ಕ್ರೀಡೆ

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸುರೇಶ್‌ ರೈನಾ

ಟೀಮ್ ಇಂಡಿಯಾ ಮಾಜಿ ಆಟಗಾರ ಸುರೇಶ್ ರೈನಾ ಭಾರತದ ಎಲ್ಲ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಪಡೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ರೈನಾ, ”ನನ್ನ ದೇಶ ಮತ್ತು ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸಿರುವುದಕ್ಕೆ ಗೌರವವಿದೆ. ನಾನು ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಗೆ ನಿವೃತ್ತಿ ಘೋಷಿಸಲು ಬಯಸುತ್ತೇನೆ. ಬಿಸಿಸಿಐ, ಯುಪಿ ಕ್ರಿಕೆಟ್, ಸಿಎಸ್​ಕೆ, ರಾಜೀವ್ ಶುಕ್ಲಾ ಹಾಗೂ ನನಗೆ ಬೆಂಬಲ ನೀಡಿದ ಎಲ್ಲ ಅಭಿಮಾನಿಗಳಿಗೆ, ಸ್ನೇಹಿತರಿಗೆ ಧನ್ಯವಾದ ಹೇಳಲು ಇಚ್ಚಿಸುತ್ತೇನೆ,” ಎಂದು ಬರೆದುಕೊಂಡಿದ್ದಾರೆ.

ಈ ಮೂಲಕ ರೈನಾ ಇನ್ನುಮುಂದೆ ಐಪಿಎಲ್ ಹಾಗೂ ದೇಶೀಯ ಕ್ರಿಕೆಟ್​ನಲ್ಲಿ ಕಾಣಿಸುವುದಿಲ್ಲ. 2020ರಲ್ಲಿ ಸ್ವಾತಂತ್ರ್ಯ ದಿನ ಆಗಸ್ಟ್‌ 15 ರಂದು ಎಂ.ಎಸ್‌ ಧೋನಿ ಜೊತೆಗೆ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ್ದರು. ಇದೀಗ ಭಾರತದ ಎಲ್ಲ ಮಾದರಿಯ ಕ್ರಿಕೆಟ್​ನಿಂದ ಮಿಸ್ಟರ್ ಐಪಿಎಲ್ ಹಿಂದೆ ಸರಿದಿದ್ದಾರೆ. ವಿದೇಶಿ ಲೀಗ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಮಾತಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 5000 ರನ್‌ಗಳ ಗಡಿ ದಾಟಿದ ಮೊದಲ ಬ್ಯಾಟರ್‌ ಎಂಬ ಹೆಗ್ಗಳಿಕೆ ಹೊಂದಿರುವ ಸುರೇಶ್‌ ರೈನಾ, ಈವರೆಗೆ ಆಡಿದ 205 ಪಂದ್ಯಗಳಿಂದ 5528 ಎನ್‌ಗಳನ್ನು ಬಾರಿಸಿದ್ದಾರೆ. 136.7ರ ಅದ್ಭುತ ಸ್ಟ್ರೈಕ್‌ರೇಟ್‌ ಹೊಂದಿರುವ ಅವರು 32.5ರ ಅಮೋಘ ಸರಾಸರಿಯಲ್ಲಿ ಬ್ಯಾಟ್‌ ಬೀಸಿದ್ದರು. ದೇಶೀಯ ಟೂರ್ನಿಯಲ್ಲಿ ಉತ್ತರ ಪ್ರದೇಶ ತಂಡವನ್ನು ಪ್ರತಿನಿಧಿಸಿರುವ ರೈನಾ, ಇನ್ಮುಂದೆ ಭಾರತದ ಕ್ರಿಕೆಟ್ ಅಂಗಳದಲ್ಲಿ ಬ್ಯಾಟ್ ಹಿಡಿದು ಕಣಕ್ಕಿಳಿಯುವುದಿಲ್ಲ.

ಸುಮಾರು 13 ವರ್ಷಗಳ ಕಾಲ ಅಂತರರಾಷ್ಟ್ರೀಯ ಪಂದ್ಯಗಳನ್ನ ಆಡಿರುವ ಸುರೇಶ್ ರೈನಾ, 18 ಟೆಸ್ಟ್​, 226 ಏಕದಿನ ಪಂದ್ಯ ಹಾಗೂ 78 ಟಿ20 ಪಂದ್ಯಗಳನ್ನ ಆಡಿದ್ದಾರೆ. ಕೆಲ ಪಂದ್ಯಗಳಲ್ಲಿ ನಾಯಕನಾಗಿ ಟೀಮ್ ಇಂಡಿಯಾವನ್ನು ಮುನ್ನೆಡೆಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಗರಿಷ್ಠ ರನ್‌ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಒಬ್ಬರಾಗಿರುವ ರೈನಾರನ್ನು ಕಳೆದ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಕೈಬಿಟ್ಟಿತ್ತು. ಹರಾಜು ಪ್ರಕ್ರಿಯೆಯಲ್ಲಿ ಅನ್​ಸೋಲ್ಡ್​ ಆಗಿದ್ದರು.

ಸುರೇಶ್‌ ರೈನಾ ಪ್ರಸ್ತುತ ಭಾರತದ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಕಾರಣ ವಿದೇಶದ ಟಿ20 ಲೀಗ್‌ಗಳಲ್ಲಿ ಆಡಲು ಅರ್ಹರಾಗಿದ್ದಾರೆ. ಹೀಗಾಗಿ ದೇಶದ ಹೊರಗೆ ವಿದೇಶದ ಲೀಗ್‌ಗಳಲ್ಲಿ ಸುರೇಶ್‌ ರೈನಾ ಕಣಕ್ಕಿಳಿಯವು ಸಾಧ್ಯತೆ ಇದೆ ಎನ್ನಲಾಗಿದೆ.

 

andolana

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago