ಕ್ರೀಡೆ

ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿದ ಸ್ಟೀವ್ ಸ್ಮಿತ್ : ದ್ರಾವಿಡ್ ದಾಖಲೆ ಉಡೀಸ್

ಲಂಡನ್ : ಸದ್ಯ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನಾಡುತ್ತಿರುವ ಆಸ್ಟ್ರೇಲಿಯಾ ತಂಡದ ಉಪನಾಯಕ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿ, ವಿಶೇಷ ಸಾಧನೆ ಮಾಡಿದ್ದಾರೆ.

ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 9 ಸಾವಿರ ರನ್ ಪೂರೈಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಜೊತೆಗೆ 176 ಇನ್ನಿಂಗ್ಸ್‌ಗಳಲ್ಲಿ 9 ಸಾವಿರ ರನ್ ಪೂರೈಸಿದ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನ ಮುರಿದಿದ್ದಾರೆ.

ಇಂಗ್ಲೆಂಡ್ ವಿರುದ್ಧ ಆ್ಯಶಸ್ ಟೂರ್ನಿಯಲ್ಲಿ 2ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಸ್ಟೀವ್ ಸ್ಮಿತ್ 95 ರನ್ (162 ಎಸೆತ) ಗಳಿಸಿ ಕ್ರೀಸ್‌ನಲ್ಲಿದ್ದಾರೆ. ಬುಧವಾರ ಲಂಡನ್ನಿನ ಲಾರ್ಡ್ಸ್ ಮೈದಾನದಲ್ಲಿ ಆರಂಭವಾದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆಸೀಸ್ ಪರ ಸ್ಮಿತ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿ, 2ನೇ ದಿನದಲ್ಲಿ ಕ್ರೀಸ್ ಮುಂದುವರಿಸಿದ್ದಾರೆ. 

ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್‌ಗಳನ್ನು ದಾಖಲಿಸಿದ ಆಸ್ಟ್ರೇಲಿಯಾದ 4ನೇ ಬ್ಯಾಟ್ಸ್‌ಮ್ಯಾನ್ ಆಗಿ ಸ್ಟೀ‌ವ್‌ ಸ್ಮಿತ್ ಗುರುತಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾ ದಿಗ್ಗಜರಾದ ರಿಕಿ ಪಾಂಟಿಂಗ್ (13,378 ರನ್), ಆಲನ್ ಬಾರ್ಡರ್ (11,174 ರನ್) ಹಾಗೂ ಸ್ಟೀವ್ ವಾ (10,927 ರನ್) ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ 9 ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ 2ನೇ ಬ್ಯಾಟ್ಸ್‌ಮ್ಯಾನ್‌ ಎಂಬ ಸಾಧನೆಯನ್ನು ಸ್ಟೀವ್‌ ಸ್ಮಿತ್ ಮಾಡಿದ್ದಾರೆ.

ಈ ಹಿಂದೆ ಶ್ರೀಲಂಕಾ ತಂಡದ ಮಾಜಿ ನಾಯಕ ಕುಮಾರ ಸಂಗಕ್ಕಾರ 172 ಇನ್ನಿಂಗ್ಸ್‌ಗಳಲ್ಲಿ 9 ಸಾವಿರ ರನ್ ಪೂರೈಸಿದ್ದರು. ರಾಹುಲ್ ದ್ರಾವಿಡ್ 176 ಇನ್ನಿಂಗ್ಸ್, ಬ್ರಿಯಾನ್ ಲಾರಾ ಹಾಗೂ ರಿಕ್ಕಿ ಪಾಂಟಿಂಗ್ ತಲಾ 177 ಇನ್ನಿಂಗ್ಸ್‌ಗಳಲ್ಲಿ 9 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದರೆ, ಸ್ಮಿತ್ 174 ಇನ್ನಿಂಗ್ಸ್‌ಗಳಲ್ಲೇ 9 ಸಾವಿರ ರನ್ ಪೂರೈಸಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಇತ್ತೀಚೆಗೆ ಭಾರತದ ವಿರುದ್ಧ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ತಾಳ್ಮೆಯ ಆಟವಾಡಿದ್ದ ಸ್ಮಿತ್ 121 ರನ್ (268 ಎಸೆತ, 19 ಬೌಂಡರಿ) ರನ್ ಗಳಿಸಿ ಮಿಂಚಿದ್ದರು.

lokesh

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago