ಕ್ರೀಡೆ

ಶ್ರೀಲಂಕಾ ಮಂಡಳಿಯನ್ನು ಜಯ್‌ ಶಾ ನಡೆಸುತ್ತಿದ್ದಾರೆ: ಅರ್ಜುನ ರಣತುಂಗ ಆರೋಪ

ಕೊಲಂಬೊ : ಶ್ರೀಲಂಕಾ ಕ್ರಿಕೆಟ್‌ ಮಂಡಳಿಯನ್ನು ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ಕಾರ್ಯದರ್ಶಿ ಜಯ್‌ ಶಾ ನಡೆಸುತ್ತಿದ್ದಾರೆ ಎಂದು ಶ್ರೀಲಂಕಾ ತಂಡದ ಮಾಜಿ ನಾಯಕ ಅರ್ಜುನ್‌ ರಣತುಂಗ ಗಂಭೀರ ಆರೋಪ ಮಾಡಿದ್ದಾರೆ.

ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಅಧಿಕಾರಿಗಳು ಬಿಸಿಸಿಐಗೆ ವಿಧೇಯಕರಾಗಿರುವ ಸ್ಥಿತಿ ನಿರ್ಮಾಣವಾಗಿದೆ. ಮಂಡಳಿಯ ಅಧಿಕಾರಿಗಳ ಜೊತೆ ಶಾ ಸಂಪರ್ಕ ಹೊಂದಿದ್ದು, ಭಾರತದ ಒಬ್ಬ ವ್ಯಕ್ತಿ ಶ್ರೀಲಂಕಾ ಕ್ರಿಕೆಟ್‌ನ್ನು ಹಾಳುಮಾಡುತ್ತಿದ್ದಾರೆ. ಇದಕ್ಕೆ ಮಂಡಳಿಯಲ್ಲಿನ ಇತ್ತೀಚೆಗಿನ ಬೆಳವಣಿಗೆಗಳು, ಅವ್ಯವಸ್ಥೆ ಹಾಗೂ ಭ್ರಷ್ಟಾಚಾರಕ್ಕೆ ಜೈ ಶಾ ನೇರ ಕಾರಣ ಎಂದು ಅವರು ದೂರಿದ್ದಾರೆ.

ಜೈ ಶಾ ತಂದೆ ಭಾರತದ ಗೃಹ ಮಂತ್ರಿಯಾಗಿದ್ದು, ಆ ಕಾರಣಕ್ಕಾಗಿ ಅವರು ಪ್ರಭಾವಶಾಲಿಯಾಗಿದ್ದಾರೆ. ತಾನು ಲಂಕಾ ಕ್ರಿಕೆಟ್‌ ಮಂಡಳಿಯನ್ನು ನಿಯಂತ್ರಿಸಬಹುದು ಎಂದು ಅವರು ಭಾವಿಸಿದ್ದಾರೆ ಎಂದು ಹೇಳೀರುವುದಾಗಿ ಲಂಕಾದ daily mirrior ದಿನಪತ್ರಿಕೆ ವರದಿ ಮಾಡಿದೆ.

ಲಂಕಾ ತಂಡದ ಕಳಪೆ ಪ್ರದರ್ಶನ, ಕ್ರಿಕೆಟ್‌ ಮಂಡಳಿಯಲ್ಲಿನ ಅವ್ಯವಸ್ಥೆ ಹಾಗೂ ಸರ್ಕಾರದ ಹಸ್ತಕ್ಷೇಪದಿಂದಾಗಿ ಲಂಕಾ ಕ್ರಿಕೆಟ್‌ ಮಂಡಳಿಯನ್ನು ಐಸಿಸಿ ಅಮಾನತುಗೊಳಿಸಿತ್ತು. ನಂತರ ಅರ್ಜುನ ರಣತುಂಗ ನೇತೃತ್ವದಲ್ಲಿ ತಾತ್ಕಾಲಿಕ ಮಂಡಳಿಯನ್ನು ಸರ್ಕಾರ ನೇಮಿಸಿತ್ತು. 7 ಸದಸ್ಯರ ಈ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರಿಬ್ಬರು ಇದ್ದಾರೆ.

 

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

53 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago