ಕ್ರೀಡೆ

ಶ್ರೀಲಂಕಾ ಮಂಡಳಿಯನ್ನು ಜಯ್‌ ಶಾ ನಡೆಸುತ್ತಿದ್ದಾರೆ: ಅರ್ಜುನ ರಣತುಂಗ ಆರೋಪ

ಕೊಲಂಬೊ : ಶ್ರೀಲಂಕಾ ಕ್ರಿಕೆಟ್‌ ಮಂಡಳಿಯನ್ನು ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ಕಾರ್ಯದರ್ಶಿ ಜಯ್‌ ಶಾ ನಡೆಸುತ್ತಿದ್ದಾರೆ ಎಂದು ಶ್ರೀಲಂಕಾ ತಂಡದ ಮಾಜಿ ನಾಯಕ ಅರ್ಜುನ್‌ ರಣತುಂಗ ಗಂಭೀರ ಆರೋಪ ಮಾಡಿದ್ದಾರೆ.

ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಅಧಿಕಾರಿಗಳು ಬಿಸಿಸಿಐಗೆ ವಿಧೇಯಕರಾಗಿರುವ ಸ್ಥಿತಿ ನಿರ್ಮಾಣವಾಗಿದೆ. ಮಂಡಳಿಯ ಅಧಿಕಾರಿಗಳ ಜೊತೆ ಶಾ ಸಂಪರ್ಕ ಹೊಂದಿದ್ದು, ಭಾರತದ ಒಬ್ಬ ವ್ಯಕ್ತಿ ಶ್ರೀಲಂಕಾ ಕ್ರಿಕೆಟ್‌ನ್ನು ಹಾಳುಮಾಡುತ್ತಿದ್ದಾರೆ. ಇದಕ್ಕೆ ಮಂಡಳಿಯಲ್ಲಿನ ಇತ್ತೀಚೆಗಿನ ಬೆಳವಣಿಗೆಗಳು, ಅವ್ಯವಸ್ಥೆ ಹಾಗೂ ಭ್ರಷ್ಟಾಚಾರಕ್ಕೆ ಜೈ ಶಾ ನೇರ ಕಾರಣ ಎಂದು ಅವರು ದೂರಿದ್ದಾರೆ.

ಜೈ ಶಾ ತಂದೆ ಭಾರತದ ಗೃಹ ಮಂತ್ರಿಯಾಗಿದ್ದು, ಆ ಕಾರಣಕ್ಕಾಗಿ ಅವರು ಪ್ರಭಾವಶಾಲಿಯಾಗಿದ್ದಾರೆ. ತಾನು ಲಂಕಾ ಕ್ರಿಕೆಟ್‌ ಮಂಡಳಿಯನ್ನು ನಿಯಂತ್ರಿಸಬಹುದು ಎಂದು ಅವರು ಭಾವಿಸಿದ್ದಾರೆ ಎಂದು ಹೇಳೀರುವುದಾಗಿ ಲಂಕಾದ daily mirrior ದಿನಪತ್ರಿಕೆ ವರದಿ ಮಾಡಿದೆ.

ಲಂಕಾ ತಂಡದ ಕಳಪೆ ಪ್ರದರ್ಶನ, ಕ್ರಿಕೆಟ್‌ ಮಂಡಳಿಯಲ್ಲಿನ ಅವ್ಯವಸ್ಥೆ ಹಾಗೂ ಸರ್ಕಾರದ ಹಸ್ತಕ್ಷೇಪದಿಂದಾಗಿ ಲಂಕಾ ಕ್ರಿಕೆಟ್‌ ಮಂಡಳಿಯನ್ನು ಐಸಿಸಿ ಅಮಾನತುಗೊಳಿಸಿತ್ತು. ನಂತರ ಅರ್ಜುನ ರಣತುಂಗ ನೇತೃತ್ವದಲ್ಲಿ ತಾತ್ಕಾಲಿಕ ಮಂಡಳಿಯನ್ನು ಸರ್ಕಾರ ನೇಮಿಸಿತ್ತು. 7 ಸದಸ್ಯರ ಈ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರಿಬ್ಬರು ಇದ್ದಾರೆ.

 

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago