುಖ 4 ವಿಕೆಟ್‌ ಪಡೆದು ಮಿಂಚಿದರು. ಮಾರ್ಕಂಡೆ ಹಾಗೂ ನಿತೀಶ್‌ ಕುಮಾರ್‌ ತಲಾ 2 ವಿಕೆಟ್‌ ಪಡೆದರೇ, ಭುವನೇಶ್ವರ್‌ ಕುಮಾರ್‌, ವಾಷಿಂಗ್‌ಟನ್‌ ಸುಂದರ್‌, ನಿತೀಶ್‌ ರೆಡ್ಡಿ ತಲಾ ಒಂದೊಂದು ವಿಕಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

1 hour ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

1 hour ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

1 hour ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

2 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

2 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago