ಕ್ರೀಡೆ

ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿದ ಸ್ಟೀವ್ ಸ್ಮಿತ್ : ದ್ರಾವಿಡ್ ದಾಖಲೆ ಉಡೀಸ್

ಲಂಡನ್ : ಸದ್ಯ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನಾಡುತ್ತಿರುವ ಆಸ್ಟ್ರೇಲಿಯಾ ತಂಡದ ಉಪನಾಯಕ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿ, ವಿಶೇಷ ಸಾಧನೆ ಮಾಡಿದ್ದಾರೆ.

ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 9 ಸಾವಿರ ರನ್ ಪೂರೈಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಜೊತೆಗೆ 176 ಇನ್ನಿಂಗ್ಸ್‌ಗಳಲ್ಲಿ 9 ಸಾವಿರ ರನ್ ಪೂರೈಸಿದ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನ ಮುರಿದಿದ್ದಾರೆ.

ಇಂಗ್ಲೆಂಡ್ ವಿರುದ್ಧ ಆ್ಯಶಸ್ ಟೂರ್ನಿಯಲ್ಲಿ 2ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಸ್ಟೀವ್ ಸ್ಮಿತ್ 95 ರನ್ (162 ಎಸೆತ) ಗಳಿಸಿ ಕ್ರೀಸ್‌ನಲ್ಲಿದ್ದಾರೆ. ಬುಧವಾರ ಲಂಡನ್ನಿನ ಲಾರ್ಡ್ಸ್ ಮೈದಾನದಲ್ಲಿ ಆರಂಭವಾದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆಸೀಸ್ ಪರ ಸ್ಮಿತ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿ, 2ನೇ ದಿನದಲ್ಲಿ ಕ್ರೀಸ್ ಮುಂದುವರಿಸಿದ್ದಾರೆ. 

ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್‌ಗಳನ್ನು ದಾಖಲಿಸಿದ ಆಸ್ಟ್ರೇಲಿಯಾದ 4ನೇ ಬ್ಯಾಟ್ಸ್‌ಮ್ಯಾನ್ ಆಗಿ ಸ್ಟೀ‌ವ್‌ ಸ್ಮಿತ್ ಗುರುತಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾ ದಿಗ್ಗಜರಾದ ರಿಕಿ ಪಾಂಟಿಂಗ್ (13,378 ರನ್), ಆಲನ್ ಬಾರ್ಡರ್ (11,174 ರನ್) ಹಾಗೂ ಸ್ಟೀವ್ ವಾ (10,927 ರನ್) ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ 9 ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ 2ನೇ ಬ್ಯಾಟ್ಸ್‌ಮ್ಯಾನ್‌ ಎಂಬ ಸಾಧನೆಯನ್ನು ಸ್ಟೀವ್‌ ಸ್ಮಿತ್ ಮಾಡಿದ್ದಾರೆ.

ಈ ಹಿಂದೆ ಶ್ರೀಲಂಕಾ ತಂಡದ ಮಾಜಿ ನಾಯಕ ಕುಮಾರ ಸಂಗಕ್ಕಾರ 172 ಇನ್ನಿಂಗ್ಸ್‌ಗಳಲ್ಲಿ 9 ಸಾವಿರ ರನ್ ಪೂರೈಸಿದ್ದರು. ರಾಹುಲ್ ದ್ರಾವಿಡ್ 176 ಇನ್ನಿಂಗ್ಸ್, ಬ್ರಿಯಾನ್ ಲಾರಾ ಹಾಗೂ ರಿಕ್ಕಿ ಪಾಂಟಿಂಗ್ ತಲಾ 177 ಇನ್ನಿಂಗ್ಸ್‌ಗಳಲ್ಲಿ 9 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದರೆ, ಸ್ಮಿತ್ 174 ಇನ್ನಿಂಗ್ಸ್‌ಗಳಲ್ಲೇ 9 ಸಾವಿರ ರನ್ ಪೂರೈಸಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಇತ್ತೀಚೆಗೆ ಭಾರತದ ವಿರುದ್ಧ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ತಾಳ್ಮೆಯ ಆಟವಾಡಿದ್ದ ಸ್ಮಿತ್ 121 ರನ್ (268 ಎಸೆತ, 19 ಬೌಂಡರಿ) ರನ್ ಗಳಿಸಿ ಮಿಂಚಿದ್ದರು.

lokesh

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

3 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

5 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

5 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

6 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

6 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

6 hours ago