ಕೊಲಂಬೊ : ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಕಾರ್ಯದರ್ಶಿ ಜಯ್ ಶಾ ನಡೆಸುತ್ತಿದ್ದಾರೆ ಎಂದು ಶ್ರೀಲಂಕಾ ತಂಡದ ಮಾಜಿ ನಾಯಕ ಅರ್ಜುನ್ ರಣತುಂಗ ಗಂಭೀರ ಆರೋಪ ಮಾಡಿದ್ದಾರೆ.
ಶ್ರೀಲಂಕಾ ಕ್ರಿಕೆಟ್ ಮಂಡಳಿ ಅಧಿಕಾರಿಗಳು ಬಿಸಿಸಿಐಗೆ ವಿಧೇಯಕರಾಗಿರುವ ಸ್ಥಿತಿ ನಿರ್ಮಾಣವಾಗಿದೆ. ಮಂಡಳಿಯ ಅಧಿಕಾರಿಗಳ ಜೊತೆ ಶಾ ಸಂಪರ್ಕ ಹೊಂದಿದ್ದು, ಭಾರತದ ಒಬ್ಬ ವ್ಯಕ್ತಿ ಶ್ರೀಲಂಕಾ ಕ್ರಿಕೆಟ್ನ್ನು ಹಾಳುಮಾಡುತ್ತಿದ್ದಾರೆ. ಇದಕ್ಕೆ ಮಂಡಳಿಯಲ್ಲಿನ ಇತ್ತೀಚೆಗಿನ ಬೆಳವಣಿಗೆಗಳು, ಅವ್ಯವಸ್ಥೆ ಹಾಗೂ ಭ್ರಷ್ಟಾಚಾರಕ್ಕೆ ಜೈ ಶಾ ನೇರ ಕಾರಣ ಎಂದು ಅವರು ದೂರಿದ್ದಾರೆ.
ಜೈ ಶಾ ತಂದೆ ಭಾರತದ ಗೃಹ ಮಂತ್ರಿಯಾಗಿದ್ದು, ಆ ಕಾರಣಕ್ಕಾಗಿ ಅವರು ಪ್ರಭಾವಶಾಲಿಯಾಗಿದ್ದಾರೆ. ತಾನು ಲಂಕಾ ಕ್ರಿಕೆಟ್ ಮಂಡಳಿಯನ್ನು ನಿಯಂತ್ರಿಸಬಹುದು ಎಂದು ಅವರು ಭಾವಿಸಿದ್ದಾರೆ ಎಂದು ಹೇಳೀರುವುದಾಗಿ ಲಂಕಾದ daily mirrior ದಿನಪತ್ರಿಕೆ ವರದಿ ಮಾಡಿದೆ.
ಲಂಕಾ ತಂಡದ ಕಳಪೆ ಪ್ರದರ್ಶನ, ಕ್ರಿಕೆಟ್ ಮಂಡಳಿಯಲ್ಲಿನ ಅವ್ಯವಸ್ಥೆ ಹಾಗೂ ಸರ್ಕಾರದ ಹಸ್ತಕ್ಷೇಪದಿಂದಾಗಿ ಲಂಕಾ ಕ್ರಿಕೆಟ್ ಮಂಡಳಿಯನ್ನು ಐಸಿಸಿ ಅಮಾನತುಗೊಳಿಸಿತ್ತು. ನಂತರ ಅರ್ಜುನ ರಣತುಂಗ ನೇತೃತ್ವದಲ್ಲಿ ತಾತ್ಕಾಲಿಕ ಮಂಡಳಿಯನ್ನು ಸರ್ಕಾರ ನೇಮಿಸಿತ್ತು. 7 ಸದಸ್ಯರ ಈ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರಿಬ್ಬರು ಇದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…