ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಶ್ರೀಲಂಕಾ ಆಟಗಾರ ಲಹಿರು ತಿರಿಮನ್ನೆ

ಶ್ರೀಲಂಕಾ ತಂಡದ ಮಾಜಿ ನಾಯಕ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಲಹಿರು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಆಟಗಾರನಾಗಿ, ನಾನು ಅತ್ಯುತ್ತಮವಾದದ್ದನ್ನು ನೀಡಲು ಪ್ರಯತ್ನಿಸಿದ್ದೇನೆ. ಆದರೆ ದಿಢೀರ್ ನಿವೃತ್ತಿ ನೀಡಲು ಪ್ರಭಾವ ಬೀರಿದ ಕಾರಣಗಳನ್ನು ಇಲ್ಲಿ ಹೇಳಲಾರೆ ಎಂದು ತಿಳಿಸಿದ್ದಾರೆ.

ಲಹಿರು ತಿರಿಮನ್ನೆ ವೃತ್ತಿಜೀವನ:

2010 ರಲ್ಲಿ ಭಾರತದ ವಿರುದ್ಧದ ಏಕದಿನ ಪಂದ್ಯದ ಮೂಲಕ ತಮ್ಮ ಅಂತರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಲಹಿರು ತಿರಿಮನ್ನೆ ಆ ಬಳಿಕ ಟೆಸ್ಟ್ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದರು. ಶ್ರೀಲಂಕಾ ಪರ 44 ಟೆಸ್ಟ್‌ಗಳಲ್ಲಿ 3 ಶತಕ ಮತ್ತು 10 ಅರ್ಧ ಶತಕ ಸೇರಿದಂತೆ 2088 ರನ್, 27 ಏಕದಿನ ಪಂದ್ಯಗಳಲ್ಲಿ 4 ಶತಕ ಮತ್ತು 21 ಅರ್ಧ ಶತಕಗಳು ಮತ್ತು 26 T20 ಪಂದ್ಯಗಳಲ್ಲಿ 291 ರನ್ ಸೇರಿದಂತೆ ಒಟ್ಟು 3194 ರನ್ ಕಲೆಹಾಕಿದ್ದಾರೆ.

2011ರಲ್ಲಿ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದ ಲಹಿರು 2013ರಲ್ಲಿ ಟೆಸ್ಟ್‌ನಲ್ಲಿ ಚೊಚ್ಚಲ ಶತಕ ಬಾರಿಸಿದ್ದರು. ಚೊಚ್ಚಲ ಟೆಸ್ಟ್ ಶತಕದ ನಂತರ 7 ವರ್ಷ 10 ತಿಂಗಳ ಕಾಲ ಯಾವುದೇ ಶತಕ ಗಳಿಸಲು ಸಾಧ್ಯವಾಗಲಿಲ್ಲ. 2021 ರಲ್ಲಿ ಮತ್ತೆ ಕಂಬ್ಯಾಕ್ ಮಾಡಿದ್ದ ಅವರು ಎರಡನೇ ಟೆಸ್ಟ್ ಶತಕಗಳಿಸುವಲ್ಲಿ ಯಶಸ್ವಿಯಾಗಿದ್ದರು. ಇನ್ನು 2014ರಲ್ಲಿ ಟಿ20 ವಿಶ್ವಕಪ್ ಮತ್ತು 2014ರ ಏಷ್ಯಾಕಪ್ ಗೆದ್ದ ಶ್ರೀಲಂಕಾ ತಂಡದಲ್ ಭಾಗವಾಗಿದ್ದರು.

ನಾಯಕರಾಗಿಯೂ ಮಿಂಚಿದ್ದ ಲಹಿರು:

2014ರ ಏಷ್ಯನ್ ಗೇಮ್ಸ್ ನಲ್ಲಿ ಶ್ರೀಲಂಕಾ ತಂಡವನ್ನು ಮುನ್ನಡೆಸಿದ್ದ ಲಹಿರು ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. 2019 ರಲ್ಲಿ ಪಾಕಿಸ್ತಾನ್ ಪ್ರವಾಸ ಕೈಗೊಂಡ ಶ್ರೀಲಂಕಾ ತಂಡದ ನಾಯಕರಾಗಿದ್ದರು. 2022 ರಲ್ಲಿ ಕೊನೆಯ ಬಾರಿ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದ ಲಹಿರು ತಿರಿಮನ್ನೆಗೆ ಆ ಬಳಿಕ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ತಮ್ಮ 33ನೇ ವಯಸ್ಸಿಗೆ ನಿವೃತ್ತಿ ಘೋಷಿಸುವ ಮೂಲಕ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ.

andolanait

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

10 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

13 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

13 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

14 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

15 hours ago