ಲಂಡನ್ : ಸದ್ಯ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನಾಡುತ್ತಿರುವ ಆಸ್ಟ್ರೇಲಿಯಾ ತಂಡದ ಉಪನಾಯಕ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್ನಲ್ಲಿ 9 ಸಾವಿರ ರನ್ ಪೂರೈಸಿ, ವಿಶೇಷ ಸಾಧನೆ ಮಾಡಿದ್ದಾರೆ.
ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ವೇಗವಾಗಿ 9 ಸಾವಿರ ರನ್ ಪೂರೈಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಜೊತೆಗೆ 176 ಇನ್ನಿಂಗ್ಸ್ಗಳಲ್ಲಿ 9 ಸಾವಿರ ರನ್ ಪೂರೈಸಿದ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನ ಮುರಿದಿದ್ದಾರೆ.
ಇಂಗ್ಲೆಂಡ್ ವಿರುದ್ಧ ಆ್ಯಶಸ್ ಟೂರ್ನಿಯಲ್ಲಿ 2ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಸ್ಟೀವ್ ಸ್ಮಿತ್ 95 ರನ್ (162 ಎಸೆತ) ಗಳಿಸಿ ಕ್ರೀಸ್ನಲ್ಲಿದ್ದಾರೆ. ಬುಧವಾರ ಲಂಡನ್ನಿನ ಲಾರ್ಡ್ಸ್ ಮೈದಾನದಲ್ಲಿ ಆರಂಭವಾದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆಸೀಸ್ ಪರ ಸ್ಮಿತ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿ, 2ನೇ ದಿನದಲ್ಲಿ ಕ್ರೀಸ್ ಮುಂದುವರಿಸಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿ 9 ಸಾವಿರ ರನ್ಗಳನ್ನು ದಾಖಲಿಸಿದ ಆಸ್ಟ್ರೇಲಿಯಾದ 4ನೇ ಬ್ಯಾಟ್ಸ್ಮ್ಯಾನ್ ಆಗಿ ಸ್ಟೀವ್ ಸ್ಮಿತ್ ಗುರುತಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾ ದಿಗ್ಗಜರಾದ ರಿಕಿ ಪಾಂಟಿಂಗ್ (13,378 ರನ್), ಆಲನ್ ಬಾರ್ಡರ್ (11,174 ರನ್) ಹಾಗೂ ಸ್ಟೀವ್ ವಾ (10,927 ರನ್) ಟೆಸ್ಟ್ ಕ್ರಿಕೆಟ್ನಲ್ಲಿ ಈ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಂತ ವೇಗವಾಗಿ 9 ಸಾವಿರ ರನ್ಗಳನ್ನು ಪೂರ್ಣಗೊಳಿಸಿದ 2ನೇ ಬ್ಯಾಟ್ಸ್ಮ್ಯಾನ್ ಎಂಬ ಸಾಧನೆಯನ್ನು ಸ್ಟೀವ್ ಸ್ಮಿತ್ ಮಾಡಿದ್ದಾರೆ.
ಈ ಹಿಂದೆ ಶ್ರೀಲಂಕಾ ತಂಡದ ಮಾಜಿ ನಾಯಕ ಕುಮಾರ ಸಂಗಕ್ಕಾರ 172 ಇನ್ನಿಂಗ್ಸ್ಗಳಲ್ಲಿ 9 ಸಾವಿರ ರನ್ ಪೂರೈಸಿದ್ದರು. ರಾಹುಲ್ ದ್ರಾವಿಡ್ 176 ಇನ್ನಿಂಗ್ಸ್, ಬ್ರಿಯಾನ್ ಲಾರಾ ಹಾಗೂ ರಿಕ್ಕಿ ಪಾಂಟಿಂಗ್ ತಲಾ 177 ಇನ್ನಿಂಗ್ಸ್ಗಳಲ್ಲಿ 9 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದರೆ, ಸ್ಮಿತ್ 174 ಇನ್ನಿಂಗ್ಸ್ಗಳಲ್ಲೇ 9 ಸಾವಿರ ರನ್ ಪೂರೈಸಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ.
ಇತ್ತೀಚೆಗೆ ಭಾರತದ ವಿರುದ್ಧ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ತಾಳ್ಮೆಯ ಆಟವಾಡಿದ್ದ ಸ್ಮಿತ್ 121 ರನ್ (268 ಎಸೆತ, 19 ಬೌಂಡರಿ) ರನ್ ಗಳಿಸಿ ಮಿಂಚಿದ್ದರು.
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…
ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ…
ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್…
ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್ ಕುಮಾರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್…
ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್ನಲ್ಲಿ ಟಾಟಾ ಏರ್ಬಸ್ ಲಘು ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…