ನವದೆಹಲಿ: ಇಂಗ್ಲೆಂಡ್ ತಂಡದ ವೇಗಿ ಒಲ್ಲಿ ರಾಬಿನ್ಸನ್ಗೆ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ತಿರುಗೇಟು ನೀಡಿದ್ದಾರೆ. ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಣ ಆಷಸ್ ಟೆಸ್ಟ್ ಸರಣಿಯ ಮೊದಲನೇ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಉಸ್ಮಾನ್ ಖವಾಜ ಅವರ ಎದುರು ಒಲ್ಲಿ ರಾಬಿನ್ಸನ್ ಅತಿಯಾದ ವರ್ತನೆ ತೋರಿದ್ದರು. ಇದನ್ನು ಹಲವು ಮಾಜಿ ಕ್ರಿಕೆಟಿಗರು ಪ್ರಶ್ನೆ ಮಾಡಿದ್ದರು.
ಬರ್ಮಿಂಗ್ಹ್ಯಾಮ್ನ ಎಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದಿದ್ದ ಮೊದಲನೇ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಉಸ್ಮಾನ್ ಖವಾಜ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರುವ ಮೂಲಕ ಶತಕ ಬಾರಿಸಿದ್ದರು. 140 ರನ್ ಗಳಿಸಿ ವಿಕೆಟ್ ಒಪ್ಪಿಸಿದ ಬಳಿಕ ಪೆವಿಲಿಯನ್ಗೆ ತೆರಳುತ್ತಿದ್ದ ಖವಾಜ ಅವರನ್ನು ರಾಬಿನ್ಸನ್ ಸ್ಲೆಡ್ಜ್ ಮಾಡಿದ್ದರು. ಇದರಿಂದಾಗಿ ಒಲ್ಲಿ ರಾಬಿನ್ಸನ್ ಅವರ ವರ್ತನೆ ಕೆಲವರಿಗೆ ಇಷ್ಟವಾಗಿರಲಿಲ್ಲ.
ಸುದ್ದಿಗೋಷ್ಟೀಯಲ್ಲಿ ಇದೇ ಪ್ರೆಶ್ನೆಯನ್ನು ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಒಲ್ಲಿ ರಾಬಿನ್ಸನ್, ತಮ್ಮ ವರ್ತನೆಯನ್ನು ಸಮರ್ಥಿಸಿಕೊಂಡರು. ಈ ಹಿಂದೆ ಆಷಸ್ ಟೆಸ್ಟ್ ಸರಣಿಗಳಲ್ಲಿಯೂ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಹಾಗೂ ಇತರೆ ಆಟಗಾರರು ನಮ್ಮ ಬ್ಯಾಟ್ಸ್ಮನ್ಗಳನ್ನು ಸ್ಲೆಡ್ಜ್ ಮಾಡಿದ್ದರು. ಅದೇ ರೀತಿ ಇದೀಗ ನಾನು ಮಾಡಿದ್ದೇನೆ ಅಷ್ಟೆ ಎಂದು ಹೇಳಿದ್ದರು.
ರಾಬಿನ್ಸನ್ ಇನ್ನೂ ಬುದ್ದಿ ಕಲಿತಿಲ್ಲ: ಇದಕ್ಕೆ ಪ್ರತಿಕ್ರಿಯಿಸಿದ ರಿಕಿ ಪಾಂಟಿಂಗ್, ಆಷಸ್ ಇತಿಹಾಸದ ಮೇಲೆ ಹೆಚ್ಚಿನ ಗಮನ ಹರಿಸುವುದಕ್ಕಿಂತ ಇಂಗ್ಲೆಂಡ್ ಆಟಗಾರ, ತಮ್ಮ ವೈಯಕ್ತಿಕ ಪ್ರದರ್ಶನದ ಮೇಲೆ ಹೆಚ್ಚಿನ ಗಮನ ಕೇಂದ್ರಿಕರಿಸಲಿ ಎಂದು ತಿರುಗೇಟು ನೀಡಿದ್ದಾರೆ. ಇಂಗ್ಲೆಂಡ್ ತಂಡಕ್ಕೆ ಇನ್ನೂ ಆಸ್ಟ್ರೇಲಿಯಾ ತಂಡದಿಂದ ಪೂರ್ಣ ಪ್ರಮಾಣದ ಸವಾಲು ಎದುರಾಗಿಲ್ಲ. ಮುಂದಿನ ಪಂದ್ಯಗಳಲ್ಲಿ ಇನ್ನಷ್ಟು ಕಠಿಣ ಸವಾಲು ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಐಸಿಸಿ ರಿವ್ಯೂವ್ ಪಾಡ್ಕಾಸ್ಟ್ನಲ್ಲಿ ಪ್ರತಿಕ್ರಿಯಿಸಿದ ರಿಕಿ ಪಾಂಟಿಂಗ್, “ಈಗಾಗಲೇ ಒಂದು ವಾರ ಕಳೆದಿದೆ. ಆದರೆ, ಒಲ್ಲಿ ರಾಬಿನ್ಸನ್ ಮಾತ್ರ ಇನ್ನೂ ಬುದ್ದಿ ಕಲಿತಿಲ್ಲ. ಅವರು ತುಂಬಾ ನಿಧಾನವಾಗಿ ಕಲಿಯುವ ವ್ಯಕ್ತಿ ಎಂಬಂತೆ ಕಾಣುತ್ತಿದೆ,” ಎಂದು ಖಾರವಾಗಿ ಹೇಳಿದ್ದಾರೆ.
ಒಲ್ಲಿ ರಾಬಿನ್ಸನ್ಗೆ ಬುದ್ದಿ ಹೇಳಿದ ಪಾಂಟಿಂಗ್: “ಸ್ಲೆಡ್ಜಿಂಗ್ ಬಗ್ಗೆ ಉತ್ತರ ನೀಡಲು ಪ್ರಯತ್ನಿಸುವಾಗ ಅವರು ನನ್ನ ಹೆಸರನ್ನು ಅನಾವಶ್ಯಕವಾಗಿ ಎಳೆದು ತಂದಿದ್ದಾರೆ. ಆದರೆ, ಬಾತುಕೋಳಿಯನ್ನು ಪುನಃ ನೀರಿಗೆ ಬಿಡಬೇಕಾಗಿದೆ. ಅವರು ಒಂದು ಕಡೆ ಕುಳಿತು ನನ್ನ ಬಗ್ಗೆ ಯೋಚಿಸುತ್ತಿದ್ದಾರೆಂದರೆ ಇದರ ಬಗ್ಗೆ ಅಚ್ಚರಿಯೇನಿಲ್ಲ. ತಮ್ಮ ವೈಯಕ್ತಿಕ ಪ್ರದರ್ಶನವನ್ನು ಉತ್ತಮಪಡಿಸಿಕೊಳ್ಳುವ ಬದಲು, 15 ವರ್ಷಗಳಲ್ಲಿ ನಾನು ಏನು ಮಾಡಿದ್ದೇನೆಂಬುದನ್ನು ಯೋಚಿಸುತ್ತಿದ್ದಾರೆ,” ಎಂದು ರಿಕಿ ಪಾಂಟಿಂಗ್ ಇಂಗ್ಲೆಂಡ್ ವೇಗಿಗೆ ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ…
ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ…
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ…
ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು…
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್ ಕೇಸ್ಗಳು ಮತ್ತಷ್ಟು…
ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…