ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಶ್ರೀಲಂಕಾ ಆಟಗಾರ ಲಹಿರು ತಿರಿಮನ್ನೆ

ಶ್ರೀಲಂಕಾ ತಂಡದ ಮಾಜಿ ನಾಯಕ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಲಹಿರು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಆಟಗಾರನಾಗಿ, ನಾನು ಅತ್ಯುತ್ತಮವಾದದ್ದನ್ನು ನೀಡಲು ಪ್ರಯತ್ನಿಸಿದ್ದೇನೆ. ಆದರೆ ದಿಢೀರ್ ನಿವೃತ್ತಿ ನೀಡಲು ಪ್ರಭಾವ ಬೀರಿದ ಕಾರಣಗಳನ್ನು ಇಲ್ಲಿ ಹೇಳಲಾರೆ ಎಂದು ತಿಳಿಸಿದ್ದಾರೆ.

ಲಹಿರು ತಿರಿಮನ್ನೆ ವೃತ್ತಿಜೀವನ:

2010 ರಲ್ಲಿ ಭಾರತದ ವಿರುದ್ಧದ ಏಕದಿನ ಪಂದ್ಯದ ಮೂಲಕ ತಮ್ಮ ಅಂತರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಲಹಿರು ತಿರಿಮನ್ನೆ ಆ ಬಳಿಕ ಟೆಸ್ಟ್ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದರು. ಶ್ರೀಲಂಕಾ ಪರ 44 ಟೆಸ್ಟ್‌ಗಳಲ್ಲಿ 3 ಶತಕ ಮತ್ತು 10 ಅರ್ಧ ಶತಕ ಸೇರಿದಂತೆ 2088 ರನ್, 27 ಏಕದಿನ ಪಂದ್ಯಗಳಲ್ಲಿ 4 ಶತಕ ಮತ್ತು 21 ಅರ್ಧ ಶತಕಗಳು ಮತ್ತು 26 T20 ಪಂದ್ಯಗಳಲ್ಲಿ 291 ರನ್ ಸೇರಿದಂತೆ ಒಟ್ಟು 3194 ರನ್ ಕಲೆಹಾಕಿದ್ದಾರೆ.

2011ರಲ್ಲಿ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದ ಲಹಿರು 2013ರಲ್ಲಿ ಟೆಸ್ಟ್‌ನಲ್ಲಿ ಚೊಚ್ಚಲ ಶತಕ ಬಾರಿಸಿದ್ದರು. ಚೊಚ್ಚಲ ಟೆಸ್ಟ್ ಶತಕದ ನಂತರ 7 ವರ್ಷ 10 ತಿಂಗಳ ಕಾಲ ಯಾವುದೇ ಶತಕ ಗಳಿಸಲು ಸಾಧ್ಯವಾಗಲಿಲ್ಲ. 2021 ರಲ್ಲಿ ಮತ್ತೆ ಕಂಬ್ಯಾಕ್ ಮಾಡಿದ್ದ ಅವರು ಎರಡನೇ ಟೆಸ್ಟ್ ಶತಕಗಳಿಸುವಲ್ಲಿ ಯಶಸ್ವಿಯಾಗಿದ್ದರು. ಇನ್ನು 2014ರಲ್ಲಿ ಟಿ20 ವಿಶ್ವಕಪ್ ಮತ್ತು 2014ರ ಏಷ್ಯಾಕಪ್ ಗೆದ್ದ ಶ್ರೀಲಂಕಾ ತಂಡದಲ್ ಭಾಗವಾಗಿದ್ದರು.

ನಾಯಕರಾಗಿಯೂ ಮಿಂಚಿದ್ದ ಲಹಿರು:

2014ರ ಏಷ್ಯನ್ ಗೇಮ್ಸ್ ನಲ್ಲಿ ಶ್ರೀಲಂಕಾ ತಂಡವನ್ನು ಮುನ್ನಡೆಸಿದ್ದ ಲಹಿರು ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. 2019 ರಲ್ಲಿ ಪಾಕಿಸ್ತಾನ್ ಪ್ರವಾಸ ಕೈಗೊಂಡ ಶ್ರೀಲಂಕಾ ತಂಡದ ನಾಯಕರಾಗಿದ್ದರು. 2022 ರಲ್ಲಿ ಕೊನೆಯ ಬಾರಿ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದ ಲಹಿರು ತಿರಿಮನ್ನೆಗೆ ಆ ಬಳಿಕ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ತಮ್ಮ 33ನೇ ವಯಸ್ಸಿಗೆ ನಿವೃತ್ತಿ ಘೋಷಿಸುವ ಮೂಲಕ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ.

andolanait

Recent Posts

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

2 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

2 hours ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

2 hours ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

3 hours ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

15 hours ago