ಕ್ರೀಡೆ

INDvsSL: ಶ್ರೀಲಂಕಾ ಬೌಲಿಂಗ್‌ ದಾಳಿಗೆ ನಲುಗಿದ ಟೀಂ ಇಂಡಿಯಾ: ಮುನ್ನಡೆ ಕಾಯ್ದುಕೊಂಡ ಲಂಕಾ

ಕೊಲೊಂಬೊ: ಶ್ರೀಲಂಕಾ ತಂಡದ ಕರಾರುವಕ್ಕಾದ ಬೌಲಿಂಗ್‌ ದಾಳಿಗೆ ನಲುಗಿದ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ 32 ರನ್‌ಗಳ ಹೀನಾಯ ಸೋಲು ಕಂಡಿತು. ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಶ್ರೀಲಂಕಾ ತಂಡ 1-0 ರಲ್ಲಿ ಸರಣಿಯಲ್ಲಿ ಮುನ್ನಡೆ ಸಾಧಿಸಿತು.

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಶ್ರೀಲಂಕಾ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 240ರನ್‌ ಬಾರಿಸಿ 241ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಭಾರತ ತಂಡ 42.2 ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ ಕೇವಲ 208 ರನ್‌ ಬಾರಿಸಿ 32 ರನ್‌ಗಳ ಅಂತರದಿಂದ ಹೀನಾಯ ಸೋಲು ಕಂಡಿತು.

ಶ್ರೀಲಂಕಾ ಇನ್ನಿಂಗ್ಸ್‌: ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಶ್ರೀಲಂಕಾ ಪರವಾಗಿ ನಿಸ್ಸಂಕಾ ಹಾಗೂ ಅವಿಷ್ಕಾ ಫರ್ನಾಂಡೋ ಅವರು ಇನ್ನಿಂಗ್ಸ್‌ ಆರಂಭಿಸಿದರು. ನಿಸ್ಸಂಕಾ ಮೊದಲ ಓವರ್‌ನಲ್ಲೇ ಡಕ್‌ಔಟ್‌ ಆಗಿ ಹೊರನಡೆದರು.

ಉತ್ತಮ ಇನ್ನಿಂಗ್ಸ್‌ ಕಟ್ಟಿದ ಅವಿಷ್ಕಾ ಫರ್ನಾಂಡೋ 62 ಎಸೆತಗಳಲ್ಲಿ 5 ಬೌಂಡರಿ ಸಹಿತ 40 ರನ್‌ ಬಾರಿಸಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ರನ್‌ ಗಳಿಸಲು ಶ್ರೀಲಂಕಾ ಮತ್ತೊಮ್ಮೆ ವಿಫಲವಾಯಿತು. ಕುಶಾಲ್‌ ಮೆಂಡೀಸ್‌ 30(42) ರನ್‌, ಸಮರವಿಕ್ರಮ 14(31) ರನ್‌, ನಾಯಕ ಅಸಲಂಕ 25(42) ರನ್‌, ಜನಿತ್‌ 12(29) ರನ್‌ ಗಳಿಸಿ ಸಾಧಾರಣ ಮೊತ್ತಕ್ಕೆ ಕುಸಿದು ಬೀಳುವ ಸ್ಥಿತಿಗೆ ತಲುಪಿದರು.

ಕೊನೆಯಲ್ಲಿ ಒಂದಾದ ವೆಲ್ಲಲಗೆ 39(35) ರನ್‌, ಕಮಿಂದು ಮೆಂಡೀಸ್‌ 40(44) ರನ್‌ ಗಳಿಸಿ ತಂಡದ ಮೊತ್ತ ಇನ್ನೂರರ ಗಡಿ ದಾಟಿಸಲು ಸಹಕರಿಸಿದರು. ಉಳಿದಂತೆ ಧನಂಜಯ 15(13) ರನ್‌, ವಾಮಡರಸೆ ಔಟಾಗದೇ 1(1)ರನ್‌ ಗಳಿಸಿದರು.

