ಕ್ರೀಡೆ

‘ಇನ್ನೂ ಬುದ್ದಿ ಕಲಿತಿಲ್ಲ’-ಒಲ್ಲಿ ರಾಬಿನ್ಸನ್‌ ವಿರುದ್ಧ ರಿಕಿ ಪಾಂಟಿಂಗ್ ಕಿಡಿ!

ನವದೆಹಲಿ: ಇಂಗ್ಲೆಂಡ್‌ ತಂಡದ ವೇಗಿ ಒಲ್ಲಿ ರಾಬಿನ್ಸನ್‌ಗೆ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ತಿರುಗೇಟು ನೀಡಿದ್ದಾರೆ. ಇಂಗ್ಲೆಂಡ್‌ ಹಾಗೂ ಆಸ್ಟ್ರೇಲಿಯಾ ನಡುವಣ ಆಷಸ್‌ ಟೆಸ್ಟ್‌ ಸರಣಿಯ ಮೊದಲನೇ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಉಸ್ಮಾನ್‌ ಖವಾಜ ಅವರ ಎದುರು ಒಲ್ಲಿ ರಾಬಿನ್ಸನ್ ಅತಿಯಾದ ವರ್ತನೆ ತೋರಿದ್ದರು. ಇದನ್ನು ಹಲವು ಮಾಜಿ ಕ್ರಿಕೆಟಿಗರು ಪ್ರಶ್ನೆ ಮಾಡಿದ್ದರು.

ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್‌ ಸ್ಟೇಡಿಯಂನಲ್ಲಿ ನಡೆದಿದ್ದ ಮೊದಲನೇ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಉಸ್ಮಾನ್ ಖವಾಜ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ತೋರುವ ಮೂಲಕ ಶತಕ ಬಾರಿಸಿದ್ದರು. 140 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದ ಬಳಿಕ ಪೆವಿಲಿಯನ್‌ಗೆ ತೆರಳುತ್ತಿದ್ದ ಖವಾಜ ಅವರನ್ನು ರಾಬಿನ್ಸನ್‌ ಸ್ಲೆಡ್ಜ್ ಮಾಡಿದ್ದರು. ಇದರಿಂದಾಗಿ ಒಲ್ಲಿ ರಾಬಿನ್ಸನ್ ಅವರ ವರ್ತನೆ ಕೆಲವರಿಗೆ ಇಷ್ಟವಾಗಿರಲಿಲ್ಲ.

ಸುದ್ದಿಗೋಷ್ಟೀಯಲ್ಲಿ ಇದೇ ಪ್ರೆಶ್ನೆಯನ್ನು ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಒಲ್ಲಿ ರಾಬಿನ್ಸನ್, ತಮ್ಮ ವರ್ತನೆಯನ್ನು ಸಮರ್ಥಿಸಿಕೊಂಡರು. ಈ ಹಿಂದೆ ಆಷಸ್‌ ಟೆಸ್ಟ್‌ ಸರಣಿಗಳಲ್ಲಿಯೂ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್‌ ಹಾಗೂ ಇತರೆ ಆಟಗಾರರು ನಮ್ಮ ಬ್ಯಾಟ್ಸ್‌ಮನ್‌ಗಳನ್ನು ಸ್ಲೆಡ್ಜ್‌ ಮಾಡಿದ್ದರು. ಅದೇ ರೀತಿ ಇದೀಗ ನಾನು ಮಾಡಿದ್ದೇನೆ ಅಷ್ಟೆ ಎಂದು ಹೇಳಿದ್ದರು.

