ಮುಂಬೈ: ವಿರಾಟ್ ಕೊಹ್ಲಿಗೆ ಭಾರತ ರತ್ನ ನೀಡಬೇಕು ಎಂದು ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಹೇಳಿದ್ದಾರೆ.
ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಸುರೇಶ್ ರೈನಾ ಅವರು, ಕೊಹ್ಲಿ ಭಾರತಕ್ಕಾಗಿ ಹಲವು ಸಾಧನೆಗಳನ್ನು ಮಾಡಿದ್ದಾರೆ. ಆದ್ದರಿಂದ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ರೋಹಿತ್ ತಮ್ಮ ಟೆಸ್ಟ್ ವೃತ್ತಿಜೀವನಕ್ಕೆ ತೆರೆ ಎಳೆದ ಐದು ದಿನಗಳ ನಂತರ, ಕಳೆದ ಸೋಮವಾರ ಕೊಹ್ಲಿ ಸಾಮಾಜಿಕ ಮಾಧ್ಯಮದಲ್ಲಿ ನಿವೃತ್ತಿ ಘೋಷಣೆ ಮಾಡಿದರು. 36 ವರ್ಷ ವಯಸ್ಸಿನ ಕೊಹ್ಲಿ 123 ಪಂದ್ಯಗಳ್ಲಲಿ 9230 ರನ್ ಗಳಿಸಿ, 30 ಶತಕಗಳನ್ನು ಒಳಗೊಂಡಂತೆ ಭಾರತದ ಪರ ನಾಲ್ಕನೇ ಅತೀ ಹೆಚ್ಚು ರನ್ ಗಳಿಸಿದವರಾಗಿ ತಮ್ಮ ವೃತ್ತಿ ಜೀವನವನ್ನು ಕೊನೆಗೊಳಿಸಿದ್ದಾರೆ.
ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಭಾರತ ರತ್ನ ಪ್ರಶಸ್ತಿ ಪಡೆದ ಏಕೈಕ ಕ್ರೀಡಾಪಟುವಾಗಿದ್ದು, ಈ ಪ್ರಶಸ್ತಿಯನ್ನು ಪಡೆದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…
ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…