ಕೊಲಂಬೊ : ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಕಾರ್ಯದರ್ಶಿ ಜಯ್ ಶಾ ನಡೆಸುತ್ತಿದ್ದಾರೆ ಎಂದು ಶ್ರೀಲಂಕಾ ತಂಡದ ಮಾಜಿ ನಾಯಕ ಅರ್ಜುನ್ ರಣತುಂಗ ಗಂಭೀರ ಆರೋಪ ಮಾಡಿದ್ದಾರೆ.
ಶ್ರೀಲಂಕಾ ಕ್ರಿಕೆಟ್ ಮಂಡಳಿ ಅಧಿಕಾರಿಗಳು ಬಿಸಿಸಿಐಗೆ ವಿಧೇಯಕರಾಗಿರುವ ಸ್ಥಿತಿ ನಿರ್ಮಾಣವಾಗಿದೆ. ಮಂಡಳಿಯ ಅಧಿಕಾರಿಗಳ ಜೊತೆ ಶಾ ಸಂಪರ್ಕ ಹೊಂದಿದ್ದು, ಭಾರತದ ಒಬ್ಬ ವ್ಯಕ್ತಿ ಶ್ರೀಲಂಕಾ ಕ್ರಿಕೆಟ್ನ್ನು ಹಾಳುಮಾಡುತ್ತಿದ್ದಾರೆ. ಇದಕ್ಕೆ ಮಂಡಳಿಯಲ್ಲಿನ ಇತ್ತೀಚೆಗಿನ ಬೆಳವಣಿಗೆಗಳು, ಅವ್ಯವಸ್ಥೆ ಹಾಗೂ ಭ್ರಷ್ಟಾಚಾರಕ್ಕೆ ಜೈ ಶಾ ನೇರ ಕಾರಣ ಎಂದು ಅವರು ದೂರಿದ್ದಾರೆ.
ಜೈ ಶಾ ತಂದೆ ಭಾರತದ ಗೃಹ ಮಂತ್ರಿಯಾಗಿದ್ದು, ಆ ಕಾರಣಕ್ಕಾಗಿ ಅವರು ಪ್ರಭಾವಶಾಲಿಯಾಗಿದ್ದಾರೆ. ತಾನು ಲಂಕಾ ಕ್ರಿಕೆಟ್ ಮಂಡಳಿಯನ್ನು ನಿಯಂತ್ರಿಸಬಹುದು ಎಂದು ಅವರು ಭಾವಿಸಿದ್ದಾರೆ ಎಂದು ಹೇಳೀರುವುದಾಗಿ ಲಂಕಾದ daily mirrior ದಿನಪತ್ರಿಕೆ ವರದಿ ಮಾಡಿದೆ.
ಲಂಕಾ ತಂಡದ ಕಳಪೆ ಪ್ರದರ್ಶನ, ಕ್ರಿಕೆಟ್ ಮಂಡಳಿಯಲ್ಲಿನ ಅವ್ಯವಸ್ಥೆ ಹಾಗೂ ಸರ್ಕಾರದ ಹಸ್ತಕ್ಷೇಪದಿಂದಾಗಿ ಲಂಕಾ ಕ್ರಿಕೆಟ್ ಮಂಡಳಿಯನ್ನು ಐಸಿಸಿ ಅಮಾನತುಗೊಳಿಸಿತ್ತು. ನಂತರ ಅರ್ಜುನ ರಣತುಂಗ ನೇತೃತ್ವದಲ್ಲಿ ತಾತ್ಕಾಲಿಕ ಮಂಡಳಿಯನ್ನು ಸರ್ಕಾರ ನೇಮಿಸಿತ್ತು. 7 ಸದಸ್ಯರ ಈ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರಿಬ್ಬರು ಇದ್ದಾರೆ.
ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…
ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…
ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…