ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ತವರು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಕೊನೆಯ ಲೀಗ್ ಪಂದ್ಯವಾಡಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೋಲನುಭವಿಸಿದೆ. ಆದರೆ ತವರಿನ ಕೊನೆಯ ಲೀಗ್ ಪಂದ್ಯವಾದ ಕಾರಣ ಅಭಿಮಾನಿಗಳಿಗೆ ಧನ್ಯವಾದ ಹೇಳಲು ಸ್ಟೇಡಿಯಂನತ್ತ ಚೆಂಡುಗಳನ್ನು ಎಸೆದರು.
ಧೋನಿ ಮತ್ತು ಸಿಎಸ್ಕೆ ಆಟಗಾರರು ಚೆಪಾಕ್ ನಲ್ಲಿ ಸುತ್ತುತ್ತಿರುವಾಗ ಪ್ರಸ್ತುತ ಐಪಿಎಲ್ 2023 ರ ಕಾಮೆಂಟರಿ ತಂಡದ ಭಾಗವಾಗಿರುವ ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು ಸಿಎಸ್ ಕೆ ನಾಯಕ ಧೋನಿ ಬಳಿ ಓಡಿ ಬಂದು ಅವರ ಶರ್ಟ್ ನಲ್ಲಿ ಅವರ ಆಟೋಗ್ರಾಫ್ ತೆಗೆದುಕೊಂಡರು.
ಅದೇ ಕ್ಷಣದ ನಂತರ ಧೋನಿ ಮತ್ತು ಗವಾಸ್ಕರ್ ಹಗ್ ಮಾಡಿಕೊಂಡರು.
ತನ್ನ ಶರ್ಟ್ ಮೇಲೆ ಧೋನಿಯ ಹಸ್ತಾಕ್ಷರವನ್ನು ಪಡೆದ ನಂತರ, ಗವಾಸ್ಕರ್ ಅವರು ಕಾಮೆಂಟರಿಯಲ್ಲಿ “ದಯವಿಟ್ಟು ಉಳಿದ ಪಂದ್ಯಗಳಿಗೆ ನನಗೆ ಹೊಸ ಗುಲಾಬಿ ಶರ್ಟ್ ನೀಡಿ” ಎಂದು ಹೇಳಿದರು.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…