ಕ್ರೀಡೆ

ಶ್ರೀಲಂಕಾ ಮಂಡಳಿಯನ್ನು ಜಯ್‌ ಶಾ ನಡೆಸುತ್ತಿದ್ದಾರೆ: ಅರ್ಜುನ ರಣತುಂಗ ಆರೋಪ

ಕೊಲಂಬೊ : ಶ್ರೀಲಂಕಾ ಕ್ರಿಕೆಟ್‌ ಮಂಡಳಿಯನ್ನು ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ಕಾರ್ಯದರ್ಶಿ ಜಯ್‌ ಶಾ ನಡೆಸುತ್ತಿದ್ದಾರೆ ಎಂದು ಶ್ರೀಲಂಕಾ ತಂಡದ ಮಾಜಿ ನಾಯಕ ಅರ್ಜುನ್‌ ರಣತುಂಗ ಗಂಭೀರ ಆರೋಪ ಮಾಡಿದ್ದಾರೆ.

ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಅಧಿಕಾರಿಗಳು ಬಿಸಿಸಿಐಗೆ ವಿಧೇಯಕರಾಗಿರುವ ಸ್ಥಿತಿ ನಿರ್ಮಾಣವಾಗಿದೆ. ಮಂಡಳಿಯ ಅಧಿಕಾರಿಗಳ ಜೊತೆ ಶಾ ಸಂಪರ್ಕ ಹೊಂದಿದ್ದು, ಭಾರತದ ಒಬ್ಬ ವ್ಯಕ್ತಿ ಶ್ರೀಲಂಕಾ ಕ್ರಿಕೆಟ್‌ನ್ನು ಹಾಳುಮಾಡುತ್ತಿದ್ದಾರೆ. ಇದಕ್ಕೆ ಮಂಡಳಿಯಲ್ಲಿನ ಇತ್ತೀಚೆಗಿನ ಬೆಳವಣಿಗೆಗಳು, ಅವ್ಯವಸ್ಥೆ ಹಾಗೂ ಭ್ರಷ್ಟಾಚಾರಕ್ಕೆ ಜೈ ಶಾ ನೇರ ಕಾರಣ ಎಂದು ಅವರು ದೂರಿದ್ದಾರೆ.

ಜೈ ಶಾ ತಂದೆ ಭಾರತದ ಗೃಹ ಮಂತ್ರಿಯಾಗಿದ್ದು, ಆ ಕಾರಣಕ್ಕಾಗಿ ಅವರು ಪ್ರಭಾವಶಾಲಿಯಾಗಿದ್ದಾರೆ. ತಾನು ಲಂಕಾ ಕ್ರಿಕೆಟ್‌ ಮಂಡಳಿಯನ್ನು ನಿಯಂತ್ರಿಸಬಹುದು ಎಂದು ಅವರು ಭಾವಿಸಿದ್ದಾರೆ ಎಂದು ಹೇಳೀರುವುದಾಗಿ ಲಂಕಾದ daily mirrior ದಿನಪತ್ರಿಕೆ ವರದಿ ಮಾಡಿದೆ.

ಲಂಕಾ ತಂಡದ ಕಳಪೆ ಪ್ರದರ್ಶನ, ಕ್ರಿಕೆಟ್‌ ಮಂಡಳಿಯಲ್ಲಿನ ಅವ್ಯವಸ್ಥೆ ಹಾಗೂ ಸರ್ಕಾರದ ಹಸ್ತಕ್ಷೇಪದಿಂದಾಗಿ ಲಂಕಾ ಕ್ರಿಕೆಟ್‌ ಮಂಡಳಿಯನ್ನು ಐಸಿಸಿ ಅಮಾನತುಗೊಳಿಸಿತ್ತು. ನಂತರ ಅರ್ಜುನ ರಣತುಂಗ ನೇತೃತ್ವದಲ್ಲಿ ತಾತ್ಕಾಲಿಕ ಮಂಡಳಿಯನ್ನು ಸರ್ಕಾರ ನೇಮಿಸಿತ್ತು. 7 ಸದಸ್ಯರ ಈ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರಿಬ್ಬರು ಇದ್ದಾರೆ.

 

andolanait

Recent Posts

ಕ್ರೀಡಾಲೋಕದ ಸಿಹಿ-ಕಹಿ ಮೆಲುಕು

ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…

31 mins ago

ಕೊಡಗು ಜಿಲ್ಲೆಯಲ್ಲಿ ಹೆಚ್ಚಿದ ಮಂಗಗಳ ಕಾಟ

* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ  ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…

1 hour ago

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

3 hours ago

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…

3 hours ago

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…

3 hours ago

ಗುಬ್ಬಚ್ಚಿ ಶಾಲೆಯಲ್ಲಿ ಬರೀ 12 ವಿದ್ಯಾರ್ಥಿಗಳು!

ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…

4 hours ago