ಬೆಂಗಳೂರು : ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ನ್ಯಾಯಾಂಗ ಮತ್ತು ಸಿಐಡಿ ತನಿಖೆಗೆ ವಹಿಸಲಾಗಿದೆ.
ಕಾಲ್ತುಳಿತ ಪ್ರಕರಣ ಸಂಬಂಧ ತುರ್ತು ಸುದ್ದಿಗೋಷ್ಠಿ ನಡೆಸಿದ ಸಿಎಂ, ಕೆಲವು ಮಾಹಿತಿ ಸಿಕ್ಕಿದ ಮೇಲೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ತನಿಖೆಯನ್ನ ಸಿಐಡಿಗೆ ವಹಿಸಲಾಗಿದೆ. 2 ಎಫ್ಐಆರ್ ಅನ್ನ ಸಿಐಡಿಗೆ ವಹಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಎರಡು ರೀತಿಯಲ್ಲಿ ತನಿಖೆಗೆ ಸರ್ಕಾರ ನಿರ್ಧರಿಸಿದೆ. ನ್ಯಾ.ಮೈಕಲ್ ಡಿ ಕುನ್ಹಾ ನೇತೃತ್ವದಲ್ಲಿ ಏಕ ಸದಸ್ಯ ಆಯೋಗದ ತನಿಖೆ ಹಾಗೂ ಸಿಐಡಿ ನೇತೃತ್ವದಲ್ಲಿ ತನಿಖೆಗೆ ನಿರ್ಧರಿಸಲಾಗಿದೆ. ಯಾರನ್ನು ಬಂಧನ ಮಾಡಬೇಕು ಎಂದು ಸಹ ಚರ್ಚೆ ಆಗಿದೆ ಎಂದರು.
ಗುಪ್ತಚರ ವಿಭಾಗದ ವೈಪಲ್ಯ ಬಗ್ಗೆ ಚರ್ಚೆ ಆಗಿದೆ. ವರದಿ ಬಂದ ಮೇಲೆ ಕ್ರಮದ ಬಗ್ಗೆ ಕ್ರಮ ಎಂದು ಸಿಎಂ ತಿಳಿಸಿದರು.
ನ್ಯಾ.ಮೈಕೆಲ್ ಕುನ್ಹಾ ನೇತೃತ್ವದ ಆಯೋಗ ರಚನೆ
ಘಟನೆಯ ಬಗ್ಗೆ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರಾದ ನ್ಯಾ. ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.
ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳ ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದರು.
ಸಚಿವ ಸಂಪುಟ ಸಭೆಯಲ್ಲಿ ಆರ್ ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…