ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಶ್ರೀಲಂಕಾ ಆಟಗಾರ ಲಹಿರು ತಿರಿಮನ್ನೆ

ಶ್ರೀಲಂಕಾ ತಂಡದ ಮಾಜಿ ನಾಯಕ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಲಹಿರು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಆಟಗಾರನಾಗಿ, ನಾನು ಅತ್ಯುತ್ತಮವಾದದ್ದನ್ನು ನೀಡಲು ಪ್ರಯತ್ನಿಸಿದ್ದೇನೆ. ಆದರೆ ದಿಢೀರ್ ನಿವೃತ್ತಿ ನೀಡಲು ಪ್ರಭಾವ ಬೀರಿದ ಕಾರಣಗಳನ್ನು ಇಲ್ಲಿ ಹೇಳಲಾರೆ ಎಂದು ತಿಳಿಸಿದ್ದಾರೆ.

ಲಹಿರು ತಿರಿಮನ್ನೆ ವೃತ್ತಿಜೀವನ:

2010 ರಲ್ಲಿ ಭಾರತದ ವಿರುದ್ಧದ ಏಕದಿನ ಪಂದ್ಯದ ಮೂಲಕ ತಮ್ಮ ಅಂತರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಲಹಿರು ತಿರಿಮನ್ನೆ ಆ ಬಳಿಕ ಟೆಸ್ಟ್ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದರು. ಶ್ರೀಲಂಕಾ ಪರ 44 ಟೆಸ್ಟ್‌ಗಳಲ್ಲಿ 3 ಶತಕ ಮತ್ತು 10 ಅರ್ಧ ಶತಕ ಸೇರಿದಂತೆ 2088 ರನ್, 27 ಏಕದಿನ ಪಂದ್ಯಗಳಲ್ಲಿ 4 ಶತಕ ಮತ್ತು 21 ಅರ್ಧ ಶತಕಗಳು ಮತ್ತು 26 T20 ಪಂದ್ಯಗಳಲ್ಲಿ 291 ರನ್ ಸೇರಿದಂತೆ ಒಟ್ಟು 3194 ರನ್ ಕಲೆಹಾಕಿದ್ದಾರೆ.

2011ರಲ್ಲಿ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದ ಲಹಿರು 2013ರಲ್ಲಿ ಟೆಸ್ಟ್‌ನಲ್ಲಿ ಚೊಚ್ಚಲ ಶತಕ ಬಾರಿಸಿದ್ದರು. ಚೊಚ್ಚಲ ಟೆಸ್ಟ್ ಶತಕದ ನಂತರ 7 ವರ್ಷ 10 ತಿಂಗಳ ಕಾಲ ಯಾವುದೇ ಶತಕ ಗಳಿಸಲು ಸಾಧ್ಯವಾಗಲಿಲ್ಲ. 2021 ರಲ್ಲಿ ಮತ್ತೆ ಕಂಬ್ಯಾಕ್ ಮಾಡಿದ್ದ ಅವರು ಎರಡನೇ ಟೆಸ್ಟ್ ಶತಕಗಳಿಸುವಲ್ಲಿ ಯಶಸ್ವಿಯಾಗಿದ್ದರು. ಇನ್ನು 2014ರಲ್ಲಿ ಟಿ20 ವಿಶ್ವಕಪ್ ಮತ್ತು 2014ರ ಏಷ್ಯಾಕಪ್ ಗೆದ್ದ ಶ್ರೀಲಂಕಾ ತಂಡದಲ್ ಭಾಗವಾಗಿದ್ದರು.

ನಾಯಕರಾಗಿಯೂ ಮಿಂಚಿದ್ದ ಲಹಿರು:

2014ರ ಏಷ್ಯನ್ ಗೇಮ್ಸ್ ನಲ್ಲಿ ಶ್ರೀಲಂಕಾ ತಂಡವನ್ನು ಮುನ್ನಡೆಸಿದ್ದ ಲಹಿರು ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. 2019 ರಲ್ಲಿ ಪಾಕಿಸ್ತಾನ್ ಪ್ರವಾಸ ಕೈಗೊಂಡ ಶ್ರೀಲಂಕಾ ತಂಡದ ನಾಯಕರಾಗಿದ್ದರು. 2022 ರಲ್ಲಿ ಕೊನೆಯ ಬಾರಿ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದ ಲಹಿರು ತಿರಿಮನ್ನೆಗೆ ಆ ಬಳಿಕ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ತಮ್ಮ 33ನೇ ವಯಸ್ಸಿಗೆ ನಿವೃತ್ತಿ ಘೋಷಿಸುವ ಮೂಲಕ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ.

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

6 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

6 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

6 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

7 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

7 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago