ಕ್ರೀಡೆ

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸುರೇಶ್‌ ರೈನಾ

ಟೀಮ್ ಇಂಡಿಯಾ ಮಾಜಿ ಆಟಗಾರ ಸುರೇಶ್ ರೈನಾ ಭಾರತದ ಎಲ್ಲ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಪಡೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ರೈನಾ, ”ನನ್ನ ದೇಶ ಮತ್ತು ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸಿರುವುದಕ್ಕೆ ಗೌರವವಿದೆ. ನಾನು ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಗೆ ನಿವೃತ್ತಿ ಘೋಷಿಸಲು ಬಯಸುತ್ತೇನೆ. ಬಿಸಿಸಿಐ, ಯುಪಿ ಕ್ರಿಕೆಟ್, ಸಿಎಸ್​ಕೆ, ರಾಜೀವ್ ಶುಕ್ಲಾ ಹಾಗೂ ನನಗೆ ಬೆಂಬಲ ನೀಡಿದ ಎಲ್ಲ ಅಭಿಮಾನಿಗಳಿಗೆ, ಸ್ನೇಹಿತರಿಗೆ ಧನ್ಯವಾದ ಹೇಳಲು ಇಚ್ಚಿಸುತ್ತೇನೆ,” ಎಂದು ಬರೆದುಕೊಂಡಿದ್ದಾರೆ.

ಈ ಮೂಲಕ ರೈನಾ ಇನ್ನುಮುಂದೆ ಐಪಿಎಲ್ ಹಾಗೂ ದೇಶೀಯ ಕ್ರಿಕೆಟ್​ನಲ್ಲಿ ಕಾಣಿಸುವುದಿಲ್ಲ. 2020ರಲ್ಲಿ ಸ್ವಾತಂತ್ರ್ಯ ದಿನ ಆಗಸ್ಟ್‌ 15 ರಂದು ಎಂ.ಎಸ್‌ ಧೋನಿ ಜೊತೆಗೆ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ್ದರು. ಇದೀಗ ಭಾರತದ ಎಲ್ಲ ಮಾದರಿಯ ಕ್ರಿಕೆಟ್​ನಿಂದ ಮಿಸ್ಟರ್ ಐಪಿಎಲ್ ಹಿಂದೆ ಸರಿದಿದ್ದಾರೆ. ವಿದೇಶಿ ಲೀಗ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಮಾತಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 5000 ರನ್‌ಗಳ ಗಡಿ ದಾಟಿದ ಮೊದಲ ಬ್ಯಾಟರ್‌ ಎಂಬ ಹೆಗ್ಗಳಿಕೆ ಹೊಂದಿರುವ ಸುರೇಶ್‌ ರೈನಾ, ಈವರೆಗೆ ಆಡಿದ 205 ಪಂದ್ಯಗಳಿಂದ 5528 ಎನ್‌ಗಳನ್ನು ಬಾರಿಸಿದ್ದಾರೆ. 136.7ರ ಅದ್ಭುತ ಸ್ಟ್ರೈಕ್‌ರೇಟ್‌ ಹೊಂದಿರುವ ಅವರು 32.5ರ ಅಮೋಘ ಸರಾಸರಿಯಲ್ಲಿ ಬ್ಯಾಟ್‌ ಬೀಸಿದ್ದರು. ದೇಶೀಯ ಟೂರ್ನಿಯಲ್ಲಿ ಉತ್ತರ ಪ್ರದೇಶ ತಂಡವನ್ನು ಪ್ರತಿನಿಧಿಸಿರುವ ರೈನಾ, ಇನ್ಮುಂದೆ ಭಾರತದ ಕ್ರಿಕೆಟ್ ಅಂಗಳದಲ್ಲಿ ಬ್ಯಾಟ್ ಹಿಡಿದು ಕಣಕ್ಕಿಳಿಯುವುದಿಲ್ಲ.

ಸುಮಾರು 13 ವರ್ಷಗಳ ಕಾಲ ಅಂತರರಾಷ್ಟ್ರೀಯ ಪಂದ್ಯಗಳನ್ನ ಆಡಿರುವ ಸುರೇಶ್ ರೈನಾ, 18 ಟೆಸ್ಟ್​, 226 ಏಕದಿನ ಪಂದ್ಯ ಹಾಗೂ 78 ಟಿ20 ಪಂದ್ಯಗಳನ್ನ ಆಡಿದ್ದಾರೆ. ಕೆಲ ಪಂದ್ಯಗಳಲ್ಲಿ ನಾಯಕನಾಗಿ ಟೀಮ್ ಇಂಡಿಯಾವನ್ನು ಮುನ್ನೆಡೆಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಗರಿಷ್ಠ ರನ್‌ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಒಬ್ಬರಾಗಿರುವ ರೈನಾರನ್ನು ಕಳೆದ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಕೈಬಿಟ್ಟಿತ್ತು. ಹರಾಜು ಪ್ರಕ್ರಿಯೆಯಲ್ಲಿ ಅನ್​ಸೋಲ್ಡ್​ ಆಗಿದ್ದರು.

ಸುರೇಶ್‌ ರೈನಾ ಪ್ರಸ್ತುತ ಭಾರತದ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಕಾರಣ ವಿದೇಶದ ಟಿ20 ಲೀಗ್‌ಗಳಲ್ಲಿ ಆಡಲು ಅರ್ಹರಾಗಿದ್ದಾರೆ. ಹೀಗಾಗಿ ದೇಶದ ಹೊರಗೆ ವಿದೇಶದ ಲೀಗ್‌ಗಳಲ್ಲಿ ಸುರೇಶ್‌ ರೈನಾ ಕಣಕ್ಕಿಳಿಯವು ಸಾಧ್ಯತೆ ಇದೆ ಎನ್ನಲಾಗಿದೆ.

 

andolana

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

5 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

8 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

8 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

8 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

9 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

9 hours ago