ಕ್ರೀಡೆ

IPL 2024: ರೋಚಕ ಹಣಾಹಣೆಯಲ್ಲಿ ಗೆದ್ದುಬೀಗಿದ ಎಸ್‌ಆರ್‌ಎಚ್‌!

ನವದೆಹಲಿ: ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಸಂಘಟಿತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ದಾಳಿಗೆ ನಲುಗಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ 67 ರನ್‌ಗಳ ಅಂತರದ ಸೋಲು ಕಂಡಿದೆ.

ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ ಸೀಸನ್‌ 17ರ ಐಪಿಎಲ್‌ ಟೂರ್ನಿಯಲ್ಲಿನ ಲೀಗ್‌ ಪಂದ್ಯದಲ್ಲಿ ಎಸ್‌ಆರ್‌ಎಚ್‌ ಹಾಗೂ ಡಿಸಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಎಸ್‌ಆರ್‌ಎಚ್‌ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 266ರನ್‌ ಕಲೆಹಾಕಿ ಡಿಸಿಗೆ 267ರನ್‌ಗಳ ಗುರಿ ನೀಡಿತ್ತು. ಈ ಮೊತ್ತ ಚೇಸ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ನಿಗದಿತ 19.1ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ 199 ರನ್‌ ಕೆಲಹಾಕಿ 67 ರನ್‌ಗಳ ಅಂತರದ ಹೀನಾಯ ಸೋಲು ಕಂಡಿತು.

ಎಸ್‌ಆರ್‌ಎಚ್‌ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ಗೆ ಭರ್ಜರಿ ಆರಂಭ ದೊರೆಯಿತು. ಅಭಿಷೇಕ್‌ ಶರ್ಮಾ 46(12) ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಇವರಿಗೆ ಜೊತೆಯಾಗಿ ಕಳೆದ ಮ್ಯಾಚ್‌ನಲ್ಲಿ ಸೆಂಚುರಿ ಬಾರಿಸಿದ್ದ ಹೆಡ್‌ ಈ ಪಂದ್ಯದಲ್ಲಿ ಅಮೋಘ ಅರ್ಧಶತಕ ಬಾರಿಸಿದರು. ಅವರು, 32ಎಸೆತದಲ್ಲಿ 11ಬೌಂಡರಿ ಹಾಗೂ 6 ಸಿಕ್ಸರ್‌ ಸಹಿತ 89 ರನ್‌ ಚಚ್ಚಿ ಔಟಾದರು. ಈ ಜೋಡಿ ಪವರ್‌ ಪ್ಲೇ ನಲ್ಲಿ ಬರೋಬ್ಬರಿ 125 ರನ್‌ ಚಚ್ಚಿದರು. ಇದು ಐಪಿಎಲ್‌ ಇತಿಹಾಸದಲ್ಲಿಯೇ ಪವರ್‌ ಪ್ಲೇನಲ್ಲಿ ದಾಖಲಾದ ಗರಿಷ್ಠ ಮೊತ್ತವಾಗಿದೆ.

ಉಳಿದಂತೆ ಮಾರ್ಕ್ರಂ 1, ಕ್ಲಾಸೆನ್‌ 15, ಅಬ್ದುಲ್‌ ಸಮದ್‌ 13 ರನ್‌ ಗಳಿಸಿ ಔಟಾದರು. ಕೊನೆಯಲ್ಲಿ ಅಬ್ಬರಿಸಿದ ನಿತೀಶ್‌ ರೆಡ್ಡಿ 37(27) ಹಾಗೂ ಆಲ್‌ರೌಂಡರ್‌ ಷಹಬಾಜ್‌ ಅಹ್ಮದ್‌ (59ರನ್‌, 29ಬಾಲ್‌ 2ಬೌಂಡರಿ ಹಾಗೂ 5ಸಿಕ್ಸ್) ಅರ್ಧಶತಕ ಗಳಿಸಿ ತಂಡದ ಮೊತ್ತವನ್ನು 266 ಗಡಿ ಸೇರಿಸಿದರು.‌

ಡೆಲ್ಲಿ ಕ್ಯಾಪಿಟಲ್ಸ್‌ ಪರ ಕುಲ್ದೀಪ್‌ ಯಾದವ್‌ 4/55 ವಿಕೆಟ್‌ ಪಡೆದು ಮಿಂಚಿದರು. ಇವರಿಗೆ ಅಕ್ಷರ್‌ ಪಟೇಲ್‌ ಹಾಗೂ ಮುಖೇಶ್‌ ತಲಾ ಒಂದೊಂದು ವಿಕೆಟ್‌ ಪಡೆದು ಸಾಥ್ ನೀಡಿದರು.