ಭಾರತ ಪರ ವಾಷಿಂಗ್‌ಟನ್‌ ಸುಂದರ್‌ ಮೂರು, ಕುಲ್ದೀಪ್‌ ಯಾದವ್‌ ಎರಡು, ಸಿರಾಜ್‌ ಮತ್ತು ಅಕ್ಷರ್‌ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ಟೀಂ ಇಂಡಿಯಾ ಇನ್ನಿಂಗ್ಸ್‌: ಈ ಸಾದಾರಣ ಮೊತ್ತ ಬೆನ್ನತ್ತಿದ್ದ ಭಾರತ ತಂಡಕ್ಕೆ ನಾಯಕ ರೋಹಿತ್‌ ಶರ್ಮಾ ಉತ್ತಮ ಆರಂಭ ಒದಗಿಸಿಕೊಟ್ಟರು. ಅವರು 44 ಎಸೆತಗಳಲ್ಲಿ 5 ಬೌಂಡರಿ, 4 ಸಿಕ್ಸರ್‌ ಸಹಿತ 64 ರನ್‌ ಬಾರಿಸಿ ಗೆಲುವಿನ ನಿರೀಕ್ಷೆ ಹುಟ್ಟಿಸಿದರು. ಇವರಿಗೆ ಜತೆಯಾಗಿ ಶುಬ್‌ಮನ್‌ ಗಿಲ್‌ 35(44) ರನ್‌ ಗಳಿಸಿ ಉತ್ತಮ ಆರಂಭ ಒದಗಿಸಿಕೊಟ್ಟರು.

ಆದರೆ ಬಳಿಕ ಬಂದ ಯಾರಿಂದಲೂ ನಿರೀಕ್ಷಿತ ಆಟ ಕಂಡುಬರಲಿಲ್ಲ. ಮಧ್ಯಮ ಕ್ರಮಾಂಕದಲ್ಲಿ ಅಕ್ಷರ್‌ ಪಟೇಲ್‌ 44(44) ಗಳಿಸಿದ್ದು ಹೊರತುಪಡಿಸಿದರೇ ಬೇರಾರಿಂದಲೂ ಗೆಲುವಿನ ಆಟ ಕಂಡುಬರಲಿಲ್ಲ. ಉಳಿದಂತೆ ವಿರಾಟ್‌ ಕೊಹ್ಲಿ 14(19) ರನ್‌, ಶಿವಂ ದುಬೆ ಡಕ್‌ಔಟ್‌, ಶ್ರೇಯಸ್‌ ಅಯ್ಯರ್‌ 7(9) ರನ್‌, ಕೆ.ಎಲ್‌ ರಾಹುಲ್‌ ಡಕ್‌ಔಟ್‌, ವಾಷಿಂಗ್‌ಟನ್‌ ಸುಂದರ್‌ 15(40) ರನ್‌, ಕುಲ್ದೀಪ್‌ ಯಾದವ್‌ ಔಟಾಗದೇ 7(27) ರನ್‌, ಸಿರಾಜ್‌ 4(18) ರನ್‌, ಅರ್ಶ್‌ದೀಪ್‌ ಸಿಂಗ್‌ 3(4) ರನ್‌ ಗಳಿಸಿಯೂ ಪಂದ್ಯವನ್ನು ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ.

ಶ್ರೀಲಂಕಾ ಪರ ವಾಂಡರಸೆ 6 ವಿಕೆಟ್‌, ನಾಯಕ ಚರಿತ ಅಸಲಂಕ 3 ಮೂರು ವಿಕೆಟ್‌ ಕಬಳಿಸಿ ಮಿಂಚಿದರು.

ಪಂದ್ಯ ಶ್ರೇಷ್ಠ: ವಾಂಡರಸೆ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

2 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

2 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

2 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

2 hours ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

13 hours ago