ಕ್ರೀಡೆ

T20 ವಿಶ್ವಕಪ್‌ : ಶ್ರೀಲಂಕಾ ವಿರುದ್ಧ ನಮೀಬಿಯಾ 55 ರನ್‌ಗಳ ಭರ್ಜರಿ ಜಯ

ಹೋಬರ್ಟ್: ಶ್ರೀಲಂಕಾ ವಿರುದ್ಧ ನಮೀಬಿಯಾ 55 ರನ್‌ಗಳ ಭರ್ಜರಿ ಜಯ ದಾಖಲಿಸಿ ಪುರುಷರ T20 ವಿಶ್ವಕಪ್‌ಗೆ ಭರ್ಜರಿ ಚಾಲನೆ ನೀಡಿದ ಬೆನ್ನಲ್ಲೇ, ಸ್ಕಾಟ್ಲೆಂಡ್ ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ವಿರುದ್ಧ 42 ರನ್‌ಗಳಿಂದ ಗೆದ್ದು ಬೀಗಿತು. ಸೋಮವಾರ ಬೆಲ್ಲೆರೀವ್ ಓವಲ್​ನಲ್ಲಿ ನಡೆದ ಗ್ರೂಪ್​ ಬಿ ಯ ಪ್ರಥಮ ಪಂದ್ಯ ಇದಾಗಿತ್ತು.
ಓಪನರ್ ಜಾರ್ಜ್ ಮನ್ಸೆ ಅವರು ಇನ್ನಿಂಗ್ಸ್‌ನಲ್ಲಿ ಅಜೇಯ 66 ರನ್ ಗಳಿಸಿ ಸ್ಕಾಟ್ಲೆಂಡ್‌ 160/5 ಸ್ಕೋರ್ ಗಳಿಸಲು ನೆರವಾದರು. ಎಡಗೈ ಸ್ಪಿನ್ನರ್ ಮಾರ್ಕ್ ವ್ಯಾಟ್ ತಮ್ಮ 3/12 ರೊಂದಿಗೆ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ಈ ಮೂಲಕ ವೆಸ್ಟ್ ಇಂಡೀಸ್ 18.3 ಓವರ್​ಗಳಲ್ಲಿ 118 ರನ್‌ಗಳಿಗೆ ಆಲ್ ಔಟ್ ಆಯಿತು.2021ರ ಟಿ 20 ವಿಶ್ವಕಪ್‌ನ ಓಮನ್‌ನ ಅಲ್ ಅಮೇರಾತ್​​ನಲ್ಲಿ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಆರು ರನ್‌ಗಳಿಂದ ಸೋಲಿಸಿದ ಒಂದು ವರ್ಷದ ನಂತರ ಸ್ಕಾಟ್ಲೆಂಡ್ 42 ರನ್‌ಗಳಿಂದ ಗೆದ್ದಿದೆ.
ಸಂಕ್ಷಿಪ್ತ ಸ್ಕೋರ್: ಸ್ಕಾಟ್ಲೆಂಡ್ 20 ಓವರ್‌ಗಳಲ್ಲಿ 160/5 (ಜಾರ್ಜ್ ಮುನ್ಸಿ ಔಟಾಗದೆ 66, ಕ್ಯಾಲಮ್ ಮ್ಯಾಕ್‌ಲಿಯೊಡ್ 23; ಜೇಸನ್ ಹೋಲ್ಡರ್ 2/14, ಅಲ್ಜಾರಿ ಜೋಸೆಫ್ 2/28) ವೆಸ್ಟ್ ಇಂಡೀಸ್ ಅನ್ನು 18.3 ಓವರ್‌ಗಳಲ್ಲಿ 118 ಆಲೌಟ್ (ಜೇಸನ್ ಹೋಲ್ಡರ್ 38 ಮಾರ್ಕ್ ವ್ಯಾಟ್ 3/12, ಮೈಕಲ್ ಲೀಸ್ಕ್ 2/14) 42 ರನ್‌ಗಳಿಂದ ಸೋಲಿಸಿತು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago