ಕ್ರೀಡೆ

ಸ್ಟಾರ್ಕ್‌ ಮಿಂಚಿನ ಬೌಲಿಂಗ್‌ ದಾಳಿ: 117ಕ್ಕೆ ಟೀಮ್ ಇಂಡಿಯಾ ಆಲ್‌ಔಟ್‌!

ವಿಶಾಖಪಟ್ಟಣ : ಆಸ್ಟ್ರೇಲಿಯಾ ವಿರುದ್ಧ ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 117 ರನ್‌ಗಳಿಗೆ ಆಲೌಟ್ ಆಗಿದೆ.

ಆಸ್ಟ್ರೇಲಿಯಾ ವಿರುದ್ಧ ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 117 ರನ್‌ಗಳಿಗೆ ಆಲೌಟ್ ಆಗಿದೆ. ಆಸೀಸ್ ವೇಗಿಗಳ ದಾಳಿಗೆ ನಲುಗಿದ ಟೀಂ ಇಂಡಿಯಾಕ್ಕೆ 26 ಓವರ್​ ಕೂಡ ಆಡಲು ಸಾಧ್ಯವಾಗಲಿಲ್ಲ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾದ ನಾಯಕ ಸ್ಟೀವ್ ಸ್ಮಿತ್ ಭಾರತವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು.

ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ರೋಹಿತ್ ಪಡೆಗೆ ಒಂದೇ ಒಂದು ಉತ್ತಮ ಜೊತೆಯಾಟ ನಡೆಸಲು ಸಾಧ್ಯವಾಗಲಿಲ್ಲ. ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ ಹೊರತುಪಡಿಸಿ, ಯಾವುದೇ ಬ್ಯಾಟ್ಸ್‌ಮನ್​ಗೂ 30 ರ ಗಡಿ ದಾಟಲು ಸಾಧ್ಯವಾಗಲಿಲ್ಲ. ಅಕ್ಷರ್ ಪಟೇಲ್ ಹೋರಾಟ ನಡೆಸಿದರಾದರೂ, ಅವರಿಗೆ ಯಾರಿಂದಲೂ ಸಾಥ್ ಸಿಗಲಿಲ್ಲ.

ಕೇವಲ 117 ರನ್​ಗಳಿಗೆ ಆಲೌಟ್ ಆಗುವುದರೊಂದಿಗೆ ತವರಿನಲ್ಲಿ ಟೀಂ ಇಂಡಿಯಾ ಗಳಿಸಿದ ನಾಲ್ಕನೇ ಅತಿ ಕಡಿಮೆ ಸ್ಕೋರ್ ಇದಾಗಿದೆ. ಅದೇ ಸಮಯದಲ್ಲಿ, ಇದು ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೂರನೇ ಅತಿ ಕಡಿಮೆ ಸ್ಕೋರ್ ಕೂಡ ಆಗಿದೆ. ಮುಂಬೈನಲ್ಲೂ ಇದೇ ರೀತಿಯ ಪ್ರದರ್ಶನ ನೀಡಿದ್ದ ಭಾರತ ಸೋಲಿನ ಸುಳಿಗೆ ಸಿಲುಕ್ಕಿತ್ತು. ಆದರೆ ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ನಡುವಿನ ಶತಕದ ಜೊತೆಯಾಟ ತಂಡವನ್ನು ಗೆಲುವಿನ ದಡ ಸೇರಿಸಿತ್ತು. ಆದರೆ ವಿಶಾಖಪಟ್ಟಣದಲ್ಲಿ ಅಂತಹ ಯಾವುದೇ ಪಾಲುದಾರಿಕೆ ಕಂಡುಬರಲಿಲ್ಲ.

