ಕ್ರೀಡೆ

Asiacup Womens 2024: ಟೀಂ ಇಂಡಿಯಾ ಸೋಲಿಸಿ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟ ಶ್ರೀಲಂಕಾ

ಡಂಬುಲ್ಲಾ: ಸಂಘಟಿತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ನೆರವಿನಿಂದ ಬಲಿಷ್ಠ ಭಾರತ ತಂಡವನ್ನು ಕಟ್ಟಿಹಾಕುವ ಮೂಲಕ ತವರಿನಂಗಳದಲ್ಲಿ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿದ್ದಾರೆ.

ಇಲ್ಲಿನ ಡಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಮಣಿಸಿದ ಶ್ರೀಲಂಕಾ ಮೊದಲ ಬಾರಿಗೆ ಏಷ್ಯಾಕಪ್‌ ಗೆದ್ದು ಬೀಗಿತು.

ಏಷ್ಯಾಕಪ್‌ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಭಾರತ ವನಿತೆಯರ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 165 ರನ್‌ ಗಳಿಸಿ 166 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿತು. ತವರಿನಂಗಳದಲ್ಲಿ ಈ ಮೊತ್ತ ಬೆನ್ನತ್ತಿದ್ದ ಶ್ರೀಲಂಕಾ 18.4 ಓವರ್‌ಗಳಲ್ಲಿ ಕೇವಲ ಎರಡು ವಿಕೆಟ್‌ ಕಳೆದುಕೊಂಡು 167ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

ಟೀಂ ಇಂಡಿಯಾ ಇನ್ನಿಂಗ್ಸ್‌: ಫೈನಲ್ಸ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ಇಂಡಿಯಾ ಪರವಾಗಿ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂದನಾ ಇನ್ನಿಂಗ್ಸ್‌ ಆರಂಭಿಸಿದರು. ಶಫಾಲಿ ವರ್ಮಾ 16(19) ರನ್‌ ಗಳಿಸಿ ಬೇಗನೇ ಔಟಾದರು. ಬಳಿಕ ಬಂದ ಉಮಾ ಚೆಟ್ರಿ 9(7) ರನ್‌ ಗಳಿಸಿ ಔಟಾದರು. ಬಳಿಕ ಬಂದ ತಂಡ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ 11(11) ರನ್‌ ಗಳಿಸಿ ಪೆವಿಲಿಯನ್‌ ಸೇರಿದರು.

ಒಂದೆಡೆ ವಿಕೆಟ್‌ ಬೀಳುತ್ತಿದ್ದರು ಮತ್ತೊಂದೆಡೆ ಸುಭದ್ರ ಇನ್ನಿಂಗ್ಸ್‌ ಕಟ್ಟಿದ ಸ್ಮೃತಿ ಮಂದನಾ 47 ಎಸೆತಗಳಲ್ಲಿ 10 ಬೌಂಡರಿ ಸಹಿತ 60 ರನ್‌ ಗಳಿಸಿ ಆಸರೆಯಾದರು. ಉಳಿದಂತೆ ರೋಡ್ರಿಗಸ್‌ 29(16) ರನ್‌, ರಿಚಾ ಘೋಷ್‌ 30(14) ರನ್‌ ಗಳಿಸಿದರು. ಪೂಜಾ ಹಾಗೂ ರಾಧಾ ಯಾದವ್‌ ಔಟಾಗದೇ ತಲಾ 5(6)ರನ್‌ ಹಾಗೂ 1(1)ರನ್‌ ಗಳಿಸಿದರು.

ಶ್ರೀಲಂಕಾ ಪರವಾಗಿ ಕವಿಶಾ 2, ಪ್ರಬೋಧನಿ, ಸಚಿನಿ ಹಾಗೂ ಚಾಮಿರಾ ಅಟಾಪಟ್ಟು ತಲಾ ಒಂದೊಂದು ವಿಕೆಟ್‌ ಕಬಳಿಸಿ ಮಿಂಚಿದರು.

ಶ್ರೀಲಂಕಾ ಇನ್ನಿಂಗ್ಸ್‌: ಭಾರತ ತಂಡ ನೀಡಿದ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಶ್ರೀಲಂಕಾ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ವಿ.ಗುಣರತ್ನೆ 1(3) ರನ್‌ ಗಳಿಸಿ ಬಂದ ವೇಗದಲೇ ಹಿಂತಿರುಗಿದರು. ನಾಯಕಿ ಚಾಮರಿ ಅಟಾಪಟ್ಟು 43 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್‌ ಸಹಿತ 61 ರನ್‌ ಗಳಿಸಿ ನಿರ್ಗಮಿಸಿದರು.

ನಂತರ ಜೊತೆಯಾದ ಸಮರವಿಕ್ರಮ ಹಾಗೂ ಕವಿಶಾ ತಂಡಕ್ಕೆ ಗೆಲುವು ತಂದುಕೊಟ್ಟರು. ಹರ್ಷಿತಾ ಸಮರವಿಕ್ರಮ ಔಟಾಗದೇ 51 ಎಸೆತ, 6ಬೌಂಡರಿ 2 ಸಿಕ್ಸರ್‌ ಸೇರಿ 69 ರನ್‌ ಗಳಿಸಿದರು. ಇವರಿಗೆ ಜೊತೆಯಾಗಿ ಕವಿಶಾ ಔಟಾಗದೆ 30(16) ರನ್‌ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಟೀಂ ಇಂಡಿಯಾ ಪರ ದೀಪ್ತಿ ಶರ್ಮಾ ಒಂದು ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಹರ್ಷಿತಾ ಸಮರವಿಕ್ರಮ
ಸರಣಿ ಶ್ರೇಷ್ಠ: ಚಾಮರಿ ಅಟಾಪಟ್ಟು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

3 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

3 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

3 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

3 hours ago