ಕ್ರೀಡೆ

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸುರೇಶ್‌ ರೈನಾ

ಟೀಮ್ ಇಂಡಿಯಾ ಮಾಜಿ ಆಟಗಾರ ಸುರೇಶ್ ರೈನಾ ಭಾರತದ ಎಲ್ಲ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಪಡೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ರೈನಾ, ”ನನ್ನ ದೇಶ ಮತ್ತು ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸಿರುವುದಕ್ಕೆ ಗೌರವವಿದೆ. ನಾನು ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಗೆ ನಿವೃತ್ತಿ ಘೋಷಿಸಲು ಬಯಸುತ್ತೇನೆ. ಬಿಸಿಸಿಐ, ಯುಪಿ ಕ್ರಿಕೆಟ್, ಸಿಎಸ್​ಕೆ, ರಾಜೀವ್ ಶುಕ್ಲಾ ಹಾಗೂ ನನಗೆ ಬೆಂಬಲ ನೀಡಿದ ಎಲ್ಲ ಅಭಿಮಾನಿಗಳಿಗೆ, ಸ್ನೇಹಿತರಿಗೆ ಧನ್ಯವಾದ ಹೇಳಲು ಇಚ್ಚಿಸುತ್ತೇನೆ,” ಎಂದು ಬರೆದುಕೊಂಡಿದ್ದಾರೆ.

ಈ ಮೂಲಕ ರೈನಾ ಇನ್ನುಮುಂದೆ ಐಪಿಎಲ್ ಹಾಗೂ ದೇಶೀಯ ಕ್ರಿಕೆಟ್​ನಲ್ಲಿ ಕಾಣಿಸುವುದಿಲ್ಲ. 2020ರಲ್ಲಿ ಸ್ವಾತಂತ್ರ್ಯ ದಿನ ಆಗಸ್ಟ್‌ 15 ರಂದು ಎಂ.ಎಸ್‌ ಧೋನಿ ಜೊತೆಗೆ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ್ದರು. ಇದೀಗ ಭಾರತದ ಎಲ್ಲ ಮಾದರಿಯ ಕ್ರಿಕೆಟ್​ನಿಂದ ಮಿಸ್ಟರ್ ಐಪಿಎಲ್ ಹಿಂದೆ ಸರಿದಿದ್ದಾರೆ. ವಿದೇಶಿ ಲೀಗ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಮಾತಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 5000 ರನ್‌ಗಳ ಗಡಿ ದಾಟಿದ ಮೊದಲ ಬ್ಯಾಟರ್‌ ಎಂಬ ಹೆಗ್ಗಳಿಕೆ ಹೊಂದಿರುವ ಸುರೇಶ್‌ ರೈನಾ, ಈವರೆಗೆ ಆಡಿದ 205 ಪಂದ್ಯಗಳಿಂದ 5528 ಎನ್‌ಗಳನ್ನು ಬಾರಿಸಿದ್ದಾರೆ. 136.7ರ ಅದ್ಭುತ ಸ್ಟ್ರೈಕ್‌ರೇಟ್‌ ಹೊಂದಿರುವ ಅವರು 32.5ರ ಅಮೋಘ ಸರಾಸರಿಯಲ್ಲಿ ಬ್ಯಾಟ್‌ ಬೀಸಿದ್ದರು. ದೇಶೀಯ ಟೂರ್ನಿಯಲ್ಲಿ ಉತ್ತರ ಪ್ರದೇಶ ತಂಡವನ್ನು ಪ್ರತಿನಿಧಿಸಿರುವ ರೈನಾ, ಇನ್ಮುಂದೆ ಭಾರತದ ಕ್ರಿಕೆಟ್ ಅಂಗಳದಲ್ಲಿ ಬ್ಯಾಟ್ ಹಿಡಿದು ಕಣಕ್ಕಿಳಿಯುವುದಿಲ್ಲ.

ಸುಮಾರು 13 ವರ್ಷಗಳ ಕಾಲ ಅಂತರರಾಷ್ಟ್ರೀಯ ಪಂದ್ಯಗಳನ್ನ ಆಡಿರುವ ಸುರೇಶ್ ರೈನಾ, 18 ಟೆಸ್ಟ್​, 226 ಏಕದಿನ ಪಂದ್ಯ ಹಾಗೂ 78 ಟಿ20 ಪಂದ್ಯಗಳನ್ನ ಆಡಿದ್ದಾರೆ. ಕೆಲ ಪಂದ್ಯಗಳಲ್ಲಿ ನಾಯಕನಾಗಿ ಟೀಮ್ ಇಂಡಿಯಾವನ್ನು ಮುನ್ನೆಡೆಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಗರಿಷ್ಠ ರನ್‌ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಒಬ್ಬರಾಗಿರುವ ರೈನಾರನ್ನು ಕಳೆದ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಕೈಬಿಟ್ಟಿತ್ತು. ಹರಾಜು ಪ್ರಕ್ರಿಯೆಯಲ್ಲಿ ಅನ್​ಸೋಲ್ಡ್​ ಆಗಿದ್ದರು.

ಸುರೇಶ್‌ ರೈನಾ ಪ್ರಸ್ತುತ ಭಾರತದ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಕಾರಣ ವಿದೇಶದ ಟಿ20 ಲೀಗ್‌ಗಳಲ್ಲಿ ಆಡಲು ಅರ್ಹರಾಗಿದ್ದಾರೆ. ಹೀಗಾಗಿ ದೇಶದ ಹೊರಗೆ ವಿದೇಶದ ಲೀಗ್‌ಗಳಲ್ಲಿ ಸುರೇಶ್‌ ರೈನಾ ಕಣಕ್ಕಿಳಿಯವು ಸಾಧ್ಯತೆ ಇದೆ ಎನ್ನಲಾಗಿದೆ.

 

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

12 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

12 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

12 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

12 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

12 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago