ಕೊಲಂಬೊ : ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಕಾರ್ಯದರ್ಶಿ ಜಯ್ ಶಾ ನಡೆಸುತ್ತಿದ್ದಾರೆ ಎಂದು ಶ್ರೀಲಂಕಾ ತಂಡದ ಮಾಜಿ ನಾಯಕ ಅರ್ಜುನ್ ರಣತುಂಗ ಗಂಭೀರ ಆರೋಪ ಮಾಡಿದ್ದಾರೆ.
ಶ್ರೀಲಂಕಾ ಕ್ರಿಕೆಟ್ ಮಂಡಳಿ ಅಧಿಕಾರಿಗಳು ಬಿಸಿಸಿಐಗೆ ವಿಧೇಯಕರಾಗಿರುವ ಸ್ಥಿತಿ ನಿರ್ಮಾಣವಾಗಿದೆ. ಮಂಡಳಿಯ ಅಧಿಕಾರಿಗಳ ಜೊತೆ ಶಾ ಸಂಪರ್ಕ ಹೊಂದಿದ್ದು, ಭಾರತದ ಒಬ್ಬ ವ್ಯಕ್ತಿ ಶ್ರೀಲಂಕಾ ಕ್ರಿಕೆಟ್ನ್ನು ಹಾಳುಮಾಡುತ್ತಿದ್ದಾರೆ. ಇದಕ್ಕೆ ಮಂಡಳಿಯಲ್ಲಿನ ಇತ್ತೀಚೆಗಿನ ಬೆಳವಣಿಗೆಗಳು, ಅವ್ಯವಸ್ಥೆ ಹಾಗೂ ಭ್ರಷ್ಟಾಚಾರಕ್ಕೆ ಜೈ ಶಾ ನೇರ ಕಾರಣ ಎಂದು ಅವರು ದೂರಿದ್ದಾರೆ.
ಜೈ ಶಾ ತಂದೆ ಭಾರತದ ಗೃಹ ಮಂತ್ರಿಯಾಗಿದ್ದು, ಆ ಕಾರಣಕ್ಕಾಗಿ ಅವರು ಪ್ರಭಾವಶಾಲಿಯಾಗಿದ್ದಾರೆ. ತಾನು ಲಂಕಾ ಕ್ರಿಕೆಟ್ ಮಂಡಳಿಯನ್ನು ನಿಯಂತ್ರಿಸಬಹುದು ಎಂದು ಅವರು ಭಾವಿಸಿದ್ದಾರೆ ಎಂದು ಹೇಳೀರುವುದಾಗಿ ಲಂಕಾದ daily mirrior ದಿನಪತ್ರಿಕೆ ವರದಿ ಮಾಡಿದೆ.
ಲಂಕಾ ತಂಡದ ಕಳಪೆ ಪ್ರದರ್ಶನ, ಕ್ರಿಕೆಟ್ ಮಂಡಳಿಯಲ್ಲಿನ ಅವ್ಯವಸ್ಥೆ ಹಾಗೂ ಸರ್ಕಾರದ ಹಸ್ತಕ್ಷೇಪದಿಂದಾಗಿ ಲಂಕಾ ಕ್ರಿಕೆಟ್ ಮಂಡಳಿಯನ್ನು ಐಸಿಸಿ ಅಮಾನತುಗೊಳಿಸಿತ್ತು. ನಂತರ ಅರ್ಜುನ ರಣತುಂಗ ನೇತೃತ್ವದಲ್ಲಿ ತಾತ್ಕಾಲಿಕ ಮಂಡಳಿಯನ್ನು ಸರ್ಕಾರ ನೇಮಿಸಿತ್ತು. 7 ಸದಸ್ಯರ ಈ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರಿಬ್ಬರು ಇದ್ದಾರೆ.
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…
ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…