ರಾಬಿನ್ಸನ್‌ ಇನ್ನೂ ಬುದ್ದಿ ಕಲಿತಿಲ್ಲ: ಇದಕ್ಕೆ ಪ್ರತಿಕ್ರಿಯಿಸಿದ ರಿಕಿ ಪಾಂಟಿಂಗ್, ಆಷಸ್‌ ಇತಿಹಾಸದ ಮೇಲೆ ಹೆಚ್ಚಿನ ಗಮನ ಹರಿಸುವುದಕ್ಕಿಂತ ಇಂಗ್ಲೆಂಡ್‌ ಆಟಗಾರ, ತಮ್ಮ ವೈಯಕ್ತಿಕ ಪ್ರದರ್ಶನದ ಮೇಲೆ ಹೆಚ್ಚಿನ ಗಮನ ಕೇಂದ್ರಿಕರಿಸಲಿ ಎಂದು ತಿರುಗೇಟು ನೀಡಿದ್ದಾರೆ. ಇಂಗ್ಲೆಂಡ್‌ ತಂಡಕ್ಕೆ ಇನ್ನೂ ಆಸ್ಟ್ರೇಲಿಯಾ ತಂಡದಿಂದ ಪೂರ್ಣ ಪ್ರಮಾಣದ ಸವಾಲು ಎದುರಾಗಿಲ್ಲ. ಮುಂದಿನ ಪಂದ್ಯಗಳಲ್ಲಿ ಇನ್ನಷ್ಟು ಕಠಿಣ ಸವಾಲು ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಐಸಿಸಿ ರಿವ್ಯೂವ್‌ ಪಾಡ್‌ಕಾಸ್ಟ್‌ನಲ್ಲಿ ಪ್ರತಿಕ್ರಿಯಿಸಿದ ರಿಕಿ ಪಾಂಟಿಂಗ್‌, “ಈಗಾಗಲೇ ಒಂದು ವಾರ ಕಳೆದಿದೆ. ಆದರೆ, ಒಲ್ಲಿ ರಾಬಿನ್ಸನ್ ಮಾತ್ರ ಇನ್ನೂ ಬುದ್ದಿ ಕಲಿತಿಲ್ಲ. ಅವರು ತುಂಬಾ ನಿಧಾನವಾಗಿ ಕಲಿಯುವ ವ್ಯಕ್ತಿ ಎಂಬಂತೆ ಕಾಣುತ್ತಿದೆ,” ಎಂದು ಖಾರವಾಗಿ ಹೇಳಿದ್ದಾರೆ.

ಒಲ್ಲಿ ರಾಬಿನ್ಸನ್‌ಗೆ ಬುದ್ದಿ ಹೇಳಿದ ಪಾಂಟಿಂಗ್‌: “ಸ್ಲೆಡ್ಜಿಂಗ್ ಬಗ್ಗೆ ಉತ್ತರ ನೀಡಲು ಪ್ರಯತ್ನಿಸುವಾಗ ಅವರು ನನ್ನ ಹೆಸರನ್ನು ಅನಾವಶ್ಯಕವಾಗಿ ಎಳೆದು ತಂದಿದ್ದಾರೆ. ಆದರೆ, ಬಾತುಕೋಳಿಯನ್ನು ಪುನಃ ನೀರಿಗೆ ಬಿಡಬೇಕಾಗಿದೆ. ಅವರು ಒಂದು ಕಡೆ ಕುಳಿತು ನನ್ನ ಬಗ್ಗೆ ಯೋಚಿಸುತ್ತಿದ್ದಾರೆಂದರೆ ಇದರ ಬಗ್ಗೆ ಅಚ್ಚರಿಯೇನಿಲ್ಲ. ತಮ್ಮ ವೈಯಕ್ತಿಕ ಪ್ರದರ್ಶನವನ್ನು ಉತ್ತಮಪಡಿಸಿಕೊಳ್ಳುವ ಬದಲು, 15 ವರ್ಷಗಳಲ್ಲಿ ನಾನು ಏನು ಮಾಡಿದ್ದೇನೆಂಬುದನ್ನು ಯೋಚಿಸುತ್ತಿದ್ದಾರೆ,” ಎಂದು ರಿಕಿ ಪಾಂಟಿಂಗ್‌ ಇಂಗ್ಲೆಂಡ್‌ ವೇಗಿಗೆ ತಿರುಗೇಟು ನೀಡಿದ್ದಾರೆ.

andolanait

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 hour ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

6 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

6 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

6 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

11 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

11 hours ago