ಡೆಲ್ಲಿ ಇನ್ನಿಂಗ್ಸ್‌: ಈ ಬೃಹತ್‌ ಮೊತ್ತ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಪೃಥ್ವಿ ಶಾ 15ರನ್‌ ಗಳಿಸಿ ಮೊದಲ ಓವರ್‌ನಲ್ಲಿಯೇ ನಿರ್ಗಮಿಸಿದರು. ಕೇವಲ ಒಂದು ರನ್‌ಗಳಿಸಿದ ವಾರ್ನರ್‌ ಎರಡನೇ ಓವರ್‌ನಲ್ಲಿ ಓಟಾಗಿ ಆರಂಭಿಕ ಆಘಾತ ನೀಡಿದರು.

ಮಧ್ಯಮ ಕ್ರಮಾಂಕದಲ್ಲಿ ಒಂದಾದ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ ಹಾಗೂ ಅಭಿಷೇಕ್‌ ಪೋರೆಲ್‌ ತಂಡಕ್ಕೆ ಸುಧಾರಣೆ ನೀಡಿದರು. ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್(ಮ್ಯಾಕ್‌ಗುರ್ಕ್‌ ಕೇವಲ 15 ಬಾಲ್‌ಗಳಲ್ಲಿ ಅರ್ಧಶತಕ ಬಾರಿಸಿದ ಮ್ಯಾಕ್‌ಗುರ್ಕ್ ಡಿಸಿ ಪರ ಅತೀ ಕಡಿಮೆ ಬಾಲ್‌ನಲ್ಲಿ ಅರ್ಧ ಶತಕ ಬಾರಿಸಿದ ದಾಖಲೆ ಬರೆದರು) 18 ಎಸೆತಗಳಲ್ಲಿ 5 ಬೌಂಡರಿ ಹಾಗೂ 7 ಸಿಕ್ಸರ್‌ ಸಹಿತ 65 ರನ್‌ ಬಾರಿಸಿ ಅಬ್ಬರಿಸಿದರು. ಜೊತೆಗೆ ಪೋರೆಲ್‌ 42ರನ್‌, 22ಎಸೆತ, 7ಬೌಂಡರಿ, 1 ಸಿಕ್ಸ್‌ ಬಾರಿಸಿ ಗೆಲ್ಲುವ ಭರವಸೆ ಮೂಡಿಸಿ ಔಟಾದರು.

ಉಳಿದಂತೆ ಸ್ಟಬ್ಸ್‌ 10, ಲಲಿತ್‌ ಯಾದವ್‌ 7, ಅಕ್ಷರ್‌ ಪಟೇಲ್‌ 6, ಕಲೆಹಾಕಿ ಔಟಾದರು. ಕೊನೆಯಲ್ಲಿ ಕೊಂಚ ಅಬ್ಬರಿಸಿದ ನಾಯಕ ಪಂತ್‌ 35ಎಸೆತದಲ್ಲಿ 5ಬೌಂಡರಿ, 1ಸಿಕ್ಸರ್‌ ಸಹಿತ 44 ರನ್‌ ಬಾರಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲಾಗದೇ ಸೋಲೊಪ್ಪಿಕೊಂಡರು.

ಹೈದರಾಬಾದ್‌ ಪರ ನಟರಾಜನ್‌ 4ಓವರ್‌ ಬೌಲ್‌ ಮಾಡಿ, 19ರನ್‌ ನೀಡಿ ಪ್ರಮುಖ 4 ವಿಕೆಟ್‌ ಪಡೆದು ಮಿಂಚಿದರು. ಮಾರ್ಕಂಡೆ ಹಾಗೂ ನಿತೀಶ್‌ ಕುಮಾರ್‌ ತಲಾ 2 ವಿಕೆಟ್‌ ಪಡೆದರೇ, ಭುವನೇಶ್ವರ್‌ ಕುಮಾರ್‌, ವಾಷಿಂಗ್‌ಟನ್‌ ಸುಂದರ್‌, ನಿತೀಶ್‌ ರೆಡ್ಡಿ ತಲಾ ಒಂದೊಂದು ವಿಕಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

7 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

7 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

10 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

10 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

10 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

11 hours ago