ಕ್ರೀಡೆ

ಸೂರ್ಯ ಸ್ಪೋಟಕ ಬ್ಯಾಟಿಂಗ್‌ ಅಬ್ಬರಕ್ಕೆ ಮಂಕಾದ ವಿಂಡೀಸ್‌: ಭಾರತಕ್ಕೆ ಭರ್ಜರಿ ಜಯ!

ಗಯಾನ: ಕುಲ್ದೀಪ್‌ ಯಾದವ್‌ (28ಕ್ಕೆ 3) ಸ್ಪಿನ್‌ ಮೋಡಿ ಹಾಗೂ ಸೂರ್ಯಕುಮಾರ್‌ ಯಾದವ್‌ (83 ರನ್‌) ಸ್ಪೋಟಕ ಬ್ಯಾಟಿಂಗ್‌ ಬಲದಿಂದ ಭಾರತ ತಂಡ, ಮೂರನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಐದು ಪಂದ್ಯಗಳ ಟಿ20 ಸರಣಿಯನ್ನು ಜೀವಂತವಾಗಿರಿಸಿಕೊಂಡಿದೆ.

ಆರಂಭಿಕ ಎರಡೂ ಪಂದ್ಯಗಳಲ್ಲಿ ಸೋತಿದ್ದ ಭಾರತ ತಂಡಕ್ಕೆ ಮೂರನೇ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿತ್ತು. ಅದರಂತೆ ಗೆದ್ದು ಟಿ20 ಸರಣಿಯಲ್ಲಿ 1-2 ಅಂತರವನ್ನು ಕಾಯ್ದುಕೊಂಡಿದೆ. ಇಲ್ಲಿನ ಪ್ರಾವಿಡೆನ್ಸ್‌ ಸ್ಟೇಡಿಯಂನಲ್ಲಿ ವೆಸ್ಟ್ ಇಂಡೀಸ್‌ ನೀಡಿದ್ದ 160 ರನ ಗುರಿ ಹಿಂಬಾಲಿಸಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿರಲಿಲ್ಲ.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಯಶಸ್ವಿ ಜೈಸ್ವಾಲ್‌ ಕೇವಲ ಒಂದು ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರೆ, ಮತ್ತೊಬ್ಬ ಆರಂಭಿಕ ಶುಭಮನ್ ಗಿಲ್‌ ಕೂಡ ಕೇವಲ 6 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಆದರೆ, ಮೂರನೇ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶನ ತೋರಿದ ಸೂರ್ಯಕುಮಾರ್‌ ಯಾದವ್, ವಿಂಡೀಸ್‌ ಬೌಲರ್‌ಗಳಿಗೆ ಚಳಿ ಜ್ವರ ಬಿಡಿಸಿದರು. ಇವರು ಎದುರಿಸಿದ ಕೇವಲ 44 ಎಸೆತಗಳಲ್ಲಿ 4 ಸಿಕ್ಸರ್‌ ಹಾಗೂ 10 ಬೌಂಡರಿಗಳೊಂದಿಗೆ 83 ರನ್‌ ಚಚ್ಚಿದರು ಹಾಗೂ ತಿಲಕ್ ವರ್ಮಾ ಜೊತೆ 87 ರನ್‌ ಜೊತೆಯಾಟವನ್ನು ಆಡಿದರು. ಆ ಮೂಲಕ ಭಾರತ ತಂಡವನ್ನು ಗೆಲುವಿನ ಸನಿಹ ತಂದು ಸೂರ್ಯ ವಿಕೆಟ್‌ ಒಪ್ಪಿಸಿದರು.

ಒಂದು ತುದಿಯಲ್ಲಿ ಸನ್ನಿವೇಶಕ್ಕೆ ತಕ್ಕಂತೆ ಬ್ಯಾಟ್‌ ಮಾಡಿದ ತಿಲಕ್‌ ವರ್ಮಾ 37 ಎಸೆತಗಳಲ್ಲಿ ಒಂದು ಸಿಕ್ಸರ್‌ ಹಾಗೂ 4 ಬೌಂಡರಿಗಳೊಂದಿಗೆ ಅಜೇಯ 49 ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಕೊನೆಯಲ್ಲಿ ನಾಯಕ ಹಾರ್ದಿಕ್‌ ಪಾಂಡ್ಯ ಅಜೇಯ 20 ರನ್‌ ಗಳಿಸಿದರು. ಅಂತಿಮವಾಗಿ ಭಾರತ ತಂಡ 17.5 ಓವರ್‌ಗಳಿಗೆ 3 ವಿಕೆಟ್‌ ನಷ್ಟಕ್ಕೆ 164 ರನ್‌ಗಳನ್ನು ಗಳಿಸಿ ಗೆಲುವು ಪಡೆಯಿತು. ವಿಂಡೀಸ್‌ ಪರ ಆಲ್ಜಾರಿ ಜೋಸೆಫ್‌ 2 ವಿಕೆಟ್‌ ಪಡೆದರು.

ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ವೆಸ್ಟ್ ಇಂಡೀಸ್‌ ತಂಡ ಬ್ರ್ಯಾಂಡನ್‌ ಕಿಂಗ್‌ (42 ರನ್‌) ಹಾಗೂ ರೋವ್ಮನ್‌ ಪೊವೆಲ್‌ (40*) ಅವರ ಸ್ಪೋಟಕ ಬ್ಯಾಟಿಂಗ್‌ ಬಲದಿಂದ ತನ್ನ ಪಾಲಿನ 20 ಓವರ್‌ಗಳಿಗೆ 5 ವಿಕೆಟ್‌ಗಳ ನಷ್ಟಕ್ಕೆ 159 ರನ್‌ಗಳನ್ನು ಕಲೆ ಹಾಕಿತ್ತು. ಆ ಮೂಲಕ ಭಾರತ ತಂಡಕ್ಕೆ 160 ರನ್‌ ಗುರಿ ನೀಡಿತ್ತು. ಭಾರತದ ಪರ ಅತ್ಯುತ್ತಮ ಬೌಲಿಂಗ್‌ ಪ್ರದರ್ಶನ ತೋರಿದ್ದ ಕುಲ್ದೀಪ್‌ ಯಾದವ್‌ 28 ರನ್‌ ನೀಡಿ 3 ವಿಕೆಟ್‌ಗಳನ್ನು ಕಿತ್ತರು.

ಸ್ಕೋರ್‌ ವಿವರ

ಭಾರತ: 17.5 ಓವರ್‌ಗಳಿಗೆ 164-3 (ಸೂರ್ಯಕುಮಾರ್‌ ಯಾದವ್‌ 83, ತಿಲಕ್‌ ವರ್ಮಾ 49*, ಹಾರ್ದಿಕ್‌ ಪಾಂಡ್ಯ 20*; ಆಲ್ಝಾರಿ ಜೋಸೆಫ್‌ 25ಕ್ಕೆ 2

ಪಂದ್ಯ ಶ್ರೇಷ್ಠ : ಸೂರ್ಯಕುಮಾರ್‌ ಯಾದವ್‌

andolanait

Recent Posts

ಓದುಗರ ಪತ್ರ: ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಿ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…

6 mins ago

ಚಾ. ಬೆಟ್ಟಕ್ಕೆ ಗಂಡಾಂತರ ತರುವ ಕಟ್ಟಡಗಳ ನಿರ್ಮಾಣ ನಿಲ್ಲಿಸಿ

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…

17 mins ago

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

41 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

59 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

3 hours ago