ಸೂರ್ಯ ಬ್ಯಾಕ್‌ ಟು ಬ್ಯಾಕ್‌ ಡಕ್‌
ಎಡಗೈ ವೇಗಿ ಮಿಚೆಲ್‌ ಸ್ಟಾರ್ಕ್‌ ಎದುರು ಕಷ್ಟ ಪಡುತ್ತಿರುವ ಸೂರ್ಯಕುಮಾರ್‌ ಯಾದವ್‌, ಒಡಿಐ ಸರಣಿಯ ಮೊದಲ ಎರಡೂ ಪಂದ್ಯಗಳಲ್ಲಿ ಸ್ಟಾರ್ಕ್‌ ಎದುರು ಎದುರಿಸಿದ ಮೊದಲ ಎಸೆತಗಳಲ್ಲೇ ಎಲ್‌ಬಿಡಬ್ಲ್ಯು ಬಲೆಗೆ ಬಿದ್ದಿದ್ದಾರೆ. ಟಿ20-ಐ ಕ್ರಿಕೆಟ್‌ನ ನಂ.1 ಬ್ಯಾಟ್ಸ್‌ಮನ್‌ಗೆ ಒಡಿಐ ಸರಣಿಯಲ್ಲಿ ಈವರೆಗೆ ಖಾತೆ ತೆರೆಯಲು ಕೂಡ ಸಾಧ್ಯವಾಗಿಲ್ಲ.

ಅಕ್ಷರ್‌ ಪಟೇಲ್‌ ಗೆ ಸಿಗದ ಬೆಂಬಲ: 

ರಾಹುಲ್ ವಿಕೆಟ್ ಬಳಿಕ ಬಂದ ಹಾರ್ದಿಕ್ ಪಾಂಡ್ಯ ಕೂಡ ಹೆಚ್ಚು ಹೊತ್ತು ನಿಲ್ಲಲ್ಲಿಲ್ಲ. ಸ್ಟೀವ್ ಸ್ಮಿತ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ಪಾಂಡ್ಯ ಕೇವಲ ಒಂದು ರನ್ ಗಳಿಸಿ ಪೆವಿಲಿಯನ್  ದಾರಿ ಹಿಡಿದರು. ಇಲ್ಲಿಂದ ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಭಾರತ ಇನ್ನಿಂಗ್ಸ್ ನಿಭಾಯಿಸಲು ಪ್ರಯತ್ನಿಸಿದರು, ಆದರೆ ನಾಥನ್ ಎಲ್ಲಿಸ್ ಇದಕ್ಕೆ ಅವಕಾಶ ನೀಡಲಿಲ್ಲ. ಮೊದಲು ವಿರಾಟ್ ಕೊಹ್ಲಿ (31 ರನ್) ಯನ್ನು ಔಟ್ ಮಾಡಿದ ಎಲ್ಲಿಸ್, ನಂತರ ರವೀಂದ್ರ ಜಡೇಜಾ (16 ರನ್) ಅವರನ್ನು ಔಟ್ ಮಾಡಿದರು. ಅಕ್ಷರ್ ಪಟೇಲ್ ಒಂದು ತುದಿಯಲ್ಲಿ ನಿಂತು 29 ರನ್ ಗಳಿಸಿ, ಇನ್ನಿಂಗ್ಸ್ ನಿಭಾಯಿಸಲು ಪ್ರಯತ್ನಿಸಿದರು. ಆದರೆ ಅವರಿಗೆ ಯಾವುದೇ ಆಟಗಾರನಿಂದ ಬೆಂಬಲ ಸಿಗಲಿಲ್ಲ. ನಾಲ್ಕು ರನ್ ಗಳಿಸಿ ಕುಲ್ದೀಪ್ ಔಟಾದರೆ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಈ ಮೂಲಕ ಟೀಂ ಇಂಡಿಯಾ ಕೇವಲ 26 ಓವರ್‌ಗಳಿಗೆ ಇನ್ನಿಂಗ್ಸ್​ ಮುಗಿಸಿತು. ಇತ್ತ ಆತಿಥೇಯರನ್ನು ಆಲೌಟ್ ಮಾಡಲು ಆಸ್ಟ್ರೇಲಿಯಾಕ್ಕೆ ಕೇವಲ ಎರಡು ಗಂಟೆ 20 ನಿಮಿಷಗಳು ಬೇಕಾಯಿತು.

andolanait

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

9 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

34 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

53 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago