ಕ್ರೀಡೆ

T20 ವಿಶ್ವಕಪ್‌ : ಶ್ರೀಲಂಕಾ ವಿರುದ್ಧ ನಮೀಬಿಯಾ 55 ರನ್‌ಗಳ ಭರ್ಜರಿ ಜಯ

ಹೋಬರ್ಟ್: ಶ್ರೀಲಂಕಾ ವಿರುದ್ಧ ನಮೀಬಿಯಾ 55 ರನ್‌ಗಳ ಭರ್ಜರಿ ಜಯ ದಾಖಲಿಸಿ ಪುರುಷರ T20 ವಿಶ್ವಕಪ್‌ಗೆ ಭರ್ಜರಿ ಚಾಲನೆ ನೀಡಿದ ಬೆನ್ನಲ್ಲೇ, ಸ್ಕಾಟ್ಲೆಂಡ್ ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ವಿರುದ್ಧ 42 ರನ್‌ಗಳಿಂದ ಗೆದ್ದು ಬೀಗಿತು. ಸೋಮವಾರ ಬೆಲ್ಲೆರೀವ್ ಓವಲ್​ನಲ್ಲಿ ನಡೆದ ಗ್ರೂಪ್​ ಬಿ ಯ ಪ್ರಥಮ ಪಂದ್ಯ ಇದಾಗಿತ್ತು.
ಓಪನರ್ ಜಾರ್ಜ್ ಮನ್ಸೆ ಅವರು ಇನ್ನಿಂಗ್ಸ್‌ನಲ್ಲಿ ಅಜೇಯ 66 ರನ್ ಗಳಿಸಿ ಸ್ಕಾಟ್ಲೆಂಡ್‌ 160/5 ಸ್ಕೋರ್ ಗಳಿಸಲು ನೆರವಾದರು. ಎಡಗೈ ಸ್ಪಿನ್ನರ್ ಮಾರ್ಕ್ ವ್ಯಾಟ್ ತಮ್ಮ 3/12 ರೊಂದಿಗೆ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ಈ ಮೂಲಕ ವೆಸ್ಟ್ ಇಂಡೀಸ್ 18.3 ಓವರ್​ಗಳಲ್ಲಿ 118 ರನ್‌ಗಳಿಗೆ ಆಲ್ ಔಟ್ ಆಯಿತು.2021ರ ಟಿ 20 ವಿಶ್ವಕಪ್‌ನ ಓಮನ್‌ನ ಅಲ್ ಅಮೇರಾತ್​​ನಲ್ಲಿ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಆರು ರನ್‌ಗಳಿಂದ ಸೋಲಿಸಿದ ಒಂದು ವರ್ಷದ ನಂತರ ಸ್ಕಾಟ್ಲೆಂಡ್ 42 ರನ್‌ಗಳಿಂದ ಗೆದ್ದಿದೆ.
ಸಂಕ್ಷಿಪ್ತ ಸ್ಕೋರ್: ಸ್ಕಾಟ್ಲೆಂಡ್ 20 ಓವರ್‌ಗಳಲ್ಲಿ 160/5 (ಜಾರ್ಜ್ ಮುನ್ಸಿ ಔಟಾಗದೆ 66, ಕ್ಯಾಲಮ್ ಮ್ಯಾಕ್‌ಲಿಯೊಡ್ 23; ಜೇಸನ್ ಹೋಲ್ಡರ್ 2/14, ಅಲ್ಜಾರಿ ಜೋಸೆಫ್ 2/28) ವೆಸ್ಟ್ ಇಂಡೀಸ್ ಅನ್ನು 18.3 ಓವರ್‌ಗಳಲ್ಲಿ 118 ಆಲೌಟ್ (ಜೇಸನ್ ಹೋಲ್ಡರ್ 38 ಮಾರ್ಕ್ ವ್ಯಾಟ್ 3/12, ಮೈಕಲ್ ಲೀಸ್ಕ್ 2/14) 42 ರನ್‌ಗಳಿಂದ ಸೋಲಿಸಿತು.

andolanait

Recent Posts

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ: ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸಿ ಎಂದ ಸಿ.ಟಿ.ರವಿ

ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…

16 mins ago

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

2 hours ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

2 hours ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

2 hours ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

2 hours ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

3 hours ago